/newsfirstlive-kannada/media/post_attachments/wp-content/uploads/2024/11/GURU_PRASAD_PHOTO.jpg)
ಬೆಂಗಳೂರು: ಸ್ಯಾಂಡಲ್​ವುಡ್​ಗೆ ಮಠ, ಎದ್ದೇಳು ಮಂಜುನಾಥನಂತಹ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ. ನಗರದ ಮಾದನಾಯಕನಹಳ್ಳಿ ಅಪಾರ್ಟ್​ಮೆಂಟ್​ ಒಂದರಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.
ಕನ್ನಡ ಚಿತ್ರರಂಗದ​ಲ್ಲಿ ಬರಹಗಾರ, ನಿರ್ಮಾಪಕ, ನಟ, ನಿರ್ದೇಶಕರಾಗಿದ್ದ ಗುರುಪ್ರಸಾದ್ (52) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ಮಾದನಾಯಕನಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಮೃತದೇಹ ಪತ್ತೆ ಆಗಿದೆ. ಮೃತದೇಹ ಕೊಳೆತು ಹೋಗಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
/newsfirstlive-kannada/media/post_attachments/wp-content/uploads/2024/11/GURU_PRASAD_NEW.jpg)
ಗುರುಪ್ರಸಾದ್ ಅವರು ನವೆಂಬರ್ 2 ಅಂದರೆ ನಿನ್ನೆ ಹುಟ್ಟು ಹಬ್ಬಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಇದಕ್ಕೂ ಮೊದಲೇ ಅವರ ಮೃತದೇಹ ಪತ್ತೆ ಆಗಿದೆ. ಅವರು ಸಾವನ್ನಪ್ಪಿ ಇಂದಿಗೆ 8 ರಿಂದ 10 ದಿನಗಳು ಆಗಿರಬಹುದು ಎಂದು ಹೇಳಲಾಗುತ್ತಿದೆ. ಗುರುಪ್ರಸಾದ್ ಅವರು ಕನ್ನಡದ ಶೋ ಬಿಗ್ ಬಾಸ್​ನಲ್ಲಿ ಕೆಲ ವರ್ಷಗಳ ಹಿಂದೆ ಸ್ಪರ್ಧಿ ಆಗಿದ್ದರು. ಇದೀಗ ಗುರು ಪ್ರಸಾದ್ ಇಲ್ಲ ಎನ್ನುವುದು ಸಿನಿಪ್ರಿಯರಿಗೆ ಸಿಡಿಲು ಬಡಿದಂತೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us