newsfirstkannada.com

ನೇಹಾ ಕೊಲೆಗೆ ನಟ ರಚಿತಾ ರಾಮ್​ ಗರಂ.. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ ಎಂದ ಡಿಂಪಲ್​ ಕ್ವೀನ್​

Share :

Published April 20, 2024 at 12:35pm

Update April 20, 2024 at 9:51pm

    ನೇಹಾ ಕೊಲೆಯನ್ನು ಖಂಡಿಸಿದ ಸ್ಯಾಂಡಲ್​ವುಡ್​ ತಾರೆಯರು

    ನ್ಯಾಯಕ್ಕಾಗಿ ಮೊರೆ ಇಟ್ಟ ಡಿಂಪಲ್​ ಕ್ವೀನ್​ ಮತ್ತು ನಟ ಧ್ರುವ ಸರ್ಜಾ

    ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ ಎಂದ ರಚಿತಾ ರಾಮ್​

ಬದುಕಿ ಬಾಳಬೇಕಾಗಿದ್ದ 23 ವರ್ಷದ ನೇಹಾ ಸ್ನೇಹಿತ ಫಯಾಜ್​ ಕೈಯಾರೆ ಸಾವನ್ನಪ್ಪಿದ್ದಾಳೆ. ಕಾಲೇಜು ಆವರಣದಲ್ಲೇ ಉಸಿರುಚೆಲ್ಲಿದ್ದಾಳೆ. ಈಕೆ ಸಾವಿಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಚಿತಾ ರಾಮ್​ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇಹಾ ಫೋಟೋ ಹಂಚುವ ಮೂಲಕ ನ್ಯಾಯಕ್ಕಾಗಿ ಕೂಗೆತ್ತಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್​ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ #Wewantjustice ಎಂದು ಇನ್​​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

 

 

View this post on Instagram

 

A post shared by Rachitaa Ram (@rachita_instaofficial)

ಇದನ್ನೂ ಓದಿ: ಉಪ್ಪು ತಿಂದವನು ನೀರು ಕುಡಿಯಲೇ ಬೇಕು.. ಫಯಾಜ್​ ಶಿಕ್ಷೆಯ ಬಗ್ಗೆ ತಾಯಿ ಮುಮ್ತಾಜ್​ ಏನಂದ್ರು?

 

ನಟ ಧ್ರುವ ಸರ್ಜಾ ಕೂಡ ನೇಹಾ ಹತ್ಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್​ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಹಾ ಕೊಲೆಗೆ ನಟ ರಚಿತಾ ರಾಮ್​ ಗರಂ.. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ ಎಂದ ಡಿಂಪಲ್​ ಕ್ವೀನ್​

https://newsfirstlive.com/wp-content/uploads/2024/04/Rchita-ram.jpg

    ನೇಹಾ ಕೊಲೆಯನ್ನು ಖಂಡಿಸಿದ ಸ್ಯಾಂಡಲ್​ವುಡ್​ ತಾರೆಯರು

    ನ್ಯಾಯಕ್ಕಾಗಿ ಮೊರೆ ಇಟ್ಟ ಡಿಂಪಲ್​ ಕ್ವೀನ್​ ಮತ್ತು ನಟ ಧ್ರುವ ಸರ್ಜಾ

    ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ ಎಂದ ರಚಿತಾ ರಾಮ್​

ಬದುಕಿ ಬಾಳಬೇಕಾಗಿದ್ದ 23 ವರ್ಷದ ನೇಹಾ ಸ್ನೇಹಿತ ಫಯಾಜ್​ ಕೈಯಾರೆ ಸಾವನ್ನಪ್ಪಿದ್ದಾಳೆ. ಕಾಲೇಜು ಆವರಣದಲ್ಲೇ ಉಸಿರುಚೆಲ್ಲಿದ್ದಾಳೆ. ಈಕೆ ಸಾವಿಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಚಿತಾ ರಾಮ್​ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇಹಾ ಫೋಟೋ ಹಂಚುವ ಮೂಲಕ ನ್ಯಾಯಕ್ಕಾಗಿ ಕೂಗೆತ್ತಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್​ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ #Wewantjustice ಎಂದು ಇನ್​​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

 

 

View this post on Instagram

 

A post shared by Rachitaa Ram (@rachita_instaofficial)

ಇದನ್ನೂ ಓದಿ: ಉಪ್ಪು ತಿಂದವನು ನೀರು ಕುಡಿಯಲೇ ಬೇಕು.. ಫಯಾಜ್​ ಶಿಕ್ಷೆಯ ಬಗ್ಗೆ ತಾಯಿ ಮುಮ್ತಾಜ್​ ಏನಂದ್ರು?

 

ನಟ ಧ್ರುವ ಸರ್ಜಾ ಕೂಡ ನೇಹಾ ಹತ್ಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್​ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More