newsfirstkannada.com

ಆರ್​​ಸಿಬಿ ಸೇರ್ತೀನಿ ಎಂದ ಬೆನ್ನಲ್ಲೇ ಕನ್ನಡಿಗ ರಾಹುಲ್​ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ

Share :

Published May 15, 2024 at 7:57pm

Update May 15, 2024 at 8:08pm

    ಹೈದರಾಬಾದ್​ ವಿರುದ್ಧ ಲಕ್ನೋ ತಂಡಕ್ಕೆ ಹೀನಾಯ ಸೋಲು!

    ಕ್ಯಾಪ್ಟನ್​​ ರಾಹುಲ್​​ ಮೇಲೆ ಲಕ್ನೋ ಟೀಮ್​ ಮಾಲೀಕ ಕೂಗಾಟ

    ಫ್ಯಾನ್ಸ್​ ಆಕ್ರೋಶ ಬೆನ್ನಲೇ ಕ್ಷಮೆ ಕೇಳಿದ ಸಂಜೀವ್​​ ಗೋಯೆಂಕಾ

ಕಳೆದ ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​​​ ಹೀನಾಯವಾಗಿ ಸೋಲನ್ನಪ್ಪಿತ್ತು.

ಟಾಸ್​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ ಲಕ್ನೋ ಸೂಪರ್​ ಜೈಂಟ್ಸ್​​ ನಿಗದಿತ 20 ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್​ರೈಸರ್ಸ್​​ ಹೈದರಾಬಾದ್​ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್​​ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.

ಹೈದರಾಬಾದ್​​ ಪರ ಅಗ್ರೆಸ್ಸಿವ್​ ಬ್ಯಾಟಿಂಗ್​ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್​​, 8 ಫೋರ್​ ಸಮೇತ 89 ರನ್​ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್​ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್​ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.

ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್​ ರೂಮ್​ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್​​ ಕೆ.ಎಲ್​​ ರಾಹುಲ್​ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ‌ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್​​ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಕೆ.ಎಲ್​ ರಾಹುಲ್​ ಕ್ಷಮೆ ಕೇಳಿದ ಗೋಯೆಂಕಾ

ಇನ್ನು, ಮಾಜಿ ಕ್ರಿಕೆಟರ್ಸ್​​ ಮತ್ತು ಫ್ಯಾನ್ಸ್​ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಎಚ್ಚೆತ್ತ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್​ ರಾಹುಲ್​ ಕ್ಷಮೆ ಕೇಳಿದ್ದಾರೆ. ನನ್ನಿಂದ ತಪ್ಪಾಗಿದ್ರೆ ದಯವಿಟ್ಟು ಕ್ಷಮಿಸಿ. ಅಭಿಮಾನಿಗಳು, ಸಪೋರ್ಟಿಂಗ್​ ಸ್ಟ್ಯಾಫ್​​ ಮತ್ತು ಕೆ.ಎಲ್​ ರಾಹುಲ್​ಗೆ ಕ್ಷಮೆ ಕೇಳುತ್ತೇನೆ ಎಂದು ವಿಡಿಯೋ ಮಾಡಿದ್ದಾರೆ. ಅದರಲ್ಲೂ ರಾಹುಲ್​ ಲಕ್ನೋ ತೊರೆದು ಆರ್​ಸಿಬಿ ಸೇರಲಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿರುವ ಹೊತ್ತಲ್ಲೇ ಈ ಘಟನೆ ನಡೆದಿದೆ.

ಇದನ್ನೂ ಓದಿ: ‘ಎಷ್ಟು ಕೋಟಿಯಾದ್ರೂ ಆಗಲಿ ಕೆ.ಎಲ್​​ ರಾಹುಲ್​​​ ಆರ್​​ಸಿಬಿಗೆ ಬರಲೇಬೇಕು’- ಏನಿದು ಹೊಸ ಸ್ಟೋರಿ?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಆರ್​​ಸಿಬಿ ಸೇರ್ತೀನಿ ಎಂದ ಬೆನ್ನಲ್ಲೇ ಕನ್ನಡಿಗ ರಾಹುಲ್​ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ

https://newsfirstlive.com/wp-content/uploads/2024/05/KL-Rahul-next-captain.jpg

    ಹೈದರಾಬಾದ್​ ವಿರುದ್ಧ ಲಕ್ನೋ ತಂಡಕ್ಕೆ ಹೀನಾಯ ಸೋಲು!

    ಕ್ಯಾಪ್ಟನ್​​ ರಾಹುಲ್​​ ಮೇಲೆ ಲಕ್ನೋ ಟೀಮ್​ ಮಾಲೀಕ ಕೂಗಾಟ

    ಫ್ಯಾನ್ಸ್​ ಆಕ್ರೋಶ ಬೆನ್ನಲೇ ಕ್ಷಮೆ ಕೇಳಿದ ಸಂಜೀವ್​​ ಗೋಯೆಂಕಾ

ಕಳೆದ ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​​​ ಹೀನಾಯವಾಗಿ ಸೋಲನ್ನಪ್ಪಿತ್ತು.

ಟಾಸ್​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ ಲಕ್ನೋ ಸೂಪರ್​ ಜೈಂಟ್ಸ್​​ ನಿಗದಿತ 20 ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್​ರೈಸರ್ಸ್​​ ಹೈದರಾಬಾದ್​ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್​​ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.

ಹೈದರಾಬಾದ್​​ ಪರ ಅಗ್ರೆಸ್ಸಿವ್​ ಬ್ಯಾಟಿಂಗ್​ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್​​, 8 ಫೋರ್​ ಸಮೇತ 89 ರನ್​ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್​ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್​ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.

ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್​ ರೂಮ್​ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್​​ ಕೆ.ಎಲ್​​ ರಾಹುಲ್​ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ‌ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್​​ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಕೆ.ಎಲ್​ ರಾಹುಲ್​ ಕ್ಷಮೆ ಕೇಳಿದ ಗೋಯೆಂಕಾ

ಇನ್ನು, ಮಾಜಿ ಕ್ರಿಕೆಟರ್ಸ್​​ ಮತ್ತು ಫ್ಯಾನ್ಸ್​ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಎಚ್ಚೆತ್ತ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್​ ರಾಹುಲ್​ ಕ್ಷಮೆ ಕೇಳಿದ್ದಾರೆ. ನನ್ನಿಂದ ತಪ್ಪಾಗಿದ್ರೆ ದಯವಿಟ್ಟು ಕ್ಷಮಿಸಿ. ಅಭಿಮಾನಿಗಳು, ಸಪೋರ್ಟಿಂಗ್​ ಸ್ಟ್ಯಾಫ್​​ ಮತ್ತು ಕೆ.ಎಲ್​ ರಾಹುಲ್​ಗೆ ಕ್ಷಮೆ ಕೇಳುತ್ತೇನೆ ಎಂದು ವಿಡಿಯೋ ಮಾಡಿದ್ದಾರೆ. ಅದರಲ್ಲೂ ರಾಹುಲ್​ ಲಕ್ನೋ ತೊರೆದು ಆರ್​ಸಿಬಿ ಸೇರಲಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿರುವ ಹೊತ್ತಲ್ಲೇ ಈ ಘಟನೆ ನಡೆದಿದೆ.

ಇದನ್ನೂ ಓದಿ: ‘ಎಷ್ಟು ಕೋಟಿಯಾದ್ರೂ ಆಗಲಿ ಕೆ.ಎಲ್​​ ರಾಹುಲ್​​​ ಆರ್​​ಸಿಬಿಗೆ ಬರಲೇಬೇಕು’- ಏನಿದು ಹೊಸ ಸ್ಟೋರಿ?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More