ಇಂದು ಟೀಮ್ ಇಂಡಿಯಾ, ಶ್ರೀಲಂಕಾ ತಂಡದ ಮಧ್ಯೆ ರೋಚಕ ಪಂದ್ಯ
ಕೊನೆಯ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಕಣಕ್ಕೆ
ಅವಕಾಶ ಸಿಕ್ಕರೂ ಮತ್ತೆ ಬ್ಯಾಟಿಂಗ್ನಲ್ಲಿ ಸ್ಟಾರ್ ಆಟಗಾರನ ವೈಫಲ್ಯ..!
ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಎರಡು ಟಿ20 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಟಿ20 ಸರಣಿಯನ್ನು ಗೆದ್ದಿದೆ.
3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಸೀರೀಸ್ ಗೆದ್ದಿದ್ದು, ಇಂದು ಕೊನೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಸದ್ಯ ಮಳೆ ನಿಂತಿದ್ದು, ಟಾಸ್ ಗೆದ್ದ ಶ್ರೀಲಂಕಾ ಕ್ಯಾಪ್ಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಹಾಗಾಗಿ ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡಿದೆ. ಅಲ್ಲದೇ ಕೇವಲ 20 ಓವರ್ನಲ್ಲಿ 9 ವಿಕೆಟ್ಗೆ 137 ರನ್ ಕಲೆ ಸಾಧಾರಣ ಗುರಿ ನೀಡಿದೆ.
ಸಂಜು ಮತ್ತೆ ಫೇಲ್ಯೂರ್..!
ಇನ್ನು, ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಇಂದು ಟೀಮ್ ಇಂಡಿಯಾ, ಶ್ರೀಲಂಕಾ ತಂಡದ ಮಧ್ಯೆ ರೋಚಕ ಪಂದ್ಯ
ಕೊನೆಯ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಕಣಕ್ಕೆ
ಅವಕಾಶ ಸಿಕ್ಕರೂ ಮತ್ತೆ ಬ್ಯಾಟಿಂಗ್ನಲ್ಲಿ ಸ್ಟಾರ್ ಆಟಗಾರನ ವೈಫಲ್ಯ..!
ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಎರಡು ಟಿ20 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಟಿ20 ಸರಣಿಯನ್ನು ಗೆದ್ದಿದೆ.
3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಸೀರೀಸ್ ಗೆದ್ದಿದ್ದು, ಇಂದು ಕೊನೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಸದ್ಯ ಮಳೆ ನಿಂತಿದ್ದು, ಟಾಸ್ ಗೆದ್ದ ಶ್ರೀಲಂಕಾ ಕ್ಯಾಪ್ಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಹಾಗಾಗಿ ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡಿದೆ. ಅಲ್ಲದೇ ಕೇವಲ 20 ಓವರ್ನಲ್ಲಿ 9 ವಿಕೆಟ್ಗೆ 137 ರನ್ ಕಲೆ ಸಾಧಾರಣ ಗುರಿ ನೀಡಿದೆ.
ಸಂಜು ಮತ್ತೆ ಫೇಲ್ಯೂರ್..!
ಇನ್ನು, ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್