ಇಂದು ಟೀಮ್ ಇಂಡಿಯಾ, ಐರ್ಲೆಂಡ್ ಮಧ್ಯೆ ರೋಚಕ ಪಂದ್ಯ
ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ಗೆ ದೊಡ್ಡ ಆತಂಕ..!
ಪಂತ್, ಸ್ಯಾಮ್ಸನ್ ಇಬ್ಬರಲ್ಲಿ ಯಾರಿಗೆ ಸ್ಥಾನ? ಅನ್ನೋದೆ ಪ್ರಶ್ನೆ
ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಶುರುವಾಗಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಅಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ಗೆ ಎಲ್ಲರೂ ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
ಇಂದು ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಐರ್ಲೆಂಡ್ ತಂಡಗಳು ಮುಖಾಮುಖಿ ಆಗಲಿವೆ. ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯ ರೋಚಕವಾಗಿರಲಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ದೊಡ್ಡ ಆತಂಕ ಶುರುವಾಗಿದೆ.
ಯೆಸ್, ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಟಿ20 ವಿಶ್ವಕಪ್ಗೆ ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಇಬ್ಬರನ್ನು ವಿಕೆಟ್ ಕೀಪರ್ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್ ರೋಹಿತ್ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.
ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಗಿಂತ ಪಂತ್ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.
ರಸ್ತೆ ಅಪಘಾತದ ಬಳಿಕ ಬರೋಬ್ಬರಿ 18 ತಿಂಗಳ ನಂತರ ಪಂತ್ ಸಂಪೂರ್ಣ ಫಿಟ್ ಆಗಿ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಐಪಿಎಲ್ 2024ರಲ್ಲಿ ಪಂತ್ ಬ್ಯಾಟಿಂಗ್ನಲ್ಲಿ ಮಿಂಚಿದ್ದಾರೆ. ಪಂತ್ ಈ ಬಾರಿ ಐಪಿಎಲ್ನಲ್ಲಿ 13 ಪಂದ್ಯಗಳಲ್ಲಿ 446 ರನ್ ಗಳಿಸಿದ್ದರು.
ಇನ್ನೊಂದೆಡೆ ರಾಜಸ್ಥಾನ್ ತಂಡದ ನಾಯಕನಾಗಿ ಸಂಜು ಸ್ಯಾಮ್ಸನ್ ತಂಡವನ್ನು ಮುನ್ನಡೆಸಿದ್ರು. ಐಪಿಎಲ್ನಲ್ಲಿ ಸಂಜು ವಿಕೆಟ್ ಕೀಪರ್ ಮತ್ತು ಬ್ಯಾಟರ್ ಆಗಿ ಯಶಸ್ವಿಯಾಗಿದ್ದಾರೆ. ಈ ಐಪಿಎಲ್ ಋತುವಿನಲ್ಲಿ ತಾನು ಆಡಿರೋ 15 ಪಂದ್ಯಗಳಲ್ಲಿ 531 ರನ್ ಗಳಿಸಿದ್ದರು. ಆದರೆ ವಿದೇಶಿ ನೆಲದಲ್ಲಿ ಪಂತ್ ಮೊದಲಿನಿಂದಲೂ ಆಕ್ರಮಣಕಾರಿ ಬ್ಯಾಟರ್ ಆಗಿರೋ ಕಾರಣ ಇವರಿಗೆ ವಿಕೆಟ್ ಕೀಪರ್ ಸ್ಥಾನ ಸಿಗಬಹುದು ಅನ್ನೋದಂತೂ ಸತ್ಯ.
ಇದನ್ನೂ ಓದಿ: ಇಂದಿನ ಟೀಮ್ ಇಂಡಿಯಾ, ಐರ್ಲೆಂಡ್ ಪಂದ್ಯ ದಿಢೀರ್ ರದ್ದು? ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಟೀಮ್ ಇಂಡಿಯಾ, ಐರ್ಲೆಂಡ್ ಮಧ್ಯೆ ರೋಚಕ ಪಂದ್ಯ
ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ಗೆ ದೊಡ್ಡ ಆತಂಕ..!
ಪಂತ್, ಸ್ಯಾಮ್ಸನ್ ಇಬ್ಬರಲ್ಲಿ ಯಾರಿಗೆ ಸ್ಥಾನ? ಅನ್ನೋದೆ ಪ್ರಶ್ನೆ
ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಶುರುವಾಗಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಅಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ಗೆ ಎಲ್ಲರೂ ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
ಇಂದು ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಐರ್ಲೆಂಡ್ ತಂಡಗಳು ಮುಖಾಮುಖಿ ಆಗಲಿವೆ. ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯ ರೋಚಕವಾಗಿರಲಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾಗೆ ದೊಡ್ಡ ಆತಂಕ ಶುರುವಾಗಿದೆ.
ಯೆಸ್, ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಟಿ20 ವಿಶ್ವಕಪ್ಗೆ ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಇಬ್ಬರನ್ನು ವಿಕೆಟ್ ಕೀಪರ್ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್ ರೋಹಿತ್ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.
ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಗಿಂತ ಪಂತ್ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.
ರಸ್ತೆ ಅಪಘಾತದ ಬಳಿಕ ಬರೋಬ್ಬರಿ 18 ತಿಂಗಳ ನಂತರ ಪಂತ್ ಸಂಪೂರ್ಣ ಫಿಟ್ ಆಗಿ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಐಪಿಎಲ್ 2024ರಲ್ಲಿ ಪಂತ್ ಬ್ಯಾಟಿಂಗ್ನಲ್ಲಿ ಮಿಂಚಿದ್ದಾರೆ. ಪಂತ್ ಈ ಬಾರಿ ಐಪಿಎಲ್ನಲ್ಲಿ 13 ಪಂದ್ಯಗಳಲ್ಲಿ 446 ರನ್ ಗಳಿಸಿದ್ದರು.
ಇನ್ನೊಂದೆಡೆ ರಾಜಸ್ಥಾನ್ ತಂಡದ ನಾಯಕನಾಗಿ ಸಂಜು ಸ್ಯಾಮ್ಸನ್ ತಂಡವನ್ನು ಮುನ್ನಡೆಸಿದ್ರು. ಐಪಿಎಲ್ನಲ್ಲಿ ಸಂಜು ವಿಕೆಟ್ ಕೀಪರ್ ಮತ್ತು ಬ್ಯಾಟರ್ ಆಗಿ ಯಶಸ್ವಿಯಾಗಿದ್ದಾರೆ. ಈ ಐಪಿಎಲ್ ಋತುವಿನಲ್ಲಿ ತಾನು ಆಡಿರೋ 15 ಪಂದ್ಯಗಳಲ್ಲಿ 531 ರನ್ ಗಳಿಸಿದ್ದರು. ಆದರೆ ವಿದೇಶಿ ನೆಲದಲ್ಲಿ ಪಂತ್ ಮೊದಲಿನಿಂದಲೂ ಆಕ್ರಮಣಕಾರಿ ಬ್ಯಾಟರ್ ಆಗಿರೋ ಕಾರಣ ಇವರಿಗೆ ವಿಕೆಟ್ ಕೀಪರ್ ಸ್ಥಾನ ಸಿಗಬಹುದು ಅನ್ನೋದಂತೂ ಸತ್ಯ.
ಇದನ್ನೂ ಓದಿ: ಇಂದಿನ ಟೀಮ್ ಇಂಡಿಯಾ, ಐರ್ಲೆಂಡ್ ಪಂದ್ಯ ದಿಢೀರ್ ರದ್ದು? ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ