ಅಕ್ಟೋಬರ್ 5ನೇ ತಾರೀಕಿನಿಂದ ಶುರುವಾಗಲಿದೆ 2023 ವಿಶ್ವಕಪ್
ವಿಶ್ವಕಪ್ ಟೂರ್ನಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; ಯಾರಿಗೆ ಚಾನ್ಸ್?
ಸಂಜು ಸ್ಯಾಮ್ಸನ್ಗೆ ಪದೇ ಪದೇ ಬಿಸಿಸಿಐ ಮೋಸ ಮಾಡ್ತಿರೋದ್ಯಾಕೆ?
ಮುಂದಿನ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆಡಬೇಕು ಎಂದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಕನಸು ಭಗ್ನವಾಗಿದೆ. ಸದ್ಯ ವಿಶ್ವಕಪ್ಗೆ ಬಲಿಷ್ಠ ಟೀಂ ಇಂಡಿಯಾ ಅನೌನ್ಸ್ ಆಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬಿಸಿಸಿಐ ರಾಜಕೀಯ ಮಾಡುತ್ತಿದೆ ಎಂದು ಸಂಜು ಸ್ಯಾಮ್ಸನ್ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಈಗ ನಡೆಯುತ್ತಿರೋ ಏಷ್ಯಾಕಪ್ ಟೂರ್ನಿಗೂ ಸಂಜು ಸ್ಯಾಮ್ಸನ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿಲ್ಲ. ಬದಲಿಗೆ ಸ್ಟ್ಯಾಂಡ್ ಬೈ ಪಟ್ಟಿಯಲ್ಲಿ ಮಾತ್ರ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕೊನೆಗೂ ಕನ್ನಡಿಗ ಕೆ.ಎಲ್ ರಾಹುಲ್ ಆರೋಗ್ಯ ಸಂಪೂರ್ಣ ಸುಧಾರಿಸಿದ್ದು, ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದಾರೆ. ವಿಶ್ವಕಪ್ ತಂಡದಲ್ಲೂ ಕೆ.ಎಲ್ ರಾಹುಲ್ಗೆ ಚಾನ್ಸ್ ಸಿಕ್ಕಿದ್ದೂ, ಸಂಜು ಸ್ಯಾಮ್ಸನ್ಗೆ ಅವಕಾಶ ಕೈ ತಪ್ಪಿದೆ.
ಬಲಿಷ್ಠ ಟೀಂ ಇಂಡಿಯಾ ಅನೌನ್ಸ್!
2023 ವಿಶ್ವಕಪ್ ಟೂರ್ನಿಯೂ ಅಕ್ಟೋಬರ್ 5ನೇ ತಾರೀಕಿನಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಶ್ರೀಲಂಕಾಕ್ಕೆ ತೆರಳಿ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಆಡಳಿತ ಮಂಡಳಿ ಜತೆ ಚರ್ಚಿಸಿ ಬಲಿಷ್ಠ ತಂಡವನ್ನು ಅನೌನ್ಸ್ ಮಾಡಿದ್ದಾರೆ.
ಈ ಹಿಂದೆ ಏಷ್ಯಾಕಪ್ ಟೂರ್ನಿಗೆ 17 ಸದಸ್ಯರನ್ನು ಒಳಗೊಂಡ ಭಾರತ ತಂಡ ಪ್ರಕಟ ಆಗಿತ್ತು. ತಂಡದಲ್ಲಿ ಸ್ಟ್ಯಾಂಡ್ ಬೈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ನೀಡಲಾಗಿತ್ತು. ವಿಶ್ವಕಪ್ ಟೂರ್ನಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ ಕೆ.ಎಲ್ ರಾಹುಲ್ ಫಿಟ್ ಆದ ಕಾರಣ ಸ್ಯಾಮ್ಸನ್ಗೆ ಅವಕಾಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಕ್ಟೋಬರ್ 5ನೇ ತಾರೀಕಿನಿಂದ ಶುರುವಾಗಲಿದೆ 2023 ವಿಶ್ವಕಪ್
ವಿಶ್ವಕಪ್ ಟೂರ್ನಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; ಯಾರಿಗೆ ಚಾನ್ಸ್?
ಸಂಜು ಸ್ಯಾಮ್ಸನ್ಗೆ ಪದೇ ಪದೇ ಬಿಸಿಸಿಐ ಮೋಸ ಮಾಡ್ತಿರೋದ್ಯಾಕೆ?
ಮುಂದಿನ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆಡಬೇಕು ಎಂದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಕನಸು ಭಗ್ನವಾಗಿದೆ. ಸದ್ಯ ವಿಶ್ವಕಪ್ಗೆ ಬಲಿಷ್ಠ ಟೀಂ ಇಂಡಿಯಾ ಅನೌನ್ಸ್ ಆಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬಿಸಿಸಿಐ ರಾಜಕೀಯ ಮಾಡುತ್ತಿದೆ ಎಂದು ಸಂಜು ಸ್ಯಾಮ್ಸನ್ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಈಗ ನಡೆಯುತ್ತಿರೋ ಏಷ್ಯಾಕಪ್ ಟೂರ್ನಿಗೂ ಸಂಜು ಸ್ಯಾಮ್ಸನ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿಲ್ಲ. ಬದಲಿಗೆ ಸ್ಟ್ಯಾಂಡ್ ಬೈ ಪಟ್ಟಿಯಲ್ಲಿ ಮಾತ್ರ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕೊನೆಗೂ ಕನ್ನಡಿಗ ಕೆ.ಎಲ್ ರಾಹುಲ್ ಆರೋಗ್ಯ ಸಂಪೂರ್ಣ ಸುಧಾರಿಸಿದ್ದು, ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದಾರೆ. ವಿಶ್ವಕಪ್ ತಂಡದಲ್ಲೂ ಕೆ.ಎಲ್ ರಾಹುಲ್ಗೆ ಚಾನ್ಸ್ ಸಿಕ್ಕಿದ್ದೂ, ಸಂಜು ಸ್ಯಾಮ್ಸನ್ಗೆ ಅವಕಾಶ ಕೈ ತಪ್ಪಿದೆ.
ಬಲಿಷ್ಠ ಟೀಂ ಇಂಡಿಯಾ ಅನೌನ್ಸ್!
2023 ವಿಶ್ವಕಪ್ ಟೂರ್ನಿಯೂ ಅಕ್ಟೋಬರ್ 5ನೇ ತಾರೀಕಿನಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಶ್ರೀಲಂಕಾಕ್ಕೆ ತೆರಳಿ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಆಡಳಿತ ಮಂಡಳಿ ಜತೆ ಚರ್ಚಿಸಿ ಬಲಿಷ್ಠ ತಂಡವನ್ನು ಅನೌನ್ಸ್ ಮಾಡಿದ್ದಾರೆ.
ಈ ಹಿಂದೆ ಏಷ್ಯಾಕಪ್ ಟೂರ್ನಿಗೆ 17 ಸದಸ್ಯರನ್ನು ಒಳಗೊಂಡ ಭಾರತ ತಂಡ ಪ್ರಕಟ ಆಗಿತ್ತು. ತಂಡದಲ್ಲಿ ಸ್ಟ್ಯಾಂಡ್ ಬೈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ನೀಡಲಾಗಿತ್ತು. ವಿಶ್ವಕಪ್ ಟೂರ್ನಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ ಕೆ.ಎಲ್ ರಾಹುಲ್ ಫಿಟ್ ಆದ ಕಾರಣ ಸ್ಯಾಮ್ಸನ್ಗೆ ಅವಕಾಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ