/newsfirstlive-kannada/media/post_attachments/wp-content/uploads/2024/06/Sanju-Samson_IND.jpg)
ನಾನು ರೆಡ್ ಬಾಲ್ ಕ್ರಿಕೆಟ್ನಲ್ಲೂ ಯಶಸ್ವಿಯಾಗಬಹುದು. ನನಗೆ ಕೇವಲ ವೈಟ್-ಬಾಲ್ ಕ್ರಿಕೆಟ್ಗೆ ಸೀಮಿತವಾಗಿರಲು ಇಷ್ಟವಿಲ್ಲ. ಭಾರತ ತಂಡಕ್ಕಾಗಿ ಟೆಸ್ಟ್ ಪಂದ್ಯ ಆಡಲು ಬಯಸುತ್ತೇನೆ. ನನ್ನನ್ನು ರೆಡ್ ಬಾಲ್ ಕ್ರಿಕೆಟ್ಗೆ ಕನ್ಸಿಡರ್ ಮಾಡಲಿದ್ದಾರೆ. ಹಾಗಾಗಿ ಹೆಚ್ಚಿನ ರಣಜಿ ಟ್ರೋಫಿ ಪಂದ್ಯಗಳನ್ನು ಆಡುವಂತೆ ನನಗೆ ಹೇಳಿದ್ದಾರೆ ಎಂದು ಟೀಮ್ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹೇಳಿದ್ದಾರೆ.
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ದಸರಾ ಹಬ್ಬದಂದು ರನ್ಗಳ ಹೊಳೆಯನ್ನೇ ಹರಿಸಿದ ಸಂಜು ಸ್ಯಾಮ್ಸನ್ 40 ಎಸೆತಗಳಲ್ಲಿ ಶತಕ ಸಿಡಿಸಿದ್ರು.
ಇನ್ನು, 236.17 ಸ್ಟ್ರೈಕ್ ರೇಟ್ನೊಂದಿಗೆ ರನ್ ಕಲೆ ಹಾಕಿದ ಸಂಜು ಸ್ಯಾಮ್ಸನ್ 47 ಎಸೆತಗಳಲ್ಲಿ 111 ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್ನಲ್ಲಿ 11 ಬೌಂಡರಿ, 8 ಸಿಕ್ಸರ್ ಸಿಡಿಸಿದರು. ಒಂದು ಓವರ್ನಲ್ಲಿ ಸತತ 4 ಬೌಂಡರಿ, ಇನ್ನೊಂದು ಓವರ್ನಲ್ಲಿ ಸತತ 5 ಸಿಕ್ಸರ್ ಬಾರಿಸಿದ್ದು ಇನ್ನಿಂಗ್ಸ್ನ ಮತ್ತೊಂದು ಹೈಲೈಟ್. ಈ ಬೆನ್ನಲ್ಲೇ ಬಿಸಿಸಿಐ ಸೆಲೆಕ್ಷನ್ ಕಮಿಟಿಗೆ ಸಂಜು ಸ್ಯಾಮ್ಸನ್ ದೊಡ್ಡ ಮೆಸೇಜ್ ಕಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನತ್ತ ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್ಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಸಿಗದಿದ್ದರೆ ಟಿ20 ಸರಣಿಗೆ ಆಯ್ಕೆಯಾಗುತ್ತಿದ್ದರು. ಕೆಲವೊಮ್ಮೆ ಟಿ20 ತಂಡದಿಂದ ದೂರ ಉಳಿಯುತ್ತಿದ್ದರು. ಆಗಾಗ ಮಾತ್ರ ಏಕದಿನ ತಂಡದಲ್ಲಿ ಅವಕಾಶ ಸಿಗುತ್ತಿತ್ತು. ಬಹುತೇಕ ಸಂದರ್ಭದಲ್ಲೂ ಬೆಂಚ್ ಕಾಯುತ್ತಿದ್ದರು. ಇದರ ಪರಿಣಾಮ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡಲು ಸಂಜುಗೆ ಸರಿಯಾದ ಅವಕಾಶ ಸಿಕ್ಕಿರಲಿಲ್ಲ. ಆದರೆ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಿಂದ ದೂರವಾದ ಮೇಲೆ ಸಂಜುಗೆ ಅವಕಾಶ ಸಿಗುತ್ತಿದೆ. ಹಾಗಾಗಿ ಬಾಂಗ್ಲಾದೇಶ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶತಕ ಹೊಡೆಯುವ ಮೂಲಕ ಸಂಜು ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಈಗ ಸಂಜು ಟೆಸ್ಟ್ ಕ್ರಿಕೆಟ್ನತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ:ಭಾರತ ಟೆಸ್ಟ್ ತಂಡಕ್ಕೆ ಸ್ಫೋಟಕ ಬ್ಯಾಟರ್ ಎಂಟ್ರಿ; ಟೀಮ್ ಇಂಡಿಯಾಗೆ ಬಂತು ಹಾರ್ಸ್ ಪವರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ