ಇಂದು 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ
ಮೆಗಾ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ, ಟೀಮ್ ಇಂಡಿಯಾ ಜಿದ್ದಾಜಿದ್ದಿ!
ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ಗೆ ಭಾರೀ ಆಘಾತ
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಈಗಾಗಲೇ ಶುರುವಾಗಿದೆ. ಇಂದು ಟೀಮ್ ಇಂಡಿಯಾ, ಪಾಕ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ನ್ಯೂಯಾರ್ಕ್ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯಲಿರೋ ಈ ರೋಚಕ ಪಂದ್ಯಕ್ಕೆ ಇಡೀ ವಿಶ್ವದ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ಸಂಜು ಸ್ಯಾಮ್ಸನ್ಗೆ ಆಘಾತ ಎದುರಾಗಿದೆ.
ಯೆಸ್, ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಟಿ20 ವಿಶ್ವಕಪ್ಗೆ ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಇಬ್ಬರನ್ನು ವಿಕೆಟ್ ಕೀಪರ್ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್ ರೋಹಿತ್ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.
ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ಗಿಂತ ಪಂತ್ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.
ಐರ್ಲೆಂಡ್ ವಿರುದ್ಧ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಿರಲಿಲ್ಲ. ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿತ್ತು. ಇಂದು ಕೂಡ ಅದೇ ತಂಡ ಮುಂದುವರಿಯಲಿದ್ದು, ಸ್ಯಾಮ್ಸನ್ಗೆ ಅವಕಾಶ ನೀಡುವುದು ಡೌಟ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಫ್ಯಾನ್ಸ್ಗೆ ಬಿಗ್ ಶಾಕ್.. ಭಾರತ, ಪಾಕ್ ನಡುವಿನ ಪಂದ್ಯ ರದ್ದು? ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಇಂದು 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ
ಮೆಗಾ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ, ಟೀಮ್ ಇಂಡಿಯಾ ಜಿದ್ದಾಜಿದ್ದಿ!
ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ಗೆ ಭಾರೀ ಆಘಾತ
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಈಗಾಗಲೇ ಶುರುವಾಗಿದೆ. ಇಂದು ಟೀಮ್ ಇಂಡಿಯಾ, ಪಾಕ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ನ್ಯೂಯಾರ್ಕ್ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯಲಿರೋ ಈ ರೋಚಕ ಪಂದ್ಯಕ್ಕೆ ಇಡೀ ವಿಶ್ವದ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ಸಂಜು ಸ್ಯಾಮ್ಸನ್ಗೆ ಆಘಾತ ಎದುರಾಗಿದೆ.
ಯೆಸ್, ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಟಿ20 ವಿಶ್ವಕಪ್ಗೆ ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಇಬ್ಬರನ್ನು ವಿಕೆಟ್ ಕೀಪರ್ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್ ರೋಹಿತ್ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.
ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ಗಿಂತ ಪಂತ್ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.
ಐರ್ಲೆಂಡ್ ವಿರುದ್ಧ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಿರಲಿಲ್ಲ. ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿತ್ತು. ಇಂದು ಕೂಡ ಅದೇ ತಂಡ ಮುಂದುವರಿಯಲಿದ್ದು, ಸ್ಯಾಮ್ಸನ್ಗೆ ಅವಕಾಶ ನೀಡುವುದು ಡೌಟ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಫ್ಯಾನ್ಸ್ಗೆ ಬಿಗ್ ಶಾಕ್.. ಭಾರತ, ಪಾಕ್ ನಡುವಿನ ಪಂದ್ಯ ರದ್ದು? ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ