/newsfirstlive-kannada/media/post_attachments/wp-content/uploads/2025/03/bng-wife-death.jpg)
ಬೆಂಗಳೂರು: ಸುಂದರ ಸಂಸಾರವದು. ಗಂಡನಿಗೆ ಸಾಪ್ಟ್ವೇರ್ ಕೆಲಸ. ಕೈ ತುಂಬಾ ಸಂಬಳ. ಹೆಂಡ್ತಿ ಕೂಡ ಡಿಗ್ರಿ ಮುಗಿಸಿ ಕೆಲಸಕ್ಕಾಗಿ ಹುಡುಕ್ತಿದ್ದ ಸ್ಫುರದ್ರೂಪಿ ಅವಳು. ಹೀಗಿದ್ದಾಗ ಹೆಂಡ್ತಿಯನ್ನ ಕೊಲೆ ಮಾಡಿ ಸೂಟ್ ಕೇಸ್ಗೆ ತುಂಬಿ ಪುಣೆಯಲ್ಲಿ ಅರೆಸ್ಟ್ ಆಗಿರೊ ಗಂಡನ ಕ್ರೈಂ ಸ್ಟೋರಿ ಇದು.
ಮೃತ ಮಹಿಳೆಯ ಹೆಸರು ಗೌರಿ ಅನಿಲ್ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಈಕೆ ಹೌಸ್ವೈಫ್ ಆಗಿದ್ದಳು. ಇನ್ನು ಈಕೆಯ ಪತಿ ಕೂಡ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದರು. ಆದ್ರೆ, ಈ ಸುಂದರ ದಂಪತಿ ಜೀವನದಲ್ಲಿ ಏನ್ ಆಯ್ತು ಅಂತ ಗೊತ್ತಿಲ್ಲ, ಕಿರಾತಕ ಪತಿರಾಯ ಮುದ್ದಾದ ಹೆಂಡ್ತಿಯನ್ನ ಭೀಕರವಾಗಿ ಕೊಲೆಗೈದು ಸೂಟ್ಕೇಸ್ಗೆ ತುಂಬಿದ್ದಾನೆ.
ಇದನ್ನೂ ಓದಿ: ಬೆಂಗಳೂರಲ್ಲಿ ಶ್ರದ್ಧಾ ಮಾದರಿಯ ಹತ್ಯೆ; ಮುದ್ದಾದ ಹೆಂಡತಿಯ ಕೊಂದು ಸೂಟ್ಕೇಸ್ಗೆ ತುಂಬಿದ ಟೆಕ್ಕಿ..
ಮಹಾರಾಷ್ಟ್ರ ಮೂಲದ ರಾಕೇಶ್, ಗೌರಿ ಅನಿಲ್ ಸಾಂಬೆಕರ್, ಎರಡು ವರ್ಷದ ಹಿಂದಷ್ಟೆ ಮದುವೆ ಆಗಿದ್ದರು. ಬದುಕು ಸಾಗಿಸಲು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ರು, ಪತಿ ರಾಕೇಶ್ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸವನ್ನು ಹುಡುಕುತ್ತಿದ್ದಳು. 1 ತಿಂಗಳ ಹಿಂದಷ್ಟೇ ಹುಳಿಮಾವು ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಹೀಗೆ ಸುಖ ಜೀವನ ನಡೆಸುತ್ತಿದ್ದರುವ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಈ ಗಲಾಟೆ ವಿರೋಪಕ್ಕೆ ತಿರುಗಿ ಬಳಿಕ ರಾಕೇಶ್ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆ ಕೊಯ್ದು ಸೂಟ್ಕೇಸ್ಗೆ ತುಂಬಿದ್ದಾನೆ.
ಪತ್ನಿಯನ್ನು ಕೊಲೆ ಮಾಡಿ ಅದನ್ನು ಸಾಗಿಸಲು ಸೂಟ್ಕೇಸ್ಗೆ ತುಂಬಿದ್ದ ರಾಕೇಶ್ಗೆ ಬಳಿಕ ಪಾಪಪ್ರಜ್ಞೆ ಕಾಡಿದೆ. ರಾತ್ರಿ 12.30 ರ ಸುಮಾರಿಗೆ ಒಬ್ಬನೆ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರ್ ಜೊತೆ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೂ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಕೊಲೆ ಮಾಡಿರುವ ವಿಷ್ಯ ತಿಳಿಸಿದ್ದಾನೆ. ಬಳಿಕ ಮಾಲೀಕರು ಮನೆ ಬಳಿ ಬಂದು ಕಂಟ್ರೋಲ್ ರೂಂಗೆ ಕರೆ ಮಾಡಿದ್ದಾರೆ. ಇನ್ನು, ಗೌರಿ ಮನೆಯವರೂ ಮುಂಬೈ ಪೊಲೀಸರಿಗೆ ವಿಷ್ಯ ಮುಟ್ಟಿಸಿದ್ದಾರೆ. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಸಂಜೆ 5:30ಕ್ಕೆ ನಮ್ಮ ಕಂಟ್ರೋಲ್ ರೂಂಗೆ ಹ್ಯಾಂಗಿಂಗ್ ಅಂತಾ ಮಾಹಿತಿ ಬರುತ್ತೆ. ಆಗ ಮನೆಗೆ ಬಂದು ಪರಿಶೀಲನೆ ಮಾಡಿದಾಗ ಬಾತ್ ರೂಂನಲ್ಲಿ ಸೂಟ್ ಕೇಸ್ ಪತ್ತೆಯಾಗಿತ್ತು. ನಮ್ಮ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮಹಿಳೆ ಇಡೀ ದೇಹ ಪತ್ತೆಯಾಯ್ತು. ಈ ಬಗ್ಗೆ ತನಿಖೆ ಮಾಡ್ತೀವಿ. ಈ ಇಬ್ಬರು ಮದುವೆ ಆಗಿ 2 ವರ್ಷ ಆಗಿದೆ. ಪತ್ನಿ ಮನೆಯಲ್ಲೇ ಇದ್ದರು. ಪತಿ ರಾಕೇಶ್ ಖಾಸಗಿ ಕಂಪನಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದ. ಈಗಾಗಲೇ ಆರೋಪಿ ಪತಿ ರಾಕೇಶ್ ಪುಣೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ಸಾರಾ ಫಾತಿಮಾ, ಡಿಸಿಪಿ ಆಗ್ನೇಯ ವಿಭಾಗ
ಕೊಲೆ ಮಾಡಿದ ಬಳಿಕ ಎಸ್ಕೇಪ್ ಆಗಿದ್ದ ಆರೋಪಿ ರಾಕೇಶ್ನನ್ನು ಸಿಡಿಆರ್ ಜಾಡು ಹಿಡಿದು ಪುಣೆಯ ಶಿರವಾಲ್ ಪೊಲೀಸರು ಬಂಧಿಸಿದ್ದಾರೆ. ಒಟ್ಟಾರೆ, ಗಂಡ ಹೆಂಡ್ತಿ ಅಂದ ಮೇಲೆ ನೂರು ವಿಚಾರ ಬರುತ್ತೆ ಹೋಗುತ್ತೆ. ಅಷ್ಟಕ್ಕೆ ಹೆಂಡ್ತಿ ಕೊಲೆ ಮಾಡಿ ಸೂಟ್ ಕೇಸ್ಗೆ ತುಂಬ್ತಾನಂದ್ರೆ ಟೆಕ್ಕಿ ಅದೆಂಥಾ ಕಟುಕು ಅನ್ನೋದು ಗೊತ್ತಾಗುತ್ತೆ. ಸದ್ಯ ಹುಳಿಮಾವು ಪೊಲೀಸರು ಆರೋಪಿ ರಾಕೇಶ್ನನ್ನು ಪುಣೆಯಿಂದ ಕರೆ ತರುತ್ತಿದ್ದು, ಕೊಲೆಯ ಹಿಂದಿನ ರಹಸ್ಯವನ್ನು ಪತ್ತೆ ಹಚ್ಚಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ