/newsfirstlive-kannada/media/post_attachments/wp-content/uploads/2025/06/sarigama.jpg)
ವೀಕ್ಷಕರ ನೆಚ್ಚಿನ ಶೋ ಮುಕ್ತಾಯ ಹಂತದಲ್ಲಿದೆ. ಇನ್ನೂ ಒಂದು ವಾರದಲ್ಲಿ ಸರಿಗಮಪ ಶೋ ಅಂತ್ಯವಾಗಲಿದೆ. ಇಷ್ಟು ದಿನ ಸ್ಪರ್ಧಿಗಳು ತಮ್ಮ ಹಾಡುಗಳ ಮೂಲಕವೇ ವೀಕ್ಷಕರ ಮನಸ್ಸಿಗೆ ಮುದ ನೀಡುತ್ತಿದ್ದರು. ಇದೀಗ ಟಾಪ್​ 6 ಸ್ಪರ್ಧಿಗಳಿಗೆ ಅಗ್ನಿ ಪರೀಕ್ಷೆ ಶುರುವಾಗಿದೆ.
/newsfirstlive-kannada/media/post_attachments/wp-content/uploads/2025/06/sarigamapa1.jpg)
ಹೌದು, ಸರಿಗಮಪ ವೇದಿಕೆಯಲ್ಲಿ ಪ್ರತಿಭೆಗಳ ಮಹಾ ಅನ್ವೇಷಣೆ ನಡೀತಿದೆ. ನಾಡಿನ ನಾನಾ ಭಾಗದ ಗಾನ ಕೋಗಿಲೆಗಳು ವೇದಿಕೆಗಾಗಿ ಹಂಬಲಿಸುತ್ತಾ ಅವಕಾಶ ಅರಸಿ ಬಂದವರು ಫಿನಾಲೆ ಹಂತಕ್ಕೆ ತಲುಪಿದ್ದಾರೆ. ಸರಿಗಮಪ ರಿಯಾಲಿಟಿ ಶೋ ಫಿನಾಲೆ ಹತ್ತಿರ ಬರುತ್ತಿದ್ದಂತೆ ವೀಕ್ಷಕರಲ್ಲಿ ಕುತೂಹಲ ಹೆಚ್ಚಾಗುತ್ತಿದೆ.
/newsfirstlive-kannada/media/post_attachments/wp-content/uploads/2025/06/sarigamapa.jpg)
ಅದರ ಜೊತೆಗೆ ಸ್ಪರ್ಧಿಗಳ ನಡುವಿನ ಕಠಿಣ ಪೈಪೋಟಿ ನಡೆಯುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು ಭಾಗವಹಿಸಿದ್ದರು. ಅವರಲ್ಲಿ ಬಾಳು ಬೆಳಗುಂದಿ, ದ್ಯಾಮೇಶ, ರಶ್ಮಿ ಡಿ, ಅಮೋಘ ವರ್ಷ, ಶಿವಾನಿ ಮತ್ತು ಆರಾಧ್ಯ ರಾವ್ ಆಯ್ಕೆಯಾಗಿದ್ದಾರೆ. ಈ ಆರು ಮಂದಿ ಅದ್ಭುತ ಹಾಡುಗಾರರು. ಈ ಆರು ಸ್ಪರ್ಧಿಗಳಲ್ಲಿ ಸರಿಗಮಪ ವಿನ್ನರ್​ ಪಟ್ಟ ಯಾರಿಗೆ ಸೇರಲಿದೆ ಎಂದು ಮುಂದಿನ ವಾರ ಗೊತ್ತಾಲಿದೆ. ಶನಿವಾರ ಹಾಗೂ ಭಾನುವಾರದ ಎಪಿಸೋಡ್​ನಲ್ಲಿ ಪ್ರೀ ಫಿನಾಲೆ ನಡೆದಿದೆ. ಅದರಲ್ಲೂ ಎಲ್ಲಾ ಸ್ಪರ್ಧಿಗಳು ಅದ್ಭುತವಾಗಿ ಹಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us