ಖಾಸಗಿ ಸಂಸ್ಥೆಗೆ ಸೇರಿದ ಶಾಲಾ ವಾಹನ ಪಲ್ಟಿ
40ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ: ಡಿಕೆಶಿ ಭೇಟಿ ಮಾಡಲು ದಿನಕರ್ ಜೊತೆ ಬಂದ ದರ್ಶನ್ ಪತ್ನಿ.. ಡಿಸಿಎಂ ಭೇಟಿಗೆ ಕಾದು ಕುಳಿತ ವಿಜಯಲಕ್ಷ್ಮೀ
ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ ಎಲ್ ಕೆಜಿಯಿಂದ 8ನೇ ತರಗತಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ವರದಕ್ಷಿಣೆ ಕಿರುಕುಳ.. 4 ತಿಂಗಳ ಗರ್ಭಿಣಿ ಸೊಸೆಯನ್ನು ಕೊಂದು ಸುಟ್ಟು ಹಾಕಿದ ಅತ್ತೆ-ಮಾವ
ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಖಾಸಗಿ ಸಂಸ್ಥೆಗೆ ಸೇರಿದ ಶಾಲಾ ವಾಹನ ಪಲ್ಟಿ
40ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ: ಡಿಕೆಶಿ ಭೇಟಿ ಮಾಡಲು ದಿನಕರ್ ಜೊತೆ ಬಂದ ದರ್ಶನ್ ಪತ್ನಿ.. ಡಿಸಿಎಂ ಭೇಟಿಗೆ ಕಾದು ಕುಳಿತ ವಿಜಯಲಕ್ಷ್ಮೀ
ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ ಎಲ್ ಕೆಜಿಯಿಂದ 8ನೇ ತರಗತಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ವರದಕ್ಷಿಣೆ ಕಿರುಕುಳ.. 4 ತಿಂಗಳ ಗರ್ಭಿಣಿ ಸೊಸೆಯನ್ನು ಕೊಂದು ಸುಟ್ಟು ಹಾಕಿದ ಅತ್ತೆ-ಮಾವ
ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ