ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು
ಡಿವೈಡರ್ ಟಚ್ ಆಗಿ ಪಕ್ಕದ ರಸ್ತೆಗೆ ಬಂದ ಸ್ಕಾರ್ಪಿಯೋ ಕಾರು
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ
ಬೆಂಗಳೂರು: ಚಾಲಕನ ಕಂಟ್ರೋಲ್ ತಪ್ಪಿದ ಸ್ಕಾರ್ಪಿಯೋ ಕಾರು ಡಿವೈಡರ್ಗೆ ಗುದ್ದಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಬನ್ನೇರುಘಟ್ಟ ನೈಸ್ ರಸ್ತೆಯ ಟೋಲ್ ಬಳಿ ನಡೆದಿದೆ. ದುರಂತದಲ್ಲಿ ಸ್ಕಾರ್ಪಿಯೋದಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ರಾಮನಗರ ಮೂಲದವರು ಎಂದು ತಿಳಿದು ಬಂದಿದೆ. ನಂಜೇಶ್(35), ವಿನೋದ್ (34) ಕುಮಾರ್(35) ಮೃತ ದುರ್ದೈವಿಗಳು.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ
ಅಪಘಾತಕ್ಕೀಡಾದ ಸ್ಕಾರ್ಪಿಯೋ ಕಾರು ಹೊಸೂರು ಕಡೆಯಿಂದ ಬರುತ್ತಿತ್ತು. ಮಹೇಂದ್ರ XUV 700 ಕಾರು ಮೈಸೂರು ರಸ್ತೆ ಕಡೆಯಿಂದ ಬರುತ್ತಿತ್ತು. ಈ ವೇಳೆ ಮಳೆಗೆ ಕಂಟ್ರೋಲ್ ತಪ್ಪಿ ಸ್ಕಾರ್ಪಿಯೋ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಮತ್ತೊಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಅಪಘಾತಕ್ಕೆ ಕಾರಣವೇನು?
ನೈಸ್ ರಸ್ತೆಯ ಭೀಕರ ಅಪಘಾತದ ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ ಹದ್ದಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಮಧ್ಯಾಹ್ನ 3.45ಕ್ಕೆ ನೈಸ್ ರಸ್ತೆ ಚನ್ನಸಂದ್ರ ಬ್ರಿಡ್ಜ್ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತ ಮೂವರು ಕೂಡ ಸ್ಕಾರ್ಪಿಯೋ ವಾಹನದಲ್ಲಿದ್ದರು. ಕನಕಪುರದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ವಿನೋದ್ ಎಂಬಾತ ಕಾರು ಚಾಲನೆ ಮಾಡುತ್ತಿದ್ದ. ವಿನೋದ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ಕಾರ್ಪಿಯೋ ಕಾರು ಡಿವೈಡರ್ ಟಚ್ ಆಗಿ ಪಕ್ಕದ ರಸ್ತೆಗೆ ಬಂದಿದೆ. ಬೆಂಗಳೂರಿನಿಂದ ಹೊಸೂರು ರಸ್ತೆ ಮಾರ್ಗವಾಗಿ ಹೋಗ್ತಿದ್ದ ಎಕ್ಸ್ ಯು ವಿ 700 ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರಿಗೂ ಗಾಯವಾಗಿದೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಕಾರು, ಲಾರಿ, ಬಸ್ ಮಧ್ಯೆ ಭಯಾನಕ ಡಿಕ್ಕಿ; ಘೋರ ದುರಂತ!
ಸ್ಕಾರ್ಪಿಯೋ ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಕಿಡ್ ಆಗಿದೆ. ಎದುರು ರಸ್ತೆಯಲ್ಲಿ ಬರ್ತಿದ್ದ XUV ಕಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು
ಡಿವೈಡರ್ ಟಚ್ ಆಗಿ ಪಕ್ಕದ ರಸ್ತೆಗೆ ಬಂದ ಸ್ಕಾರ್ಪಿಯೋ ಕಾರು
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ
ಬೆಂಗಳೂರು: ಚಾಲಕನ ಕಂಟ್ರೋಲ್ ತಪ್ಪಿದ ಸ್ಕಾರ್ಪಿಯೋ ಕಾರು ಡಿವೈಡರ್ಗೆ ಗುದ್ದಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಬನ್ನೇರುಘಟ್ಟ ನೈಸ್ ರಸ್ತೆಯ ಟೋಲ್ ಬಳಿ ನಡೆದಿದೆ. ದುರಂತದಲ್ಲಿ ಸ್ಕಾರ್ಪಿಯೋದಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ರಾಮನಗರ ಮೂಲದವರು ಎಂದು ತಿಳಿದು ಬಂದಿದೆ. ನಂಜೇಶ್(35), ವಿನೋದ್ (34) ಕುಮಾರ್(35) ಮೃತ ದುರ್ದೈವಿಗಳು.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ
ಅಪಘಾತಕ್ಕೀಡಾದ ಸ್ಕಾರ್ಪಿಯೋ ಕಾರು ಹೊಸೂರು ಕಡೆಯಿಂದ ಬರುತ್ತಿತ್ತು. ಮಹೇಂದ್ರ XUV 700 ಕಾರು ಮೈಸೂರು ರಸ್ತೆ ಕಡೆಯಿಂದ ಬರುತ್ತಿತ್ತು. ಈ ವೇಳೆ ಮಳೆಗೆ ಕಂಟ್ರೋಲ್ ತಪ್ಪಿ ಸ್ಕಾರ್ಪಿಯೋ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಮತ್ತೊಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಅಪಘಾತಕ್ಕೆ ಕಾರಣವೇನು?
ನೈಸ್ ರಸ್ತೆಯ ಭೀಕರ ಅಪಘಾತದ ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ ಹದ್ದಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಮಧ್ಯಾಹ್ನ 3.45ಕ್ಕೆ ನೈಸ್ ರಸ್ತೆ ಚನ್ನಸಂದ್ರ ಬ್ರಿಡ್ಜ್ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತ ಮೂವರು ಕೂಡ ಸ್ಕಾರ್ಪಿಯೋ ವಾಹನದಲ್ಲಿದ್ದರು. ಕನಕಪುರದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ವಿನೋದ್ ಎಂಬಾತ ಕಾರು ಚಾಲನೆ ಮಾಡುತ್ತಿದ್ದ. ವಿನೋದ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ಕಾರ್ಪಿಯೋ ಕಾರು ಡಿವೈಡರ್ ಟಚ್ ಆಗಿ ಪಕ್ಕದ ರಸ್ತೆಗೆ ಬಂದಿದೆ. ಬೆಂಗಳೂರಿನಿಂದ ಹೊಸೂರು ರಸ್ತೆ ಮಾರ್ಗವಾಗಿ ಹೋಗ್ತಿದ್ದ ಎಕ್ಸ್ ಯು ವಿ 700 ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರಿಗೂ ಗಾಯವಾಗಿದೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಕಾರು, ಲಾರಿ, ಬಸ್ ಮಧ್ಯೆ ಭಯಾನಕ ಡಿಕ್ಕಿ; ಘೋರ ದುರಂತ!
ಸ್ಕಾರ್ಪಿಯೋ ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಕಿಡ್ ಆಗಿದೆ. ಎದುರು ರಸ್ತೆಯಲ್ಲಿ ಬರ್ತಿದ್ದ XUV ಕಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ