newsfirstkannada.com

ರಸ್ತೆ ಬದಿ ನಿಂತಿದ್ದ ಮಹಿಳೆಗೆ ಭೀಕರವಾಗಿ ಡಿಕ್ಕಿ ಹೊಡೆದ ಕಾರು; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

Published January 13, 2024 at 3:46pm

Update January 13, 2024 at 3:59pm

    ಕಾರು ಚಾಲಕನ ನಿಯಂತ್ರಣ ತಪ್ಪಿ ನಡೆದ ಅಪಘಾತ ಇದು

    ಬೆಳ್ತಂಗಡಿ ಪೊಲೀಸ್​ ಠಾಣೆಗೆ ಬಂದು ಶರಣಾದ ಕಾರು ಚಾಲಕ

    ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಗಂಭೀರ ಗಾಯ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ. ಅಂಜಲಿ ಶೆಣೈ ಗಂಭೀರವಾಗಿ ಗಾಯಗೊಂಡ ಮಹಿಳೆ.

ರಸ್ತೆಯಲ್ಲಿ ಬರುತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಓಮಿನಿ ಕಾರಿನ ಬಳಿ ನಿಂತುಕೊಂಡಿದ್ದ ಮಹಿಳೆಗೆ ವೇಗವಾಗಿ ಬಂದು ಗುದ್ದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಅಲ್ಲೇ ಇದ್ದ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಳಿಕ ಬೆಳ್ತಂಗಡಿ ಪೊಲೀಸ್​ ಠಾಣೆಗೆ ಕಾರು ಚಾಲಕ ಬಂದು ಶರಣಾಗಿದ್ದಾನೆ. ಈ ಕೇಸ್​ ಸಂಬಂಧ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆ ಬದಿ ನಿಂತಿದ್ದ ಮಹಿಳೆಗೆ ಭೀಕರವಾಗಿ ಡಿಕ್ಕಿ ಹೊಡೆದ ಕಾರು; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2024/01/accident-95.jpg

    ಕಾರು ಚಾಲಕನ ನಿಯಂತ್ರಣ ತಪ್ಪಿ ನಡೆದ ಅಪಘಾತ ಇದು

    ಬೆಳ್ತಂಗಡಿ ಪೊಲೀಸ್​ ಠಾಣೆಗೆ ಬಂದು ಶರಣಾದ ಕಾರು ಚಾಲಕ

    ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಗಂಭೀರ ಗಾಯ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ. ಅಂಜಲಿ ಶೆಣೈ ಗಂಭೀರವಾಗಿ ಗಾಯಗೊಂಡ ಮಹಿಳೆ.

ರಸ್ತೆಯಲ್ಲಿ ಬರುತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಓಮಿನಿ ಕಾರಿನ ಬಳಿ ನಿಂತುಕೊಂಡಿದ್ದ ಮಹಿಳೆಗೆ ವೇಗವಾಗಿ ಬಂದು ಗುದ್ದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಅಲ್ಲೇ ಇದ್ದ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಳಿಕ ಬೆಳ್ತಂಗಡಿ ಪೊಲೀಸ್​ ಠಾಣೆಗೆ ಕಾರು ಚಾಲಕ ಬಂದು ಶರಣಾಗಿದ್ದಾನೆ. ಈ ಕೇಸ್​ ಸಂಬಂಧ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More