/newsfirstlive-kannada/media/post_attachments/wp-content/uploads/2024/11/Rudranna.jpg)
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿಯೇ SDA ಆ*ತ್ಮಹತ್ಯೆ ಮಾಡಿಕೊಂಡ ಅಚ್ಚರಿಯ ಘಟನೆ ನಡೆದಿದೆ. ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿಯೇ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ.
ಆ*ತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ರುದ್ರಣ್ಣ ಯಡವಣ್ಣ ಎಂದು ಗುರುತಿಸಲಾಗಿದೆ. ಕಚೇರಿಯ ಫ್ಯಾನ್ಗೆ ನೇಣು ಹಾಕಿಕೊಂಡು ಪ್ರಾಣಬಿಟ್ಟಿದ್ದಾರೆ.
[caption id="attachment_95411" align="alignnone" width="800"] ಆ*ತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವಣ್ಣ[/caption]
ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿ SDA ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನೇರವಾಗಿ ಬರೆಯುವ ಮೂಲಕ ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮದುವೆ ಕಾಗದ ಹಂಚಿ ಮನೆಗೆ ಬರುವ ವೇಳೆ ಹ*ತ್ಯೆ.. ನಡು ರಸ್ತೆಯಲ್ಲೇ ಬರ್ಬರವಾಗಿ ಕೊ*ಲೆಯಾದ ಕಾನ್ಸ್ಸ್ಟೇಬಲ್
ರುದ್ರಣ್ಣ ಸಾವಿಗೂ ಮುನ್ನ ವಾಟ್ಸ್ಆ್ಯಪ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಮತ್ತು ತಹಶೀಲ್ದಾರ್ ಹೆಸರು ಉಲ್ಲೇಖಿಸಿದ್ದಾರೆ. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ ಮತ್ತು ಸಚಿವೆಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸೋಮು ಕಾರಣ ಅಂತಾ ಬರೆದು ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ