/newsfirstlive-kannada/media/post_attachments/wp-content/uploads/2024/11/Rudranna.jpg)
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿಯೇ SDA ಆ*ತ್ಮಹತ್ಯೆ ಮಾಡಿಕೊಂಡ ಅಚ್ಚರಿಯ ಘಟನೆ ನಡೆದಿದೆ. ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿಯೇ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ.
ಆ*ತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ರುದ್ರಣ್ಣ ಯಡವಣ್ಣ ಎಂದು ಗುರುತಿಸಲಾಗಿದೆ. ಕಚೇರಿಯ ಫ್ಯಾನ್​ಗೆ ನೇಣು ಹಾಕಿಕೊಂಡು ಪ್ರಾಣಬಿಟ್ಟಿದ್ದಾರೆ.
[caption id="attachment_95411" align="alignnone" width="800"]
ಆ*ತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವಣ್ಣ[/caption]
ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿ SDA ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ನೇರವಾಗಿ ಬರೆಯುವ ಮೂಲಕ ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ.
ರುದ್ರಣ್ಣ ಸಾವಿಗೂ ಮುನ್ನ ವಾಟ್ಸ್​ಆ್ಯಪ್​ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಪಿಎ ಮತ್ತು ತಹಶೀಲ್ದಾರ್​ ಹೆಸರು ಉಲ್ಲೇಖಿಸಿದ್ದಾರೆ. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ ಮತ್ತು ಸಚಿವೆಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸೋಮು ಕಾರಣ ಅಂತಾ ಬರೆದು ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us