newsfirstkannada.com

ಒಬ್ಬಂಟಿಯಾಗಿ ಓಡಾಡೋ ಹೆಣ್ಮಕ್ಕಳೇ ಹುಷಾರ್.. ಬೆಂಗಳೂರಲ್ಲಿ ಓರ್ವ ಯುವತಿಗೆ ಏನಾಯ್ತು ಅಂದರೆ..

Share :

Published July 25, 2024 at 2:39pm

Update July 25, 2024 at 2:43pm

    ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿರುವ ಘಟನೆ

    ಪ್ರಜ್ಞೆತಪ್ಪಿ ಬಿದ್ದಿದ್ದ ಯುವತಿಗೆ ಎಚ್ಚರವಾದಾಗ ಕಾದಿತ್ತು ಶಾಕ್

    ಪೀಣ್ಯ ಪೊಲೀಸ್ರಿಂದ ಆರೋಪಿಗಳಿಗಾಗಿ ಹುಡುಕಾಟ..

ಬೆಂಗಳೂರು: ಹಾಡಹಗಲೇ ನಗರದ ಜಾಲಹಳ್ಳಿ ಕ್ರಾಸ್ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಆಗಿದೆ. ಬಸ್​​ಗಾಗಿ ಕಾಯುತ್ತಿದ್ದ ವೇಳೆ ಅಪಹರಣಕಾರರು ಕಾರಿನಲ್ಲಿ ಹೊತ್ತೊಯ್ದಿದ್ದಾರೆ.

ತುಮಕೂರಿನ ಕಾಲೇಜ್ ಒಂದರಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಯಲಹಂಕದಲ್ಲಿರುವ ಮಾವನ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಕಾಲೇಜ್​​ಗೆ ಹೋಗುವುದಾಗಿ ಹೇಳಿ, ಬಸ್ ನಿಲ್ದಾಣದವರೆಗೆ ಮಾವನ ಬಳಿ ಡ್ರಾಪ್ ಮಾಡಿಸಿಕೊಂಡಿದ್ದಳು.

ಪ್ರಜ್ಞೆತಪ್ಪಿ ಬಿದ್ದಿದ್ದಳು

ಜಾಲಹಳ್ಳಿ ಬಳಿ ತುಮಕೂರು ಬಸ್​ಗಾಗಿ ಕಾಯುತ್ತಿದ್ದಳು. ಈ ವೇಳೆ ಯುವತಿ ಬಳಿ ಇಬ್ಬರು ಯುವತಿಯರು ಬಂದಿದ್ದಾರೆ. ತಕ್ಷಣ ಯುವತಿಯ ಕೈಹಿಡಿದು ನಂತರ ಮುಖಕ್ಕೆ ಮಾಸ್ಕ್ ಹಿಡಿದಿದ್ದಾರೆ. ಆಗ ಪ್ರಜ್ಞೆತಪ್ಪಿ ಬಿದ್ದಿದ್ದಳು. ಮಧ್ಯಾಹ್ನ ಒಂದು ಗಂಟೆ ವೇಳೆಗೆ ಎಚ್ಚರಗೊಂಡಾಗ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ.

ಇದನ್ನೂ ಓದಿ:ನೆಹ್ರಾಗೆ ಗೇಟ್​ಪಾಸ್​..! ಗುಜರಾತ್ ಟೈಟನ್ಸ್​ಗೆ ಯುವರಾಜ್​​ ಸಿಂಗ್ ಎಂಟ್ರಿ..!

ಕಾರಿನಲ್ಲಿ ಇಬ್ಬರು ಯುವತಿಯರು ಸೇರಿ ಒಟ್ಟು ನಾಲ್ಕು ಜನ ಹುಡುಗರಿದ್ದ ಆರೋಪ ಇದೆ. ಯುವತಿಗೆ ಎಚ್ಚರವಾದಾಗ ಆರೋಪಿಗಳು ಗಾಡಿ ನಿಲ್ಲಿಸಿ ಟೀ ಕುಡಿಯುತ್ತಿದ್ದರು. ತಕ್ಷಣ ಕಾರಿನ ಡೋರ್ ಓಪನ್ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾಳೆ. ಬಳಿಕ ಆರೋಪಿಗಳು ವಿದ್ಯಾರ್ಥಿನಿಯನ್ನ ಹಿಂಬಾಲಿಸಿಕೊಂಡು ಬಂದಿದ್ದಾರೆ. ಕೊನೆಗೆ ಯುವತಿ ಸ್ಥಳೀಯರ ಬಳಿ ಇದು ಯಾವ ಊರು ಎಂದು ಕೇಳಿದ್ದಾಳೆ. ಸ್ಥಳೀಯರು ಇದು ಮೈಸೂರು ಎಂದು ತಿಳಿಸಿದ್ದಾರೆ. ಕೊನೆಗೆ ನಡೆದ ವಿಚಾರ ತಿಳಿಸಿದಾಗ ಅಲ್ಲಿದ್ದ ಸ್ಥಳೀಯರು ಸಹಾಯ ಮಾಡಿದ್ದಾರೆ.

ಅವರಿವರ ಸಹಾಯ ಪಡೆದು ಮೈಸೂರು ಬಸ್ ನಿಲ್ದಾಣಕ್ಕೆ ಬಂದ ನಂತರ ಯುವತಿ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ನಂತರ ಕುಟುಂಬಸ್ಥರ ಸಹಾಯದಿಂದ ಮೈಸೂರು ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರಿನನ್ವಯ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಜಾಲಹಳ್ಳಿ ಕ್ರಾಸ್ ನಿಂದ ಕಿಡ್ನಾಪ್ ಆದ ಹಿನ್ನೆಲೆ ಪ್ರಕರಣವನ್ನು ಪೀಣ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸ್ತಿದ್ದಾರೆ.

ಇದನ್ನೂ ಓದಿ:ಮಾಜಿ ಪತ್ನಿ ಫೋಟೋಗೆ ಕಾಮೆಂಟ್ ಮಾಡಿದ ಹಾರ್ದಿಕ್ ಪಾಂಡ್ಯ.. ಮತ್ತೆ ಒಂದಾಗ್ತಾರಾ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಬ್ಬಂಟಿಯಾಗಿ ಓಡಾಡೋ ಹೆಣ್ಮಕ್ಕಳೇ ಹುಷಾರ್.. ಬೆಂಗಳೂರಲ್ಲಿ ಓರ್ವ ಯುವತಿಗೆ ಏನಾಯ್ತು ಅಂದರೆ..

https://newsfirstlive.com/wp-content/uploads/2024/07/peenya.jpg

    ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿರುವ ಘಟನೆ

    ಪ್ರಜ್ಞೆತಪ್ಪಿ ಬಿದ್ದಿದ್ದ ಯುವತಿಗೆ ಎಚ್ಚರವಾದಾಗ ಕಾದಿತ್ತು ಶಾಕ್

    ಪೀಣ್ಯ ಪೊಲೀಸ್ರಿಂದ ಆರೋಪಿಗಳಿಗಾಗಿ ಹುಡುಕಾಟ..

ಬೆಂಗಳೂರು: ಹಾಡಹಗಲೇ ನಗರದ ಜಾಲಹಳ್ಳಿ ಕ್ರಾಸ್ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಆಗಿದೆ. ಬಸ್​​ಗಾಗಿ ಕಾಯುತ್ತಿದ್ದ ವೇಳೆ ಅಪಹರಣಕಾರರು ಕಾರಿನಲ್ಲಿ ಹೊತ್ತೊಯ್ದಿದ್ದಾರೆ.

ತುಮಕೂರಿನ ಕಾಲೇಜ್ ಒಂದರಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಯಲಹಂಕದಲ್ಲಿರುವ ಮಾವನ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಕಾಲೇಜ್​​ಗೆ ಹೋಗುವುದಾಗಿ ಹೇಳಿ, ಬಸ್ ನಿಲ್ದಾಣದವರೆಗೆ ಮಾವನ ಬಳಿ ಡ್ರಾಪ್ ಮಾಡಿಸಿಕೊಂಡಿದ್ದಳು.

ಪ್ರಜ್ಞೆತಪ್ಪಿ ಬಿದ್ದಿದ್ದಳು

ಜಾಲಹಳ್ಳಿ ಬಳಿ ತುಮಕೂರು ಬಸ್​ಗಾಗಿ ಕಾಯುತ್ತಿದ್ದಳು. ಈ ವೇಳೆ ಯುವತಿ ಬಳಿ ಇಬ್ಬರು ಯುವತಿಯರು ಬಂದಿದ್ದಾರೆ. ತಕ್ಷಣ ಯುವತಿಯ ಕೈಹಿಡಿದು ನಂತರ ಮುಖಕ್ಕೆ ಮಾಸ್ಕ್ ಹಿಡಿದಿದ್ದಾರೆ. ಆಗ ಪ್ರಜ್ಞೆತಪ್ಪಿ ಬಿದ್ದಿದ್ದಳು. ಮಧ್ಯಾಹ್ನ ಒಂದು ಗಂಟೆ ವೇಳೆಗೆ ಎಚ್ಚರಗೊಂಡಾಗ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ.

ಇದನ್ನೂ ಓದಿ:ನೆಹ್ರಾಗೆ ಗೇಟ್​ಪಾಸ್​..! ಗುಜರಾತ್ ಟೈಟನ್ಸ್​ಗೆ ಯುವರಾಜ್​​ ಸಿಂಗ್ ಎಂಟ್ರಿ..!

ಕಾರಿನಲ್ಲಿ ಇಬ್ಬರು ಯುವತಿಯರು ಸೇರಿ ಒಟ್ಟು ನಾಲ್ಕು ಜನ ಹುಡುಗರಿದ್ದ ಆರೋಪ ಇದೆ. ಯುವತಿಗೆ ಎಚ್ಚರವಾದಾಗ ಆರೋಪಿಗಳು ಗಾಡಿ ನಿಲ್ಲಿಸಿ ಟೀ ಕುಡಿಯುತ್ತಿದ್ದರು. ತಕ್ಷಣ ಕಾರಿನ ಡೋರ್ ಓಪನ್ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾಳೆ. ಬಳಿಕ ಆರೋಪಿಗಳು ವಿದ್ಯಾರ್ಥಿನಿಯನ್ನ ಹಿಂಬಾಲಿಸಿಕೊಂಡು ಬಂದಿದ್ದಾರೆ. ಕೊನೆಗೆ ಯುವತಿ ಸ್ಥಳೀಯರ ಬಳಿ ಇದು ಯಾವ ಊರು ಎಂದು ಕೇಳಿದ್ದಾಳೆ. ಸ್ಥಳೀಯರು ಇದು ಮೈಸೂರು ಎಂದು ತಿಳಿಸಿದ್ದಾರೆ. ಕೊನೆಗೆ ನಡೆದ ವಿಚಾರ ತಿಳಿಸಿದಾಗ ಅಲ್ಲಿದ್ದ ಸ್ಥಳೀಯರು ಸಹಾಯ ಮಾಡಿದ್ದಾರೆ.

ಅವರಿವರ ಸಹಾಯ ಪಡೆದು ಮೈಸೂರು ಬಸ್ ನಿಲ್ದಾಣಕ್ಕೆ ಬಂದ ನಂತರ ಯುವತಿ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ನಂತರ ಕುಟುಂಬಸ್ಥರ ಸಹಾಯದಿಂದ ಮೈಸೂರು ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರಿನನ್ವಯ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಜಾಲಹಳ್ಳಿ ಕ್ರಾಸ್ ನಿಂದ ಕಿಡ್ನಾಪ್ ಆದ ಹಿನ್ನೆಲೆ ಪ್ರಕರಣವನ್ನು ಪೀಣ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸ್ತಿದ್ದಾರೆ.

ಇದನ್ನೂ ಓದಿ:ಮಾಜಿ ಪತ್ನಿ ಫೋಟೋಗೆ ಕಾಮೆಂಟ್ ಮಾಡಿದ ಹಾರ್ದಿಕ್ ಪಾಂಡ್ಯ.. ಮತ್ತೆ ಒಂದಾಗ್ತಾರಾ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More