ಕಾಲೇಜು ಹಾಸ್ಟೆಲ್‌ನಲ್ಲಿ ದುರಂತ.. ಮೈಸೂರಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಆಗಿದ್ದೇನು?

author-image
Bheemappa
Updated On
ಕಾಲೇಜು ಹಾಸ್ಟೆಲ್‌ನಲ್ಲಿ ದುರಂತ.. ಮೈಸೂರಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಆಗಿದ್ದೇನು?
Advertisment
  • ಊಟದ ನಂತರ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು
  • ಮಗಳ ಅನಾರೋಗ್ಯ ವಿಚಾರ ಪೋಷಕರ ಗಮನಕ್ಕೆ ತರಲಿಲ್ವಾ?
  • ಪೋಷಕರು ನೋಡಲು ಬರುವುದಕ್ಕೂ ಮೊದಲೇ ಪುತ್ರಿ ಸಾವು

ಮೈಸೂರು: ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ! ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ದಿಢೀರ್​ ಶಾಕ್.. ಝೀಕಾ ವೈರಸ್ ಪತ್ತೆ ​

ಇದನ್ನೂ ಓದಿ:ಬ್ಯಾಂಕ್​ನಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್​.. ಕರ್ನಾಟಕದಲ್ಲೂ ಪೋಸ್ಟ್​ಗಳು ಖಾಲಿ ಖಾಲಿ, ಅಪ್ಲೇ ಮಾಡಿ

ಮಂಡ್ಯದ ನಾಗಮಂಗಲ ತಾಲೂಕಿನ ಜಯಪ್ರಾರ್ಥನ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಹೂಟಗಳ್ಳಿಯ ದಕ್ಷ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ದ್ವಿತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಊಟದ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಮಾಹಿತಿ ತಿಳಿದು ಆಡಳಿತ ಮಂಡಳಿ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆ. ಆದರೆ ಈ ವಿಷಯ ಆಕೆಯ ಪೋಷಕರಿಗೆ ತಿಳಿಸಿಲ್ಲ. ಇಂದು ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಸಲ ವಿಚಾರ ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಬರುವುದಕ್ಕಿಂತ ಮೊದಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

publive-image

ವಿದ್ಯಾರ್ಥಿನಿ ಮೃತಪಟ್ಟರು ಆಡಳಿತ ಮಂಡಳಿ ವಿಷಯ ತಡವಾಗಿ ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ನಮ್ಮ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment