ಮಾಜಿ ಸಚಿವ ಕೆ. ಗೋಪಾಲಯ್ಯಗೆ ಜೀವ ಬೆದರಿಕೆ
ಅಧಿವೇಶನದಲ್ಲೂ ಕೊಲೆ ಬೆದರಿಕೆ ವಿಷಯ ಪ್ರಸ್ತಾಪ
ಮಾಜಿ ಕಾರ್ಪೊರೇಟರ್ ಪದ್ಮರಾಜ್ ಬಂಧನ..!
ಬೆಂಗಳೂರು: ಬಸವೇಶ್ವರನಗರ ಮಾಜಿ ಕಾರ್ಪೊರೇಟರ್ ಪದ್ಮರಾಜ್, ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಮಾಜಿ ಸಚಿವ ಗೋಪಾಲಯ್ಯರಿಗೆ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣ ಕೊಡದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ಪದ್ಮರಾಜ್ ನಿಂದಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕಳೆದ ರಾತ್ರಿಯೇ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಪದ್ಮರಾಜ್ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭೆ ಕಲಾಪ ಆರಂಭದ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೋಪಾಲಯ್ಯ, ಪದ್ಮರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನನ್ನು ಗಡಿಪಾರು ಮಾಡಬೇಕು, ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸದನದಲ್ಲಿ ಒತ್ತಾಯಿಸಿದ್ರು.
ಇನ್ನು, ಸ್ಪೀಕರ್ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಂತೆ ಗೃಹಸಚಿವ ಪರಮೇಶ್ವರ್, ಪದ್ಮರಾಜ್ರನ್ನು ಬಂಧನ ಮಾಡಿರುವ ಮಾಹಿತಿ ಸಿಕ್ಕಿದೆ ಎಂದು ಸದನಕ್ಕೆ ಮಾಹಿತಿ ನೀಡಿದ್ರು. ಪದ್ಮರಾಜ್ನನ್ನು ಅರೆಸ್ಟ್ ಮಾಡಿದ ಪೊಲೀಸರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದ್ರು ವಿಚಾರಣೆ ನಡೆಸಿದ್ರು.
ಕೋರ್ಟ್ನಿಂದ ಪದ್ಮರಾಜ್ಗೆ ಜಾಮೀನು
ಬಳಿಕ 39ನೇ ಎಸಿಎಂಎಂ ನ್ಯಾಯಾಲಯಕ್ಕೆ ಪದ್ಮರಾಜ್ ನನ್ನ ಹಾಜರು ಪಡಿಸಿದ್ರು. ವಿಚಾರಣೆ ನಡೆಸಿದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಮಾಜಿ ಕಾರ್ಪೋರೇಟರ್ ಪದ್ಮರಾಜ್ಗೆ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ಮಾತನಾಡಿದ ಪದ್ಮರಾಜ್ ಆರ್.ಅಶೋಕ್ 1 ಕೋಟಿ ರೂಪಾಯಿ ಪಡೆದಿದ್ದಾರೆಂದು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾಜಿ ಸಚಿವ ಕೆ. ಗೋಪಾಲಯ್ಯಗೆ ಜೀವ ಬೆದರಿಕೆ
ಅಧಿವೇಶನದಲ್ಲೂ ಕೊಲೆ ಬೆದರಿಕೆ ವಿಷಯ ಪ್ರಸ್ತಾಪ
ಮಾಜಿ ಕಾರ್ಪೊರೇಟರ್ ಪದ್ಮರಾಜ್ ಬಂಧನ..!
ಬೆಂಗಳೂರು: ಬಸವೇಶ್ವರನಗರ ಮಾಜಿ ಕಾರ್ಪೊರೇಟರ್ ಪದ್ಮರಾಜ್, ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಮಾಜಿ ಸಚಿವ ಗೋಪಾಲಯ್ಯರಿಗೆ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣ ಕೊಡದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ಪದ್ಮರಾಜ್ ನಿಂದಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕಳೆದ ರಾತ್ರಿಯೇ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಪದ್ಮರಾಜ್ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭೆ ಕಲಾಪ ಆರಂಭದ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೋಪಾಲಯ್ಯ, ಪದ್ಮರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನನ್ನು ಗಡಿಪಾರು ಮಾಡಬೇಕು, ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸದನದಲ್ಲಿ ಒತ್ತಾಯಿಸಿದ್ರು.
ಇನ್ನು, ಸ್ಪೀಕರ್ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಂತೆ ಗೃಹಸಚಿವ ಪರಮೇಶ್ವರ್, ಪದ್ಮರಾಜ್ರನ್ನು ಬಂಧನ ಮಾಡಿರುವ ಮಾಹಿತಿ ಸಿಕ್ಕಿದೆ ಎಂದು ಸದನಕ್ಕೆ ಮಾಹಿತಿ ನೀಡಿದ್ರು. ಪದ್ಮರಾಜ್ನನ್ನು ಅರೆಸ್ಟ್ ಮಾಡಿದ ಪೊಲೀಸರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದ್ರು ವಿಚಾರಣೆ ನಡೆಸಿದ್ರು.
ಕೋರ್ಟ್ನಿಂದ ಪದ್ಮರಾಜ್ಗೆ ಜಾಮೀನು
ಬಳಿಕ 39ನೇ ಎಸಿಎಂಎಂ ನ್ಯಾಯಾಲಯಕ್ಕೆ ಪದ್ಮರಾಜ್ ನನ್ನ ಹಾಜರು ಪಡಿಸಿದ್ರು. ವಿಚಾರಣೆ ನಡೆಸಿದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಮಾಜಿ ಕಾರ್ಪೋರೇಟರ್ ಪದ್ಮರಾಜ್ಗೆ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ಮಾತನಾಡಿದ ಪದ್ಮರಾಜ್ ಆರ್.ಅಶೋಕ್ 1 ಕೋಟಿ ರೂಪಾಯಿ ಪಡೆದಿದ್ದಾರೆಂದು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ