/newsfirstlive-kannada/media/post_attachments/wp-content/uploads/2025/06/Yash-Dayal3.jpg)
RCB ಸ್ಟಾರ್​ ಬೌಲರ್ ಯಶ್​ ದಯಾಳ್​ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಉತ್ತರ ಪ್ರದೇಶದ ಸಿಎಂ ಹೆಲ್ಪ್ಲೈನ್ ಪೋರ್ಟಲ್ನಲ್ಲಿ ಯುವತಿಯೊಬ್ಬಳು ಯಶ್​ ದಯಾಳ್​ ವಿರುದ್ಧ ದೂರು ನೀಡಿದ್ದಾಳೆ.
/newsfirstlive-kannada/media/post_attachments/wp-content/uploads/2025/06/Yash-Dayal2.jpg)
ಯಶ್​ ದಯಾಳ್ ಯುವತಿ ಜೊತೆ 5 ವರ್ಷದ ರಿಲೇಷನ್​ಶಿಪ್​ನಲ್ಲಿ ಇದ್ದರಂತೆ. ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ್ದಾರಂತೆ. ನನಗೆ ಲೈಂಗಿಕ ಕಿರುಕುಳ, ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಹಲವು ಯುವತಿಯರಿಗೆ ಇದೇ ರೀತಿ ವಂಚಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
/newsfirstlive-kannada/media/post_attachments/wp-content/uploads/2025/06/Yash-Dayal1.jpg)
ಈ ಹಿಂದೆಯೂ ಯುವತಿ ಯಶ್​ ದಯಾಳ್​ ವಿರುದ್ಧ ದೂರು ಕೊಟ್ಟಿದ್ದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸತ್ಯಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ. ಆರ್​ಸಿಬಿ ಐಪಿಎಲ್​ 2025 ಚಾಂಪಿಯನ್ ಆಗಲು ಯಶ್​ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ​
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us