/newsfirstlive-kannada/media/post_attachments/wp-content/uploads/2025/05/manu.-madenur.jpg)
ಬೆಂಗಳೂರು: ಕಿರುತೆರೆ ನಟ ಮಡೆನೂರು ಮನು ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ 'ಕಾಮಿಡಿ ಕಿಲಾಡಿಗಳು' ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಅಲ್ಲದೇ ಕಾಮಿಡಿ ಕಿಲಾಡಿಗಳು ಸೀಸನ್​ 2ರ ವಿನ್ನರ್​ ಕೂಡ ಆಗಿದ್ದರು ಮಡೆನೂರು ಮನು.
/newsfirstlive-kannada/media/post_attachments/wp-content/uploads/2025/05/manu.-madenur1.jpg)
ಆದರೆ ಕಿರುತೆರೆ ನಟಿ ಮಡೆನೂರು ಮನು ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಇನ್ನೂ, ನಿರ್ದೇಶಕ ಯೋಗರಾಜ್ ಭಟ್ ಅವರ ಬ್ಯಾನರ್ನಲ್ಲಿ ಮೂಡಿಬಂದ ಸಿನಿಮಾದಲ್ಲಿ ನಟ ಮಡೆನೂರು ಮನು ನಟಿಸಿದ್ದಾರೆ.
ಈ ಕುಲದಲ್ಲಿ ಕೀಳ್ಯಾವೋದು ಸಿನಿಮಾ ನಾಳೆ ರಿಲೀಸ್​ ಆಗಬೇಕಿದೆ. ಆದ್ರೆ ಇದರ ಮಧ್ಯೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ನಟ ಮನುಗಾಗಿ ಹುಡಕಾಟ ಶುರು ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us