newsfirstkannada.com

ದೊಡ್ಡಪ್ಪನ ಮಗಳನ್ನು ಪ್ರೀತಿಸಿದಕ್ಕೆ ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವು

Share :

18-07-2023

    ದೊಡ್ಡಪ್ಪನ ಮಗಳನ್ನು ಪ್ರೀತಿಸಿದ ಕಾರಣಕ್ಕೆ ಬೆಂಕಿ ಹಚ್ಚಿದ ಕೇಸ್

    ದೇಹ ಸುಟ್ಟು ಹೋಗಿದ್ದ ಶಶಾಂಕ್‌ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ

    ಯುವತಿ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು

ಬೆಂಗಳೂರು: ಇತ್ತೀಚೆಗೆ ದೊಡ್ಡಪ್ಪನ ಮಗಳನ್ನು ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆರ್.ಆರ್​ ನಗರದಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಶೇಕಡಾ 90 ರಷ್ಟು ದೇಹ ಸುಟ್ಟು ಹೋಗಿದ್ದ ಶಶಾಂಕ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕಾಲೇಜಿಗೆ ತೆರಳುತ್ತಿದ್ದ ಶಶಾಂಕ್‌ನನ್ನು ಹುಡುಗಿ ಮನೆಯವರು ಇನ್ನೊವಾ ಕಾರಿನಲ್ಲಿ ಎಳೆದೊಯ್ದಿದ್ದರು. ಬಳಿಕ ಶಶಾಂಕ್​ನನ್ನು ಕೈ-ಕಾಲು ಕಟ್ಟಿ ಹೊತ್ತೊಯ್ದು ಆತನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದರು. ಈ ವೇಳೆ ಶಶಾಂಕ್‌ನ ದೇಹದ 90ರಷ್ಟು ಭಾಗ ಸುಟ್ಟು ಹೋಗಿತ್ತು. ಈ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ದೊಡ್ಡಪ್ಪನ ಮಗಳನ್ನೇ ಲವ್​ ಮಾಡಿದ್ದ ಕೇಸ್​ಗೆ ಟ್ವಿಸ್ಟ್​​; ಯುವಕನಿಗೆ ಬೆಂಕಿ ಹಚ್ಚೋ ಮುನ್ನ ಏನು ಮಾಡಿದ್ರು?

ಆರ್ ಆರ್‌ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್​ ಮೇಲೆ ಕಿರಾತಕರು ಪೆಟ್ರೋಲ್​ ಸುರಿದು ಬೆಂಕಿ ಹಾಕಿದ್ದಾರೆ. ಶಶಾಂಕ್ ತನ್ನ ದೊಡ್ಡಪ್ಪನ ಮಗಳನ್ನು ಪ್ರೀತಿಸುತ್ತಿದ್ದ. ಆದರೆ ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಮೈಸೂರಿನಿಂದ ಬೆಂಗಳೂರಿಗೆ ಯುವತಿ ಬಂದಿದ್ದಳು. ತನ್ನನ್ನು ನಂಬಿ ಬೆಂಗಳೂರಿಗೆ ಬಂದ ಯುವತಿಯ‌ನ್ನು ಶಶಾಂಕ್ ಮನೆಗೆ ಕರೆದೊಯ್ದಿದ್ದನು. ಈ ವೇಳೆ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಯುವತಿ ಸಹವಾಸಕ್ಕೆ ಹೋಗಲ್ಲ ಎಂದು ಹೇಳಿ ಶಶಾಂಕ್ ತನ್ನ ಪಾಡಿಗೆ ಕಾಲೇಜಿಗೆ ಹೋಗಿದ್ದಾನೆ. ಶಶಾಂಕ್ ತಂದೆ ರಂಗನಾಥ ಮಗನನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾರೆ. ಈ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಶಶಾಂಕ್​​​ನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿದ್ದಾರೆ. ಬಳಿಕ ಪೆಟ್ರೋಲ್​ ಸುರಿದು ಬೆಂಕಿ ಇಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೊಡ್ಡಪ್ಪನ ಮಗಳನ್ನು ಪ್ರೀತಿಸಿದಕ್ಕೆ ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವು

https://newsfirstlive.com/wp-content/uploads/2023/07/Bangalore-Shashank.jpg

    ದೊಡ್ಡಪ್ಪನ ಮಗಳನ್ನು ಪ್ರೀತಿಸಿದ ಕಾರಣಕ್ಕೆ ಬೆಂಕಿ ಹಚ್ಚಿದ ಕೇಸ್

    ದೇಹ ಸುಟ್ಟು ಹೋಗಿದ್ದ ಶಶಾಂಕ್‌ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ

    ಯುವತಿ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು

ಬೆಂಗಳೂರು: ಇತ್ತೀಚೆಗೆ ದೊಡ್ಡಪ್ಪನ ಮಗಳನ್ನು ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆರ್.ಆರ್​ ನಗರದಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಶೇಕಡಾ 90 ರಷ್ಟು ದೇಹ ಸುಟ್ಟು ಹೋಗಿದ್ದ ಶಶಾಂಕ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕಾಲೇಜಿಗೆ ತೆರಳುತ್ತಿದ್ದ ಶಶಾಂಕ್‌ನನ್ನು ಹುಡುಗಿ ಮನೆಯವರು ಇನ್ನೊವಾ ಕಾರಿನಲ್ಲಿ ಎಳೆದೊಯ್ದಿದ್ದರು. ಬಳಿಕ ಶಶಾಂಕ್​ನನ್ನು ಕೈ-ಕಾಲು ಕಟ್ಟಿ ಹೊತ್ತೊಯ್ದು ಆತನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದರು. ಈ ವೇಳೆ ಶಶಾಂಕ್‌ನ ದೇಹದ 90ರಷ್ಟು ಭಾಗ ಸುಟ್ಟು ಹೋಗಿತ್ತು. ಈ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ದೊಡ್ಡಪ್ಪನ ಮಗಳನ್ನೇ ಲವ್​ ಮಾಡಿದ್ದ ಕೇಸ್​ಗೆ ಟ್ವಿಸ್ಟ್​​; ಯುವಕನಿಗೆ ಬೆಂಕಿ ಹಚ್ಚೋ ಮುನ್ನ ಏನು ಮಾಡಿದ್ರು?

ಆರ್ ಆರ್‌ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್​ ಮೇಲೆ ಕಿರಾತಕರು ಪೆಟ್ರೋಲ್​ ಸುರಿದು ಬೆಂಕಿ ಹಾಕಿದ್ದಾರೆ. ಶಶಾಂಕ್ ತನ್ನ ದೊಡ್ಡಪ್ಪನ ಮಗಳನ್ನು ಪ್ರೀತಿಸುತ್ತಿದ್ದ. ಆದರೆ ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಮೈಸೂರಿನಿಂದ ಬೆಂಗಳೂರಿಗೆ ಯುವತಿ ಬಂದಿದ್ದಳು. ತನ್ನನ್ನು ನಂಬಿ ಬೆಂಗಳೂರಿಗೆ ಬಂದ ಯುವತಿಯ‌ನ್ನು ಶಶಾಂಕ್ ಮನೆಗೆ ಕರೆದೊಯ್ದಿದ್ದನು. ಈ ವೇಳೆ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಯುವತಿ ಸಹವಾಸಕ್ಕೆ ಹೋಗಲ್ಲ ಎಂದು ಹೇಳಿ ಶಶಾಂಕ್ ತನ್ನ ಪಾಡಿಗೆ ಕಾಲೇಜಿಗೆ ಹೋಗಿದ್ದಾನೆ. ಶಶಾಂಕ್ ತಂದೆ ರಂಗನಾಥ ಮಗನನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾರೆ. ಈ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಶಶಾಂಕ್​​​ನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿದ್ದಾರೆ. ಬಳಿಕ ಪೆಟ್ರೋಲ್​ ಸುರಿದು ಬೆಂಕಿ ಇಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More