/newsfirstlive-kannada/media/post_attachments/wp-content/uploads/2025/05/SMG_BUS_ACCIDENT.jpg)
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂರು ವರ್ಷದ ಮಗು ಹಾಗೂ ಮಗುವಿನ ತಾಯಿ ಜೀವ ಬಿಟ್ಟಿರುವ ಘಟನೆ ಜಿಲ್ಲೆಯ ಕೋಣೆ ಹೊಸೂರು- ತುಪ್ಪೂರು ಬಳಿ ನಡೆದಿದೆ.
ಅಪಘಾತದಲ್ಲಿ ಅಸ್ಮಾಭಾನು (30) ಹಾಗೂ 3 ವರ್ಷದ ಮಗು ಮೊಹ್ಮದ್ ಖಬೀರ್ ಸಾವು. ಘಟನೆಯಲ್ಲಿ ಮಹಿಳೆಯ ಗಂಡ ಖಲಂದರ್ ಪಾಶ ಹಾಗೂ ಇನ್ನೊಂದು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತರೀಕೆರೆಯ ಬುಕ್ಕಾಂಬುದಿಯಿಂದ ಸಾಗರಕ್ಕೆ ಇವರು ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಖಾಸಗಿ ಬಸ್​ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಮಳೆ ಬರುತ್ತಿದ್ದರಿಂದ ಬೈಕ್ ಓಡಿಸುತ್ತಿದ್ದ ಖಲಂದರ್ ಪಾಶ ಬಲ ಭಾಗಕ್ಕೆ ಇದ್ದ ಬಸ್ ನಿಲ್ದಾಣದಲ್ಲಿ ನಿಲ್ಲಲು ತೆರಳಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಹಿಂಬದಿಯಲ್ಲಿದ್ದ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ಮೂರು ವರ್ಷದ ಮಗು ಮೊಹ್ಮದ್ ಖಬೀರ್ ಸಾವನ್ನಪ್ಪಿದೆ. ಈ ವೇಳೆ ಮಗುವಿನ ತಾಯಿ, ತಂದೆ ಹಾಗೂ ಇನ್ನೊಂದು 6 ವರ್ಷದ ಮಗುವಿಗೆ ಗಂಭೀರವಾದ ಗಾಯಗಳು ಆಗಿದ್ದವು.
ತಕ್ಷಣ ಗಾಯಾಳುಗಳನ್ನು ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಮಾರ್ಗಮಧ್ಯೆಯೇ ತಾಯಿ ಅಸ್ಮಭಾನು ನಿಧನರಾದರು. ಮಗು ಮತ್ತು ತಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ದ್ವಿಚಕ್ರ ವಾಹನದಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us