ಶೋಹೆಬ್ @ ಸೇಬುನನ್ನು ಹತ್ಯೆ ಮಾಡಿದ ಮತ್ತೊಂದು ಗ್ಯಾಂಗ್
ನಡುರಸ್ತೆಯಲ್ಲೇ ಎರಡು ರೌಡಿಶೀಟರ್ ಗ್ಯಾಂಗ್ಗಳ ಮಧ್ಯೆ ವಾರ್
ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಇಬ್ಬರು ರೌಡಿಶೀಟರ್ಗಳು ಸಾವು
ಶಿವಮೊಗ್ಗ: ನಡುರಸ್ತೆಯಲ್ಲೇ ಎರಡು ರೌಡಿಶೀಟರ್ ಗುಂಪಿನ ಮಧ್ಯೆ ಸಿನಿಮೀಯ ಶೈಲಿಯ ಗ್ಯಾಂಗ್ ವಾರ್ ನಡೆದಿದೆ. ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ನಡೆದ ಈ ವಾರ್ನಲ್ಲಿ ಇಬ್ಬರು ರೌಡಿಶೀಟರ್ಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬುನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್ ವಾರ್; ಸ್ಥಳದಲ್ಲೇ ರೌಡಿಶೀಟರ್ ಸೇರಿ ಇಬ್ಬರು ಸಾವು
ಇನ್ನು, ಈ ಘಟನೆಯಲ್ಲಿ ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಇನ್ನೊಬ್ಬ ರೌಡಿಶೀಟರ್ ಕೂಡ ಮೃತಪಟ್ಟಿದ್ದು, ಸದ್ಯ ಪೊಲೀಸ್ ಅಧಿಕಾರಿಗಳು ಆತನ ಗುರುತನ್ನು ಪತ್ತೆ ಹಚ್ಚುತ್ತಿದ್ದಾರೆ. ಕೊಲೆಯಾದ ರೌಡಿಶೀಟರ್ ಮೇಲೆ ಶೋಹೆಬ್ ಅಲಿಯಾಸ್ ಸೇಬು ಗ್ಯಾಂಗ್ ಯಾಸೀನ್ ಖುರೇಶಿ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಶೋಹೆಬ್ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಪರಿಣಾಮ ಇಬ್ಬರು ರೌಡಿಶೀಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆದರೆ ರೌಡಿ ಶೀಟರ್ ಯಾಸೀನ್ ಮೇಲೆ ದುಷ್ಕರ್ಮಿಗಳ ಗುಂಪು ಚಾಕುವಿನಿಂದ ಹಲ್ಲೆ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಯಾಸೀನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶೋಹೆಬ್ @ ಸೇಬುನನ್ನು ಹತ್ಯೆ ಮಾಡಿದ ಮತ್ತೊಂದು ಗ್ಯಾಂಗ್
ನಡುರಸ್ತೆಯಲ್ಲೇ ಎರಡು ರೌಡಿಶೀಟರ್ ಗ್ಯಾಂಗ್ಗಳ ಮಧ್ಯೆ ವಾರ್
ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಇಬ್ಬರು ರೌಡಿಶೀಟರ್ಗಳು ಸಾವು
ಶಿವಮೊಗ್ಗ: ನಡುರಸ್ತೆಯಲ್ಲೇ ಎರಡು ರೌಡಿಶೀಟರ್ ಗುಂಪಿನ ಮಧ್ಯೆ ಸಿನಿಮೀಯ ಶೈಲಿಯ ಗ್ಯಾಂಗ್ ವಾರ್ ನಡೆದಿದೆ. ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ನಡೆದ ಈ ವಾರ್ನಲ್ಲಿ ಇಬ್ಬರು ರೌಡಿಶೀಟರ್ಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬುನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್ ವಾರ್; ಸ್ಥಳದಲ್ಲೇ ರೌಡಿಶೀಟರ್ ಸೇರಿ ಇಬ್ಬರು ಸಾವು
ಇನ್ನು, ಈ ಘಟನೆಯಲ್ಲಿ ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಇನ್ನೊಬ್ಬ ರೌಡಿಶೀಟರ್ ಕೂಡ ಮೃತಪಟ್ಟಿದ್ದು, ಸದ್ಯ ಪೊಲೀಸ್ ಅಧಿಕಾರಿಗಳು ಆತನ ಗುರುತನ್ನು ಪತ್ತೆ ಹಚ್ಚುತ್ತಿದ್ದಾರೆ. ಕೊಲೆಯಾದ ರೌಡಿಶೀಟರ್ ಮೇಲೆ ಶೋಹೆಬ್ ಅಲಿಯಾಸ್ ಸೇಬು ಗ್ಯಾಂಗ್ ಯಾಸೀನ್ ಖುರೇಶಿ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಶೋಹೆಬ್ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಪರಿಣಾಮ ಇಬ್ಬರು ರೌಡಿಶೀಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆದರೆ ರೌಡಿ ಶೀಟರ್ ಯಾಸೀನ್ ಮೇಲೆ ದುಷ್ಕರ್ಮಿಗಳ ಗುಂಪು ಚಾಕುವಿನಿಂದ ಹಲ್ಲೆ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಯಾಸೀನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ