ಯೋಗರಾಜ್ ಭಟ್ ನಿರ್ದೇಶನದಲ್ಲಿ ಬರುತ್ತಿರುವ ಸಿನಿಮಾ
ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ
ಒಂದೇ ವೇದಿಕೆ ಮೇಲೆ ಹುಕ್ ಸ್ಟೆಪ್ ಹಾಕಿದ ಪ್ರಭುದೇವ ಮತ್ತು ಶಿವಣ್ಣ
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಇದೇ ಮೊದಲ ಬಾರಿಗೆ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಈ ಸಿನಿಮಾಗೆ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ.
ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ ಪಡೆದ ಈ ಚಲನಚಿತ್ರವು ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಬಿಂಬಿಸಲಾಗಿದೆ. ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.
ಇದರ ಬೆನ್ನಲ್ಲೆ ನಿನ್ನೆ ಕರಟಕ ದಮನಕ ಚಿತ್ರದ ಮೊದಲನೇ ಹಾಡು ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇನ್ನು ಈ ಚಿತ್ರವನ್ನ ರಾಕ್ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ರೆ, ಹರಿಕೃಷ್ಣ, ಸಂಗೀತ ಸಂಯೋಜನೆ ಮಾಡಿದ್ದಾರೆ.
ಶಿವರಾತ್ರಿ ಹಬ್ಬದಂದು ಅಂದರೆ ಮಾರ್ಚ್ 8ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಈ ಮೂಲಕ ಶಿವಣ್ಣನ ಅಭಿಮಾನಿಗಳಿಗೆ ಶಿವರಾತ್ರಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ. ಇನ್ನು ಒಂದೇ ವೇದಿಕೆ ಮೇಲೆ ಪ್ರಭುದೇವ ಮತ್ತು ಶಿವಣ್ಣ ಒಟ್ಟಿಗೆ ಕಾಣಿಸಿಕೊಂಡು, ಹುಕ್ ಸ್ಟೆಪ್ ಹಾಕಿದ್ದು ವಿಶೇಷವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಯೋಗರಾಜ್ ಭಟ್ ನಿರ್ದೇಶನದಲ್ಲಿ ಬರುತ್ತಿರುವ ಸಿನಿಮಾ
ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ
ಒಂದೇ ವೇದಿಕೆ ಮೇಲೆ ಹುಕ್ ಸ್ಟೆಪ್ ಹಾಕಿದ ಪ್ರಭುದೇವ ಮತ್ತು ಶಿವಣ್ಣ
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಇದೇ ಮೊದಲ ಬಾರಿಗೆ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಈ ಸಿನಿಮಾಗೆ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ.
ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ ಪಡೆದ ಈ ಚಲನಚಿತ್ರವು ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಬಿಂಬಿಸಲಾಗಿದೆ. ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.
ಇದರ ಬೆನ್ನಲ್ಲೆ ನಿನ್ನೆ ಕರಟಕ ದಮನಕ ಚಿತ್ರದ ಮೊದಲನೇ ಹಾಡು ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇನ್ನು ಈ ಚಿತ್ರವನ್ನ ರಾಕ್ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ರೆ, ಹರಿಕೃಷ್ಣ, ಸಂಗೀತ ಸಂಯೋಜನೆ ಮಾಡಿದ್ದಾರೆ.
ಶಿವರಾತ್ರಿ ಹಬ್ಬದಂದು ಅಂದರೆ ಮಾರ್ಚ್ 8ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಈ ಮೂಲಕ ಶಿವಣ್ಣನ ಅಭಿಮಾನಿಗಳಿಗೆ ಶಿವರಾತ್ರಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ. ಇನ್ನು ಒಂದೇ ವೇದಿಕೆ ಮೇಲೆ ಪ್ರಭುದೇವ ಮತ್ತು ಶಿವಣ್ಣ ಒಟ್ಟಿಗೆ ಕಾಣಿಸಿಕೊಂಡು, ಹುಕ್ ಸ್ಟೆಪ್ ಹಾಕಿದ್ದು ವಿಶೇಷವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ