Advertisment

ಬೆಳ್ಳಂಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ಶೂಟೌಟ್.. ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಕೊಲೆ

author-image
Ganesh
Updated On
ಬೆಳ್ಳಂಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ಶೂಟೌಟ್.. ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಕೊಲೆ
Advertisment
  • ಪಿಸ್ತೂಲ್​ನಿಂದ ಗುಂಡು ಹಾರಿಸಿ ಕೊಲೆಗೈದ ರಾಕ್ಷಸ
  • ಪೊಲೀಸರಿಂದ ಆರೋಪಿ ಬಶೀರ್ ಅಹ್ಮದ್ ವಶಕ್ಕೆ
  • ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ಪಿಸ್ತೂಲ್​ನಿಂದ ಗುಂಡು ಹಾರಿಸಿ ಅಣ್ಣನ ಮಗನನ್ನು ಚಿಕ್ಕಪ್ಪ ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ. ನಜೀರ್ ಅಹ್ಮದ್ ಕೊಲೆಯಾದ ದುರ್ದೈವಿ.

Advertisment

ಬಶೀರ್ ಅಹ್ಮದ್ (66) ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ. ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಾಬೂಸಾಬಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ ಎನ್ನಲಾಗಿದೆ. ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಬಶೀರ್ ಅಹ್ಮದ್​​ನನ್ನು ವಶಕ್ಕೆ ಪಡೆದಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪಾರಿವಾಳ ಉಳಿಸಲು ಹೋಗಿ ನರಳಿ ನರಳಿ ಪ್ರಾಣ ಬಿಟ್ಟ ಬಾಲಕ.. ಅಲ್ಲಿ ಆಗಿದ್ದೇನು..?

Advertisment

ಇದನ್ನೂ ಓದಿ:ಪ್ರೀತಿಗೆ ಅಡ್ಡಿ ಆಗಲಿಲ್ಲ ವಯಸ್ಸು.. ಅಳಿಯನ ವರ್ಷ ತಿಳಿದು ದಂಗಾದ ಪೋಷಕರು.. ಠಾಣೆಯಲ್ಲಿ ಹೈಡ್ರಾಮಾ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment