newsfirstkannada.com

ಹೆಂಡತಿಗೆ ಸೀರೆ ಇಷ್ಟವಾಗಿಲ್ಲ ಎಂದು ಅಂಗಡಿ ಮಾಲೀಕನ ಮೇಲೆ ಗ್ರಾಹಕನಿಂದ ಹಲ್ಲೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Share :

Published February 26, 2024 at 12:26pm

    ಅಂಗಡಿಯಿಂದ ಕೊಂಡು ಹೋದ ಸೀರೆ ಪತ್ನಿಗೆ ಇಷ್ಟವಾಗಿಲ್ಲ

    ಮಾಲೀಕನ ಮೇಲೆ ಕಾಲ್ಕಿತ್ತುಕೊಂಡು ಜಗಳಕ್ಕೆ ಬಂದ ಪತಿ

    ಸೀರೆ ವಿಚಾರವಾಗಿ ಅಂಗಡಿ ಮಾಲೀಕನ ಮೇಲೆ ಗ್ರಾಹಕನಿಂದ ಹಲ್ಲೆ

ಶಿರಸಿ: ಪತಿಯೋರ್ವ ತನ್ನ ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲೀಕನಿಗೆ ಬೈದು ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಅಲ್ಲಿನ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ತೆರಳಿ ಪತಿ ಮಾಲೀಕನ ಮೇಲೆ ಕೈ ಮಾಡಿದ್ದಾನೆ. ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಹಮ್ಮದ್ ಎಂಬಾತ ಅಂಗಡಿ ಮಾಲೀಕ ಬಲರಾಮ್ ಮೇಲೆ ಹಲ್ಲೆ ಮಾಡಿದ ವ್ಯಕ್ತಿ. ಆತ ತನ್ನ ಪತ್ನಿಗೆಂದು ಸೀರೆ ತೆಗೆದುಕೊಂಡು ಹೋಗಿದ್ದನು. ಆ ಸೀರೆ ಪತ್ನಿಗೆ ಇಷ್ಟ ಆಗದ ಹಿನ್ನೆಲೆ ಅಂಗಡಿಗೆ ಪುನಃ ಬಂದು ಸೀರೆ ನೋಡಿದ್ದಾನೆ. ಅಂಗಡಿಯಲ್ಲಿನ ಯಾವುದೇ ಸೀರೆ ಪತ್ನಿಗೆ ಇಷ್ಟ ಆಗಲಿಲ್ಲ. ಅದಕ್ಕೆ ಸಿಟ್ಟಿಗೆದ್ದ ಮಹಮ್ಮದ್​ ಒಳ್ಳೆಯ ಬಟ್ಟೆ ಇಡೋಕೆ ಆಗಲ್ವಾ ಅಂತಾ ಅವಾಚ್ಯ ಪದ ಬಳಕೆ ಮಾಡಿದ್ದಾನೆ.

 

ಅದಕ್ಕೆ ಅಂಗಡಿ ಮಾಲೀಕ ಬಲರಾಮ್​ ನಿನ್ನ ಹಣ ರಿಟರ್ನ್ ಕೊಡ್ತೀನಿ ತಗೊಂಡು ಹೋಗು ಬೈ ಬೇಡ ಎಂದು ಹೇಳಿದ್ದಾನೆ. ನಂಗೆ ಹಣ ಏನ್ ಕೊಡ್ತಿಯಾ ಸರಿಯಾಗಿ ಬಟ್ಟೆ ಇಡೋಕೆ ಆಗಲ್ವಾ ಎಂದು ಹೊರಗಡೆಯಿಂದ ಸರ್ಪರಾಜ್ ಎಂಬ ಗೆಳೆಯನನ್ನು ಕರೆಸಿ ಹಲ್ಲೆ ಮಾಡಿದ್ದಾನೆ.

ಇನ್ನು ಈ ಘಟನೆ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಂಡತಿಗೆ ಸೀರೆ ಇಷ್ಟವಾಗಿಲ್ಲ ಎಂದು ಅಂಗಡಿ ಮಾಲೀಕನ ಮೇಲೆ ಗ್ರಾಹಕನಿಂದ ಹಲ್ಲೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

https://newsfirstlive.com/wp-content/uploads/2024/02/Sirsi-fight.jpg

    ಅಂಗಡಿಯಿಂದ ಕೊಂಡು ಹೋದ ಸೀರೆ ಪತ್ನಿಗೆ ಇಷ್ಟವಾಗಿಲ್ಲ

    ಮಾಲೀಕನ ಮೇಲೆ ಕಾಲ್ಕಿತ್ತುಕೊಂಡು ಜಗಳಕ್ಕೆ ಬಂದ ಪತಿ

    ಸೀರೆ ವಿಚಾರವಾಗಿ ಅಂಗಡಿ ಮಾಲೀಕನ ಮೇಲೆ ಗ್ರಾಹಕನಿಂದ ಹಲ್ಲೆ

ಶಿರಸಿ: ಪತಿಯೋರ್ವ ತನ್ನ ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲೀಕನಿಗೆ ಬೈದು ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಅಲ್ಲಿನ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ತೆರಳಿ ಪತಿ ಮಾಲೀಕನ ಮೇಲೆ ಕೈ ಮಾಡಿದ್ದಾನೆ. ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಹಮ್ಮದ್ ಎಂಬಾತ ಅಂಗಡಿ ಮಾಲೀಕ ಬಲರಾಮ್ ಮೇಲೆ ಹಲ್ಲೆ ಮಾಡಿದ ವ್ಯಕ್ತಿ. ಆತ ತನ್ನ ಪತ್ನಿಗೆಂದು ಸೀರೆ ತೆಗೆದುಕೊಂಡು ಹೋಗಿದ್ದನು. ಆ ಸೀರೆ ಪತ್ನಿಗೆ ಇಷ್ಟ ಆಗದ ಹಿನ್ನೆಲೆ ಅಂಗಡಿಗೆ ಪುನಃ ಬಂದು ಸೀರೆ ನೋಡಿದ್ದಾನೆ. ಅಂಗಡಿಯಲ್ಲಿನ ಯಾವುದೇ ಸೀರೆ ಪತ್ನಿಗೆ ಇಷ್ಟ ಆಗಲಿಲ್ಲ. ಅದಕ್ಕೆ ಸಿಟ್ಟಿಗೆದ್ದ ಮಹಮ್ಮದ್​ ಒಳ್ಳೆಯ ಬಟ್ಟೆ ಇಡೋಕೆ ಆಗಲ್ವಾ ಅಂತಾ ಅವಾಚ್ಯ ಪದ ಬಳಕೆ ಮಾಡಿದ್ದಾನೆ.

 

ಅದಕ್ಕೆ ಅಂಗಡಿ ಮಾಲೀಕ ಬಲರಾಮ್​ ನಿನ್ನ ಹಣ ರಿಟರ್ನ್ ಕೊಡ್ತೀನಿ ತಗೊಂಡು ಹೋಗು ಬೈ ಬೇಡ ಎಂದು ಹೇಳಿದ್ದಾನೆ. ನಂಗೆ ಹಣ ಏನ್ ಕೊಡ್ತಿಯಾ ಸರಿಯಾಗಿ ಬಟ್ಟೆ ಇಡೋಕೆ ಆಗಲ್ವಾ ಎಂದು ಹೊರಗಡೆಯಿಂದ ಸರ್ಪರಾಜ್ ಎಂಬ ಗೆಳೆಯನನ್ನು ಕರೆಸಿ ಹಲ್ಲೆ ಮಾಡಿದ್ದಾನೆ.

ಇನ್ನು ಈ ಘಟನೆ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More