/newsfirstlive-kannada/media/post_attachments/wp-content/uploads/2024/11/CP-YOGESHWAR.jpg)
ರಾಮನಗರ: ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ಗೆ ಸಂಕಷ್ಟ ಶುರುವಾಗಿದೆ.
ನಕಲಿ ಸಹಿ ಹಾಕಿದ್ದಾರೆಂದು ಆರೋಪಿಸಿ ತಂದೆ ವಿರುದ್ಧವೇ ಸಿಪಿ ಯೋಗೇಶ್ವರ್ ಮಗ ಶ್ರವಣ್ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ. ಪುತ್ರನ ದೂರಿನ ಅನ್ವಯ ಕೋರ್ಟ್ನಲ್ಲಿ ಇಂದು ಸಿಪಿವೈ ವಿರುದ್ಧದ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:ಬಿಗ್ಬಾಸ್ ಬೆನ್ನಲ್ಲೇ ಸವಿರುಚಿಗೆ ಎಂಟ್ರಿ ಕೊಟ್ಟ ಲಾಯರ್ ಜಗದೀಶ್; ಮಾಡಿರೋ ರೆಸಿಪಿ ಏನು?
ಆರೋಪದ ಪ್ರಕಾರ, ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದ್ದ ಮನೆಯನ್ನು ನಿಶಾಗೆ ನಾವಿಬ್ಬರು ಗಿಫ್ಟ್ ಮಾಡಿದ್ದೇವು. ಅಮ್ಮ ಮತ್ತು ನಾನು ಯಾವುದೇ ತಕರಾರು ಇಲ್ಲದೇ ಗಿಫ್ಟ್ ನೀಡಿದ್ದೇವು. ಅದಾದ ನಂತರ 2024 ಅಕ್ಟೋಬರ್ನಲ್ಲಿ ತಂದೆಯ ಪಿಎ ಮೂಲಕ ನನಗೆ ಒಂದು ಡ್ರಾಪ್ಟ್ ಬರುತ್ತದೆ. ಅದು ಆ ಮನೆಯ ಭಾಗಕ್ಕೆ ವಿಚಾರಕ್ಕೆ ಸಂಬಂಧಿಸಿದ್ದಾಗಿತ್ತು. ಅದರಲ್ಲಿ ಆ ಮನೆಯ ಭಾಗ ಕೇಳಿ ನಾನೇ ನನ್ನ ತಾಯಿ ಮತ್ತು ಸಹೋದರಿ ನಿಶಾ ವಿರುದ್ಧ ಕೇಸ್ ಹಾಕುವುದಕ್ಕೆ ಸಂಬಂಧಿಸಿದ್ದಾಗಿತ್ತು. ನಾನು ಯಾವುದೇ ಗಿಫ್ಟ್ ನೀಡಿಲ್ಲ, ಅದರಲ್ಲಿ ನನಗೆ ಪಾಲು ಬೇಕು ಎಂದು ಬರೆಯಲಾಗಿತ್ತು.
ಇದಕ್ಕೆ ನಾನು ಒಪ್ಪಿರಲಿಲ್ಲ. ಅಲ್ಲದೇ ತಂದೆಗೂ ಕೂಡ ನನ್ನ ಅನುಮತಿ ಇಲ್ಲ ಎಂದು ಹೇಳಿದ್ದೆ. ಆಗ ತಂದೆ ಯೋಗೇಶ್ವರ್ ನಾನು ನೋಡಿಕೊಳ್ತೇನೆ ಬಿಡು ಎಂದಿದ್ದರು. ಇದೀಗ ನನ್ನ ತಂದೆಯವರೇ ಆ ಡ್ರಾಪ್ಟ್ಗೆ ಸಹಿ ಮಾಡಿ ನಾನು ಪಾಲು ಕೇಳುವಂತೆ ಕೇಸ್ ದಾಖಲಿಸಿದ್ದಾರೆ. ಅಂದರೆ ನನ್ನ ಹೆಸರಿನಲ್ಲಿ ಅಮ್ಮ ಮತ್ತು ಸಹೋದರಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದರ ವಿರುದ್ಧ ನಾನು ಕೋರ್ಟ್ ಮೊರೆ ಹೋಗಿದ್ದೇನೆ. ನಾನು ಯಾವುದೇ ಸಹಿ ಮಾಡಿಲ್ಲ. ಮನೆಯಲ್ಲಿ ಭಾಗವನ್ನೂ ಕೇಳಿಲ್ಲ ಎಂದು ದೂರಿದ್ದಾರೆ.
ಇದನ್ನೂ ಓದಿ:ಹೋಟೆಲ್ನಲ್ಲಿ ಹಣ ಹಂಚುವಾಗ ಸಿಕ್ಕಿಬಿದ್ದ BJP ನಾಯಕರು.. ಪ್ರತಿಪಕ್ಷಗಳ ಆರೋಪ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ