/newsfirstlive-kannada/media/post_attachments/wp-content/uploads/2025/05/shreyas_iyer_test.jpg)
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಟೀಮ್ ಇಂಡಿಯಾದ ಆಟಗಾರರ ಹೆಸರನ್ನು ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕ್ಯಾಪ್ಟನ್ ಹಾಗೂ ಉಪ ನಾಯಕನ ಹೆಸರನ್ನು ಅಂತಿಮಗೊಳಿಸಿದೆ. ಆದರೆ ಈ ಎಲ್ಲದರ ನಡುವೆಯೂ ಟೀಮ್ ಇಂಡಿಯಾದ ಶ್ರೇಷ್ಠ ಆಟಗಾರ, ಭಾರತದ ಚಾಂಪಿಯನ್ ಟ್ರೋಫಿ ಗೆಲುವಿಗೆ ಕಾರಣರಾಗಿದ್ದ ಶ್ರೇಯಸ್ ಅಯ್ಯರ್ ಅವರನ್ನು ಟೆಸ್ಟ್ನಿಂದ ಹೊರಗಿಡಲಾಗಿದೆ.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ಗುಡ್ಬೈ ಹೇಳಿದ ಮೇಲೆ ಶ್ರೇಯಸ್ ಅಯ್ಯರ್ ಹೆಸರು ಟೆಸ್ಟ್ನಲ್ಲಿ ಹೆಚ್ಚಾಗಿ ಕೇಳಿ ಬಂದಿತ್ತು. ಅಲ್ಲದೇ ಶ್ರೇಯಸ್ ಅಯ್ಯರ್ ಭಾರತ ತಂಡದಲ್ಲಿ ಯಶಸ್ವಿ ಆಟಗಾರ. ಇಂತಹ ಆಟಗಾರನಿಗೆ ಈಗ ಟೆಸ್ಟ್ ತಂಡದಲ್ಲಿ ಅವಕಾಶ ಕೊಡದೇ ಹೊರ ಗಿಟ್ಟಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆ ಮೂಡಿಸಿದೆ.
ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಟೆಸ್ಟ್ ತಂಡಕ್ಕೆ ಎಂಟ್ರಿ ನೀಡುತ್ತಾರೆ ಅನ್ನೋ ನಿರೀಕ್ಷೆ ಬೆಟ್ಟದಷ್ಟಿತ್ತು. ಇದಕ್ಕೆ ಕಾರಣ 2024ರಿಂದ ಶ್ರೇಯಶ್ ಅಯ್ಯರ್, ಟೀಮ್ ಇಂಡಿಯಾ ಪರ ಹಾಗೂ ಡೊಮೆಸ್ಟಿಕ್ ಕ್ರಿಕೆಟ್ನಲ್ಲಿ ನೀಡಿದ ಪ್ರದರ್ಶನ.
ಇದನ್ನೂ ಓದಿ: ಬದ್ಧವೈರಿ ಆದರೂ ಚೆನ್ನೈ ಗೆಲುವಿಗಾಗಿ ಪ್ರಾರ್ಥಿಸುತ್ತಿರುವ RCB.. ಯಾಕೆ ಗೊತ್ತಾ?
2024ರ ಇಂಗ್ಲೆಂಡ್ ಎದುರಿನ ವಿಶಾಖಪಟ್ಟಣಂ ಟೆಸ್ಟ್ ಬಳಿಕ ಸ್ಥಾನ ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್, ಅದೇ ವರ್ಷ ಮುಂಬೈ ರಣಜಿ ಗೆಲುವಿಗೆ ಕಾರಣರಾದರು. ಅಷ್ಟೇ ಅಲ್ಲ, ಸೀಸನ್-17ರ ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಮಿಂಚಿದ ಶ್ರೇಯಸ್ ಅಯ್ಯರ್, ಮೇ 26ರಂದು ಕೆಕೆಆರ್ಗೆ ಟ್ರೋಫಿ ಗೆಲ್ಲಿಸಿಕೊಟ್ಟಿದ್ದರು. ಈ ಬೆನ್ನಲ್ಲೇ ಪ್ರತಿಷ್ಠಿತ ಇರಾನಿ ಟ್ರೋಫಿ ಗೆಲ್ಲಿಸಿಕೊಟ್ಟ ಶ್ರೇಯಸ್ ಅಯ್ಯರ್, 2024ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವನ್ನ ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಪ್ರಸಕ್ತ ಐಪಿಎಲ್ನಲ್ಲೂ ಪಂಜಾಬ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಅಷ್ಟೇ ಅಲ್ಲ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಶ್ರೇಯಸ್ಗೆ ಬಿಸಿಸಿಐ ಟೆಸ್ಟ್ ತಂಡದಲ್ಲಿ ಸ್ಥಾನ ನೀಡದಿರುವುದು ಅಚ್ಚರಿ ಮೂಡಿಸಿರುವುದು ಸುಳ್ಳಲ್ಲ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ