ಟೀಮ್ ಇಂಡಿಯಾದಿಂದ ಕೈ ಬಿಟ್ಟ ಬೆನ್ನಲ್ಲೇ ಎಚ್ಚೆತ್ತ ಅಯ್ಯರ್
ರಣಜಿ ಕ್ರಿಕೆಟ್ ಆಡಲು ಸ್ಟಾರ್ ಕ್ರಿಕೆಟರ್ ಅಯ್ಯರ್ ನಿರ್ಧಾರ!
ಮುಂಬೈ ತಂಡದ ಪರ ರಣಜಿ ಕ್ರಿಕೆಟ್ ಆಡಲಿರೋ ಶ್ರೇಯಸ್
ಬಿಸಿಸಿಐ ಮಾತಿಗೆ ಕ್ಯಾರೇ ಎನ್ನದೆ ರಣಜಿ ಕ್ರಿಕೆಟ್ ಆಡಲು ಹಿಂದೇಟು ಹಾಕಿದ್ದ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಶ್ರೇಯಸ್ ಅಯ್ಯರ್ಗೆ ಗುತ್ತಿಗೆ ಪಟ್ಟಿಯಿಂದ ಕೊಕ್ ನೀಡಲಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಶ್ರೇಯಸ್ ಅಯ್ಯರ್ ಕೊನೆಗೂ ರಣಜಿ ಟ್ರೋಫಿ ಆಡಲು ನಿರ್ಧರಿಸಿದ್ದಾರೆ.
ಹೌದು, ಮಾರ್ಚ್ 2ನೇ ತಾರೀಕಿನಿಂದ ತಮಿಳುನಾಡು ವಿರುದ್ಧ ನಡೆಯೋ ರಣಜಿ ಸೆಮಿ ಫೈನಲ್ನಲ್ಲಿ ಮುಂಬೈ ಪರ ಆಡಲಿದ್ದಾರೆ. ಈ ಪಂದ್ಯಕ್ಕೆ ಈಗಾಗಲೇ ಮುಂಬೈ ತಂಡ ಪ್ರಕಟಗೊಂಡಿದ್ದು, ಶ್ರೇಯಸ್ ಅಯರ್ ಕೂಡ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಇನ್ನು, ಬೆನ್ನು ನೋವಿನಿಂದಾಗಿ ಶ್ರೇಯಸ್ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದ ಬಳಿಕ ತಂಡದಿಂದ ಹೊರಬಿದ್ದಿದ್ದರು. ಬಳಿಕ ಎನ್ಸಿಎಗೆ ಆಗಮಿಸಿ ಪುನಶ್ಚೇತನ ಶಿಬಿರಕ್ಕೆ ಹಾಜರಾಗಿ ಸುಧಾರಿಸಿಕೊಂಡಿದ್ದರು. ಹೆಡ್ ಕೋಚ್ ರಾಹುಲ್ ದ್ರಾವಿಡ್ ರಣಜಿ ಆಡಿ ಎಂದಿದ್ರೂ ಕ್ಯಾರೇ ಎನ್ನದೆ ಶ್ರೇಯಸ್ ಅಯ್ಯರ್ ರೆಸ್ಟ್ನಲ್ಲಿ ಇದ್ದರು.
ಅಸಲಿಗೆ ಆಗಿದ್ದೇನು..?
ಬಿಸಿಸಿಐ ತಮ್ಮ ಒಪ್ಪಂದದ ಆಟಗಾರರು ರಣಜಿ ಟ್ರೋಫಿ ಆಡಬೇಕೆಂದು ಖಡಕ್ ಆಗಿ ಹೇಳಿತ್ತು. ಈ ಬಗ್ಗೆ ಪ್ರತಿ ಆಟಗಾರರಿಗೆ ಪತ್ರ ಬರೆದು ಬಿಸಿಸಿಐ ಜನರಲ್ ಸೆಕ್ರೆಟರಿ ಜಯ್ ಶಾ ಅವರೇ ಸೂಚನೆ ನೀಡಿದ್ದರು. ಭಾರತ ತಂಡದಿಂದ ಹೊರಗುಳಿದ ಎಲ್ಲರೂ ರಣಜಿ ಆಡಲೇಬೇಕು ಎಂದು ವಾರ್ನಿಂಗ್ ಕೊಟ್ಟಿದ್ದರು. ಅಷ್ಟೇ ಅಲ್ಲ, ಹೆಡ್ ಕೋಚ್ ರಾಹುಲ್ ದ್ರಾವಿಡ್ ಕೂಡ ಅದೇ ಸಲಹೆ ನೀಡಿದ್ದರು. ಆದರೆ, ಇಶಾನ್ ಕಿಶನ್ ಮತ್ತು ಶ್ರೇಯಸ್ ಇದಕ್ಕೆ ಗಮನ ಕೊಡದೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಹೀಗಾಗಿ ಇವರನ್ನು ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟೀಮ್ ಇಂಡಿಯಾದಿಂದ ಕೈ ಬಿಟ್ಟ ಬೆನ್ನಲ್ಲೇ ಎಚ್ಚೆತ್ತ ಅಯ್ಯರ್
ರಣಜಿ ಕ್ರಿಕೆಟ್ ಆಡಲು ಸ್ಟಾರ್ ಕ್ರಿಕೆಟರ್ ಅಯ್ಯರ್ ನಿರ್ಧಾರ!
ಮುಂಬೈ ತಂಡದ ಪರ ರಣಜಿ ಕ್ರಿಕೆಟ್ ಆಡಲಿರೋ ಶ್ರೇಯಸ್
ಬಿಸಿಸಿಐ ಮಾತಿಗೆ ಕ್ಯಾರೇ ಎನ್ನದೆ ರಣಜಿ ಕ್ರಿಕೆಟ್ ಆಡಲು ಹಿಂದೇಟು ಹಾಕಿದ್ದ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಶ್ರೇಯಸ್ ಅಯ್ಯರ್ಗೆ ಗುತ್ತಿಗೆ ಪಟ್ಟಿಯಿಂದ ಕೊಕ್ ನೀಡಲಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಶ್ರೇಯಸ್ ಅಯ್ಯರ್ ಕೊನೆಗೂ ರಣಜಿ ಟ್ರೋಫಿ ಆಡಲು ನಿರ್ಧರಿಸಿದ್ದಾರೆ.
ಹೌದು, ಮಾರ್ಚ್ 2ನೇ ತಾರೀಕಿನಿಂದ ತಮಿಳುನಾಡು ವಿರುದ್ಧ ನಡೆಯೋ ರಣಜಿ ಸೆಮಿ ಫೈನಲ್ನಲ್ಲಿ ಮುಂಬೈ ಪರ ಆಡಲಿದ್ದಾರೆ. ಈ ಪಂದ್ಯಕ್ಕೆ ಈಗಾಗಲೇ ಮುಂಬೈ ತಂಡ ಪ್ರಕಟಗೊಂಡಿದ್ದು, ಶ್ರೇಯಸ್ ಅಯರ್ ಕೂಡ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಇನ್ನು, ಬೆನ್ನು ನೋವಿನಿಂದಾಗಿ ಶ್ರೇಯಸ್ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದ ಬಳಿಕ ತಂಡದಿಂದ ಹೊರಬಿದ್ದಿದ್ದರು. ಬಳಿಕ ಎನ್ಸಿಎಗೆ ಆಗಮಿಸಿ ಪುನಶ್ಚೇತನ ಶಿಬಿರಕ್ಕೆ ಹಾಜರಾಗಿ ಸುಧಾರಿಸಿಕೊಂಡಿದ್ದರು. ಹೆಡ್ ಕೋಚ್ ರಾಹುಲ್ ದ್ರಾವಿಡ್ ರಣಜಿ ಆಡಿ ಎಂದಿದ್ರೂ ಕ್ಯಾರೇ ಎನ್ನದೆ ಶ್ರೇಯಸ್ ಅಯ್ಯರ್ ರೆಸ್ಟ್ನಲ್ಲಿ ಇದ್ದರು.
ಅಸಲಿಗೆ ಆಗಿದ್ದೇನು..?
ಬಿಸಿಸಿಐ ತಮ್ಮ ಒಪ್ಪಂದದ ಆಟಗಾರರು ರಣಜಿ ಟ್ರೋಫಿ ಆಡಬೇಕೆಂದು ಖಡಕ್ ಆಗಿ ಹೇಳಿತ್ತು. ಈ ಬಗ್ಗೆ ಪ್ರತಿ ಆಟಗಾರರಿಗೆ ಪತ್ರ ಬರೆದು ಬಿಸಿಸಿಐ ಜನರಲ್ ಸೆಕ್ರೆಟರಿ ಜಯ್ ಶಾ ಅವರೇ ಸೂಚನೆ ನೀಡಿದ್ದರು. ಭಾರತ ತಂಡದಿಂದ ಹೊರಗುಳಿದ ಎಲ್ಲರೂ ರಣಜಿ ಆಡಲೇಬೇಕು ಎಂದು ವಾರ್ನಿಂಗ್ ಕೊಟ್ಟಿದ್ದರು. ಅಷ್ಟೇ ಅಲ್ಲ, ಹೆಡ್ ಕೋಚ್ ರಾಹುಲ್ ದ್ರಾವಿಡ್ ಕೂಡ ಅದೇ ಸಲಹೆ ನೀಡಿದ್ದರು. ಆದರೆ, ಇಶಾನ್ ಕಿಶನ್ ಮತ್ತು ಶ್ರೇಯಸ್ ಇದಕ್ಕೆ ಗಮನ ಕೊಡದೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಹೀಗಾಗಿ ಇವರನ್ನು ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ