/newsfirstlive-kannada/media/post_attachments/wp-content/uploads/2025/03/Shubman-Gill.jpg)
ಸದ್ಯ ನಡೆಯುತ್ತಿರೋ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ 265 ರನ್ಗಳ ಟಾರ್ಗೆಟ್ ನೀಡಿದೆ.
ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಇನ್ನಿಂಗ್ಸ್ ಶುರು ಮಾಡಿದರು. ಕಳೆದ ಎರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಉಪನಾಯಕ ಶುಭ್ಮನ್ ಗಿಲ್ ಸಿಕ್ಕ ಸುವರ್ಣಾವಕಾಶ ಕೈಚೆಲ್ಲಿದರು.
ಲೀಗ್ ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿ ದಾಖಲೆ ಬರೆದರು. ಪಾಕಿಸ್ತಾನ ವಿರುದ್ಧ ನಡೆದ ರೋಚಕ ಪಂದ್ಯದಲ್ಲೂ ತಾಳ್ಮೆಯ ಬ್ಯಾಟಿಂಗ್ ಮಾಡಿ 46 ರನ್ ಕಲೆ ಹಾಕಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ರು.
ಕೈ ಕೊಟ್ಟ ಶುಭ್ಮನ್ ಗಿಲ್
ನ್ಯೂಜಿಲೆಂಡ್ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ ಕೇವಲ 2 ರನ್ಗೆ ಔಟಾಗಿದ್ದ ಶುಭ್ಮನ್ ಗಿಲ್ ಇಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಕೇವಲ 8 ರನ್ಗೆ ಔಟಾಗಿದ್ದಾರೆ. ಈ ಮೂಲಕ ತನ್ನ ವೃತ್ತಿ ಜೀವನದಲ್ಲಿ ಸಿಕ್ಕ ದೊಡ್ಡ ಅವಕಾಶವನ್ನೇ ಕೈ ಚೆಲ್ಲಿದ್ದಾರೆ. ಇವರು ಭಾರತ ತಂಡವನ್ನು ಗೆಲ್ಲಿಸಿದ್ದಾರೆ ಬಿಸಿಸಿಐ ಸೆಲೆಕ್ಷನ್ ಕಮಿಟಿಗೆ ಮತ್ತಷ್ಟು ನಂಬಿಕೆ ಬರುತ್ತಿತ್ತು. ಗಿಲ್ ಕ್ಯಾಪ್ಟನ್ ರೇಸ್ನಲ್ಲಿರೋ ಕಾರಣ ಇವರ ಆಟದ ಮೇಲೆ ಎಲ್ಲರ ಗಮನ ಇರುತ್ತದೆ.
ಟೀಮ್ ಇಂಡಿಯಾದ ಆಟಗಾರ ಗಿಲ್ಗೆ ಸತತ ಅವಕಾಶ ನೀಡಲಾಗುತ್ತಿದೆ. ಆದರೆ, ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತನ್ನ ಮೇಲಿಟ್ಟ ನಂಬಿಕೆಯನ್ನು ಇವರು ಕೆಲವೊಮ್ಮೆ ಹುಸಿಗೊಳಿಸುತ್ತಾರೆ. ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಭಾರತ ಏಕದಿನ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದು ಕಷ್ಟ.
ಇದನ್ನೂ ಓದಿ:ನಟಿ ತಮನ್ನಾ-ವಿಜಯ್ ಮಧ್ಯೆ ಬ್ರೇಕಪ್; ಇಬ್ಬರ ಸಂಬಂಧ ಮುರಿದು ಬೀಳಲು ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್