/newsfirstlive-kannada/media/post_attachments/wp-content/uploads/2025/06/SIDDARAMAIAH-1.jpg)
ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ನಡೆದ ಘೋರ ದುರಂತ ಇದಾಗಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಂದು ಮಹತ್ವದ ಸಭೆ ನಡೆಸಿ ಆರು ಪ್ರಮುಖ ಆದೇಶಗಳನ್ನು ಹೊರಡಿಸಿದೆ.
ಯಾವುದು ಆ ಆರು ಆದೇಶಗಳು..?
ಆದೇಶ 1: ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ
ಆದೇಶ 2: RCB, DNA, KSCA ಪ್ರತಿನಿಧಿಸುವ ವ್ಯಕ್ತಿಗಳ ಬಂಧನಕ್ಕೆ ಸೂಚನೆ
ಆದೇಶ 3: ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು
ಆದೇಶ 4: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ FIR ಸಿಐಡಿಗೆ ವರ್ಗಾವಣೆ
ಆದೇಶ 5: ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂ ಇನ್ಚಾರ್ಜ್ ಅಮಾನತು
ಆದೇಶ 6: ಸಿಪಿಐ, ಹೆಚ್ಚುವರಿ ಪೊಲೀಸ್ ಆಯುಕ್ತ ಅಮಾನತು
ಇದನ್ನೂ ಓದಿ: ಬೆಂಗಳೂರು ಪೊಲೀಸ್ ಕಮಿಷನರ್ ತಲೆದಂಡ -ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡಿದ ಸರ್ಕಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ