ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ

author-image
Harshith AS
Updated On
ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ 
Advertisment
  • ದುಷ್ಕರ್ಮಿಗಳಿಂದ ಹತನಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಘೋಷಣೆ
  • ಮುಖ್ಯಮಂತ್ರಿ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ
  • ಸಿದ್ದರಾಮಯ್ಯ ಸರ್ಕಾರದಿಂದ ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಪರಿಹಾರ

ಮಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತನಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾಚ್​ಗೆ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮಂಗಳೂರಿನಲ್ಲಿ 2018 ಜನವರಿ 3 ರಂದು ಕಾಟಿಪಳ್ಳದ ದೀಪಕ್​ ರಾವ್​ ದುಷ್ಕರ್ಮಿಗಳಿಂದ ಸಾವನ್ನಪ್ಪಿದ್ದರು. ಕಳೆದ ಜುಲೈ 19ರಂದು ಬೆಳ್ಳಾರೆಯ ಮಸೂದ್​​ ಬಲಿಯಾಗಿದ್ದರು. ಮಂಗಳಪೇಟೆಯ ಮೊಹಮ್ಮದ್​ ಫಾಝಿಲ್​ ಕೂಡ ದುಷ್ಕರ್ಮಿಗಳಿದ ಬಲಿಯಾಗಿದ್ದರು. ಕಳೆದ ವರ್ಷ ಡಿಸೆಂಬರ್​ 24ರಂದು ಕಾಟಿಪಳ್ಳದ ಅಬ್ದುಲ್​ ಜಲೀಲ್​ ಕೂಡ ಕೊನೆಯುಸಿರೆಳೆದಿದ್ದರು. ಆದರೀಗ ಈ ನಾಲ್ಕು ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಿದೆ.

ಅಂದಹಾಗೆಯೇ ಮತೀಯ ಕಾರಣದಿಂದ ಈ ನಾಲ್ಕು ಜನರು ಕೊಲೆಯಾಗಿದ್ದರು. ಆದರೆ ಇವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಘೋಷಣೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment