/newsfirstlive-kannada/media/post_attachments/wp-content/uploads/2023/08/Siddaramaiah-3.jpg)
ಬೆಂಗಳೂರು: ಇಂದಿರಾ ಕ್ಯಾಂಟೀನ್​ ಊಟದ ದರದಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಪಡಿಸಿದ್ದಾರೆ.
ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ.ಪಾಟೀಲ್​, ಇಂದಿರಾ ಕ್ಯಾಂಟೀಲ್​ನ ಊಟದ ದರ ಹೆಚ್ಚಳವಾಗಲಿದೆ ಎಂದಿದ್ದರು. ಈ ಸುದ್ದಿ ಜನರಲ್ಲಿ ಗೊಂದಲ ಮೂಡಿಸಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್​ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5ರೂ ಹೆಚ್ಚಳವಾಗಿದೆ ಅಷ್ಟೇ.
ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಅಂತ ಹೇಳಿದ್ದಾರೆ. ಈ ಬೆನ್ನಲ್ಲೇ ಸಚಿವ ಹೆಚ್​ಕೆ ಪಾಟೀಲ್​ ಕೂಡ ಇಂದಿರಾ ಕ್ಯಾಂಟೀನ್​ನಲ್ಲಿ ಆಹಾರದ ದರ ಬದಲಾವಣೆ ಇಲ್ಲ ಅಂತ ಸ್ಪಷ್ಟನೆ ಕೊಟ್ಟಿದ್ದಾರೆ.
ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ಗಳನ್ನು 27 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ.
- ಮುಖ್ಯಮಂತ್ರಿ… pic.twitter.com/NdSSfCYDd3— CM of Karnataka (@CMofKarnataka) August 19, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us