ಇಂದು ಸಹ ಹೆಚ್ಡಿಕೆಗೆ ಮುಂದುವರೆಯಲಿದೆ ಚಿಕಿತ್ಸೆ
ಅಪೋಲೋ ವೈದ್ಯ ಡಾ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ
ನಾಳೆಯವರೆಗೆ ವೈದ್ಯರ ನಿಗಾದಲ್ಲಿರುವ ಕುಮಾರಸ್ವಾಮಿ
ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. @hd_kumaraswamy
— Siddaramaiah (@siddaramaiah) August 30, 2023
ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ದೂರವಾಣಿ ಕರೆ ಮೂಲಕ ಕುಮಾರಸ್ವಾಮಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಇದೀಗ ನ್ಯೂಸ್ಫಸ್ಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹೆಚ್.ಡಿ ಕುಮಾರಸ್ವಾಮಿಗೆ ಇವತ್ತೂ ಕೂಡ ಚಿಕಿತ್ಸೆ ಮುಂದುವರಿಯಲಿದೆ. ಬನ್ನೇರುಘಟ್ಟ ರಸ್ತೆಬಳಿಯಿರುವ ಅಪೋಲೋ ವೈದ್ಯ ಡಾ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಐಸಿಯುನಿಂದ ವಾರ್ಡ್ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ನಾಳೆಯವರೆಗೆ ವೈದ್ಯರ ನಿಗಾದಲ್ಲಿರುವ ಹೆಚ್ಡಿಕೆ ಇರಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಸಹ ಹೆಚ್ಡಿಕೆಗೆ ಮುಂದುವರೆಯಲಿದೆ ಚಿಕಿತ್ಸೆ
ಅಪೋಲೋ ವೈದ್ಯ ಡಾ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ
ನಾಳೆಯವರೆಗೆ ವೈದ್ಯರ ನಿಗಾದಲ್ಲಿರುವ ಕುಮಾರಸ್ವಾಮಿ
ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. @hd_kumaraswamy
— Siddaramaiah (@siddaramaiah) August 30, 2023
ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ದೂರವಾಣಿ ಕರೆ ಮೂಲಕ ಕುಮಾರಸ್ವಾಮಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಇದೀಗ ನ್ಯೂಸ್ಫಸ್ಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹೆಚ್.ಡಿ ಕುಮಾರಸ್ವಾಮಿಗೆ ಇವತ್ತೂ ಕೂಡ ಚಿಕಿತ್ಸೆ ಮುಂದುವರಿಯಲಿದೆ. ಬನ್ನೇರುಘಟ್ಟ ರಸ್ತೆಬಳಿಯಿರುವ ಅಪೋಲೋ ವೈದ್ಯ ಡಾ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಐಸಿಯುನಿಂದ ವಾರ್ಡ್ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ನಾಳೆಯವರೆಗೆ ವೈದ್ಯರ ನಿಗಾದಲ್ಲಿರುವ ಹೆಚ್ಡಿಕೆ ಇರಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ