newsfirstkannada.com

ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ರಿಲೀಫ್.. ಜಾಮೀನು ಮಂಜೂರು ಮಾಡಿದ ಕೋರ್ಟ್​..!

Share :

Published June 1, 2024 at 11:56am

    ಜಾಮೀನು ಸಿಗ್ತಿದ್ದಂತೆ ಕೋರ್ಟ್​ನಿಂದ ತೆರಳಿದ CM, DCM

    ರಾಹುಲ್ ಗಾಂಧಿ ಗೈರು.. ವಿನಾಯತಿ ಕೇಳಿದ ವಕೀಲರು

    ನ್ಯಾಯಾಧೀಶರ ಮುಂದೆ ಕೈಕಟ್ಟಿ ನಿಂತಿದ್ದ ಶಿವಕುಮಾರ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಪ್ರಕರಣದಲ್ಲಿ ದಾಖಲಾಗಿರುವ ಖಾಸಗಿ ಮಾನನಷ್ಟ ಕೇಸ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ..?

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾಹೀರಾತು ಮೂಲಕ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಿಎಂ ಹುದ್ದೆಗಾಗಿ 2500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಹೈಕಮಾಂಡ್​ಗೆ ನೀಡಿ ರಾಜ್ಯ ಬಿಜೆಪಿ ನಾಯಕರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಕೋವಿಡ್ ಕಿಟ್ ಪೂರೈಕೆ ಟೆಂಡರ್​ ಡೀಲ್​ನಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್​ನಲ್ಲಿ ಶೇ 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮೀಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್​ ಆರೋಪ ಮಾಡಿತ್ತು.

ಇದನ್ನೂ ಓದಿ:ಇಂದು ಕೋರ್ಟ್​ ಕಟಕಟೆಯಲ್ಲಿ ಸಿಎಂ ಸಿದ್ದರಾಮಯ್ಯ.. ಡಿಕೆ ಶಿವಕುಮಾರ್; ಯಾವ ವಿಚಾರ..?

ಇದನ್ನು ಪ್ರಶ್ನಿಸಿ ಬಿಜೆಪಿ ಪ್ರಧಾನಕಾರ್ಯದರ್ಶಿ ಕೇಶವಪ್ರಸಾದ್, ಖಾಸಗಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು. ಕೆಪಿಸಿಸಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯನ್ನು ಪ್ರತಿವಾದಿಯಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು​ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು.

ಕೋರ್ಟ್​ನಲ್ಲಿ ಏನಾಯ್ತು..?

ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮುಂದೆ ಇಬ್ಬರು ನಾಯಕರು ಹಾಜರಾಗಿದ್ದರು. ಜಡ್ಜ್ ಮುಂದೆ ಡಿಕೆ ಶಿವಕುಮಾರ್ ಕೈಕಟ್ಟಿ ನಿಂತಿದ್ದರು. ಆರೋಪಿಗಳು ಯಾರು ಯಾರು ಎಂಬ ಪ್ರಶ್ನೆಗೆ ವಕೀಲರು ಎ-2 ಡಿಕೆ ಶಿವಕುಮಾರ್, ಎ-3 ಸಿದ್ದರಾಮಯ್ಯ ಎಂದು ವಕೀಲರು ಕೋರ್ಟ್​ಗೆ ತಿಳಿಸಿದರು. ಇದೇ ವೇಳೆ ಇಬ್ಬರೂ ಕೂಡ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು. ಅಲ್ಲದೇ ವಿಚಾರಣೆ ಹಾಜರಾಗದ ರಾಹುಲ್ ಗಾಂಧಿಗೆ ವಿನಾಯತಿ ನೀಡುವಂತೆ ಕೋರ್ಟ್ ಬಳಿ ಕಾಂಗ್ರೆಸ್ ಪರ ವಕೀಲರು ಮನವಿ ಮಾಡಿಕೊಂಡರು.

ಇದನ್ನೂ ಓದಿ:ಇಂದು ಮಿಂಚಿದವರಿಗೆ ಜಾಕ್​ಪಾಟ್- ಅಭ್ಯಾಸ ಪಂದ್ಯದ ಪ್ಲಾನ್ ತಿಳಿಸಿದ ಕ್ಯಾಪ್ಟನ್ ಶರ್ಮಾ..!

ಇಂಡಿಯಾ ಒಕ್ಕೂಟದ ಮೀಟಿಂಗ್​ನಲ್ಲಿ ರಾಹುಲ್ ಗಾಂಧಿ ಭಾಗಿ ಆಗಿರೋದಕ್ಕೆ ಬಿಜೆಪಿ ಪರ ವಕೀಲರು ತಕರಾರು ತೆಗೆದರು. ಕೋರ್ಟ್ ಮುಂದೆ ಎಲ್ಲರು ಸಮಾನರು, ಹೀಗಿದ್ದಾಗ ಏಕೆ ವಿನಾಯಿತಿ‌ ನೀಡಬೇಕು? ಎಂದು ವಕೀಲ ವಿನೋದ್ ಕುಮಾರ್ ವಾದಿಸಿದರು. ನಂತರ ರಾಹುಲ್ ಗಾಂಧಿ ಗೈರು ಕುರಿತು ಕೋರ್ಟ್​ನ ವಾದ ಪ್ರತಿವಾದ ನಡೆಸಿದ ಕೋರ್ಟ್​ ತೀರ್ಪನ್ನು ಮಧ್ಯಾಹ್ನಕ್ಕೆ ಕಾಯ್ದಿರಿಸಿತು. ಇತ್ತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ಗೆ ಜಾಮೀನು ಸಿಗುತ್ತಿದ್ದಂತೆಯೇ ಬಾಂಡ್ ಪೇಪರ್​ಗೆ ಸಹಿ ಮಾಡಿ ಕೋರ್ಟ್​ನಿಂದ ನಿರ್ಗಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ರಿಲೀಫ್.. ಜಾಮೀನು ಮಂಜೂರು ಮಾಡಿದ ಕೋರ್ಟ್​..!

https://newsfirstlive.com/wp-content/uploads/2024/02/SIDDU-DKS-RAHUL.jpg

    ಜಾಮೀನು ಸಿಗ್ತಿದ್ದಂತೆ ಕೋರ್ಟ್​ನಿಂದ ತೆರಳಿದ CM, DCM

    ರಾಹುಲ್ ಗಾಂಧಿ ಗೈರು.. ವಿನಾಯತಿ ಕೇಳಿದ ವಕೀಲರು

    ನ್ಯಾಯಾಧೀಶರ ಮುಂದೆ ಕೈಕಟ್ಟಿ ನಿಂತಿದ್ದ ಶಿವಕುಮಾರ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಪ್ರಕರಣದಲ್ಲಿ ದಾಖಲಾಗಿರುವ ಖಾಸಗಿ ಮಾನನಷ್ಟ ಕೇಸ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ..?

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾಹೀರಾತು ಮೂಲಕ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಿಎಂ ಹುದ್ದೆಗಾಗಿ 2500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಹೈಕಮಾಂಡ್​ಗೆ ನೀಡಿ ರಾಜ್ಯ ಬಿಜೆಪಿ ನಾಯಕರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಕೋವಿಡ್ ಕಿಟ್ ಪೂರೈಕೆ ಟೆಂಡರ್​ ಡೀಲ್​ನಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್​ನಲ್ಲಿ ಶೇ 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮೀಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್​ ಆರೋಪ ಮಾಡಿತ್ತು.

ಇದನ್ನೂ ಓದಿ:ಇಂದು ಕೋರ್ಟ್​ ಕಟಕಟೆಯಲ್ಲಿ ಸಿಎಂ ಸಿದ್ದರಾಮಯ್ಯ.. ಡಿಕೆ ಶಿವಕುಮಾರ್; ಯಾವ ವಿಚಾರ..?

ಇದನ್ನು ಪ್ರಶ್ನಿಸಿ ಬಿಜೆಪಿ ಪ್ರಧಾನಕಾರ್ಯದರ್ಶಿ ಕೇಶವಪ್ರಸಾದ್, ಖಾಸಗಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು. ಕೆಪಿಸಿಸಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯನ್ನು ಪ್ರತಿವಾದಿಯಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು​ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು.

ಕೋರ್ಟ್​ನಲ್ಲಿ ಏನಾಯ್ತು..?

ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮುಂದೆ ಇಬ್ಬರು ನಾಯಕರು ಹಾಜರಾಗಿದ್ದರು. ಜಡ್ಜ್ ಮುಂದೆ ಡಿಕೆ ಶಿವಕುಮಾರ್ ಕೈಕಟ್ಟಿ ನಿಂತಿದ್ದರು. ಆರೋಪಿಗಳು ಯಾರು ಯಾರು ಎಂಬ ಪ್ರಶ್ನೆಗೆ ವಕೀಲರು ಎ-2 ಡಿಕೆ ಶಿವಕುಮಾರ್, ಎ-3 ಸಿದ್ದರಾಮಯ್ಯ ಎಂದು ವಕೀಲರು ಕೋರ್ಟ್​ಗೆ ತಿಳಿಸಿದರು. ಇದೇ ವೇಳೆ ಇಬ್ಬರೂ ಕೂಡ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು. ಅಲ್ಲದೇ ವಿಚಾರಣೆ ಹಾಜರಾಗದ ರಾಹುಲ್ ಗಾಂಧಿಗೆ ವಿನಾಯತಿ ನೀಡುವಂತೆ ಕೋರ್ಟ್ ಬಳಿ ಕಾಂಗ್ರೆಸ್ ಪರ ವಕೀಲರು ಮನವಿ ಮಾಡಿಕೊಂಡರು.

ಇದನ್ನೂ ಓದಿ:ಇಂದು ಮಿಂಚಿದವರಿಗೆ ಜಾಕ್​ಪಾಟ್- ಅಭ್ಯಾಸ ಪಂದ್ಯದ ಪ್ಲಾನ್ ತಿಳಿಸಿದ ಕ್ಯಾಪ್ಟನ್ ಶರ್ಮಾ..!

ಇಂಡಿಯಾ ಒಕ್ಕೂಟದ ಮೀಟಿಂಗ್​ನಲ್ಲಿ ರಾಹುಲ್ ಗಾಂಧಿ ಭಾಗಿ ಆಗಿರೋದಕ್ಕೆ ಬಿಜೆಪಿ ಪರ ವಕೀಲರು ತಕರಾರು ತೆಗೆದರು. ಕೋರ್ಟ್ ಮುಂದೆ ಎಲ್ಲರು ಸಮಾನರು, ಹೀಗಿದ್ದಾಗ ಏಕೆ ವಿನಾಯಿತಿ‌ ನೀಡಬೇಕು? ಎಂದು ವಕೀಲ ವಿನೋದ್ ಕುಮಾರ್ ವಾದಿಸಿದರು. ನಂತರ ರಾಹುಲ್ ಗಾಂಧಿ ಗೈರು ಕುರಿತು ಕೋರ್ಟ್​ನ ವಾದ ಪ್ರತಿವಾದ ನಡೆಸಿದ ಕೋರ್ಟ್​ ತೀರ್ಪನ್ನು ಮಧ್ಯಾಹ್ನಕ್ಕೆ ಕಾಯ್ದಿರಿಸಿತು. ಇತ್ತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ಗೆ ಜಾಮೀನು ಸಿಗುತ್ತಿದ್ದಂತೆಯೇ ಬಾಂಡ್ ಪೇಪರ್​ಗೆ ಸಹಿ ಮಾಡಿ ಕೋರ್ಟ್​ನಿಂದ ನಿರ್ಗಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More