ಮುಂಬೈಗೆ ಬರುತ್ತಿದ್ದ ಹಡಗು ಆಳ ಸಮುದ್ರಲ್ಲಿ ಸ್ಫೋಟ.. ಅಸಲಿಗೆ ಆಗಿದ್ದೇನು..?

author-image
Ganesh
Updated On
ಮುಂಬೈಗೆ ಬರುತ್ತಿದ್ದ ಹಡಗು ಆಳ ಸಮುದ್ರಲ್ಲಿ ಸ್ಫೋಟ.. ಅಸಲಿಗೆ ಆಗಿದ್ದೇನು..?
Advertisment
  • ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯಾಚರಣೆ
  • 18 ಸಿಬ್ಬಂದಿಯ ರಕ್ಷಣೆ, ಉಳಿದ ನಾಲ್ವರಿಗಾಗಿ ಶೋಧ
  • 270 ಮೀಟರ್ ಉದ್ದದ ಸಿಂಗಾಪುರದ MV ವಾನ್ ಹೈ 503 ಹಡಗು

270 ಮೀಟರ್ ಉದ್ದದ ಸಿಂಗಾಪುರದ MV ವಾನ್ ಹೈ 503 ಹಡಗು ಜೂನ್ 7 ರಂದು ಕೊಲಂಬೊದಿಂದ 650ಕ್ಕೂ ಹೆಚ್ಚು ಕಂಟೇನರ್‌ಗಳನ್ನ ಹೊತ್ತು ಮುಂಬೈಗೆ ತೆರಳಿತ್ತು. ಕೇರಳ ಕರಾವಳಿಯಲ್ಲಿ ಸಾಗುತ್ತಿದ್ದಾಗ ಹಡಗಿನ ಒಳ ಭಾಗದಲ್ಲಿ ಸ್ಫೋಟ ಸಂಭವಿಸಿದೆ. ಕಂಟೇನರ್‌ಗಳಿಂದ ತುಂಬಿದ್ದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೇರಳ ಕರಾವಳಿಯ ಕೋಝಿಕೋಡ್ ಮತ್ತು ಕಣ್ಣೂರಿನಿಂದ ಪಶ್ಚಿಮಕ್ಕೆ ಸುಮಾರು 120 ಕಿಲೋ ಮೀಟರ್​ ದೂರದಲ್ಲಿ ಈ ಅವಘಡ ಸಂಭವಿಸಿದೆ. ಕ್ಷಣಮಾತ್ರ ಹಡಗು ಬೆಂಕಿಯ ಜ್ವಾಲೆಗೆ ನಡುಗಿದೆ.

18 ಸಿಬ್ಬಂದಿ ರಕ್ಷಣೆ, ಉಳಿದ ನಾಲ್ವರಿಗಾಗಿ ಶೋಧ

ಬೆಂಕಿ ಅವಘಡದ ಮಾಹಿತಿ ಲಭಿಸುತ್ತಿದ್ದಂತೆ ಭಾರತೀಯ ನೌಕಾಪಡೆ ಅಲರ್ಟ್ ಆಗಿದೆ ತಕ್ಷಣವೇ INS ಸೂರತ್ ಹಡಗನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 22 ಜನರ ಪೈಕಿ 18 ಸಿಬ್ಬಂದಿಯನ್ನ ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ರಕ್ಷಣೆ ಮಾಡಿದೆ. ಉಳಿದ ನಾಲ್ವರು ಕಣ್ಮರೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: ಅಮ್ಮ ಕೊಟ್ಟ ಊಟ ಕೂಡ ಮಾಡದೆ ಮಗ ನೇಣಿಗೆ ಶರಣು.. ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಆತ್ಮಹತ್ಯೆ ಶಂಕೆ..

publive-image

ರಕ್ಷಣೆಗೊಳಗಾದ 18 ಮಂದಿ ಸಿಬ್ಬಂದಿಯನ್ನ ಆಳಸಮುದ್ರದಿಂದ ನವ ಮಂಗಳೂರು ಬಂದರುಗೆ ಕರೆತರಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ನಾಲ್ವರಿಗೆ ಭಾಗಶಃ ಗಾಯಗಳಾಗಿದೆ. ಆರು ಮಂದಿಯನ್ನ ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ 12 ಮಂದಿಗೆ ನಗರದ ಹೊಟೇಲ್​ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಹಡಗಿನಲ್ಲಿ ನಾಲ್ಕು ವಿಧದ ರಾಸಾಯನಿಕ ವಸ್ತುಗಳನ್ನ ಸಾಗಿಸಲಾಗುತ್ತಿತ್ತು. ಪ್ರಬಲವಾದ ಗಾಳಿಗೆ ಮತ್ತು ಘರ್ಷಣೆಗೆ ಒಡ್ಡಿಕೊಂಡಾಗ ಹಡಗಿನಲ್ಲಿದ್ದ ರಾಸಾಯನಿಕಗಳಲ್ಲಿ ಬೆಂಕಿ ಹೊತ್ತಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಹಡಗಿನಲ್ಲಿ ವಿಷಕಾರಿ ವಸ್ತುಗಳು ಸಹ ಇವೆ ಎಂದು ಹೇಳಲಾಗುತ್ತಿದೆ. ದುರಂತದಲ್ಲಿ 20 ಕಂಟೈನರ್‌ಗಳು ಸಮುದ್ರಕ್ಕೆ ಬಿದ್ದಿವೆ. ಇನ್ನುಳಿದ ನಾಲ್ವರಿಗಾಗಿ ಶೋಧ ನಡೀತಿದೆ.

ಇದನ್ನೂ ಓದಿ: ಭಾರೀ ಒತ್ತಡದಲ್ಲಿ ಟೀಂ ಇಂಡಿಯಾ.. ತಂಡದ ಆತ್ಮವಿಶ್ವಾಸ ಕುಗ್ಗಲು ಐದು ಕಾರಣ..!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment