/newsfirstlive-kannada/media/post_attachments/wp-content/uploads/2025/01/p-jayachandran.jpg)
ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ. ಜಯಚಂದ್ರನ್ (80) ನಿಧನರಾಗಿದ್ದಾರೆ.
ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದ ಇವರು ಇನ್ನಿಲ್ಲ. ಇವರು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಸಿದ್ಧ ಗಾಯಕರು. ಪಿ. ಜಯಚಂದ್ರನ್ ಅವರು ತಮ್ಮ ಹಾಡುಗಳ ಮೂಲಕವೇ ಎಲ್ಲರ ಮನ ಗೆದ್ದವರು.
ಮಂದಾರ ಪುಷ್ಪವು ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ.. ಯಾರಿಗೆ ಯಾರೂ ಇಲ್ಲ, ಕಾಲ ಮತ್ತೊಮ್ಮೆ ನಮಗಾಗಿ ಬಂತು ಹೀಗೆ ಹಲವಾರು ಕನ್ನಡದ ಸುಪ್ರಿಸಿದ್ಧ ಗೀತೆಗಳನ್ನು ಹಾಡಿ ಜನಪ್ರಿಯತೆ ಗಳಿಸಿದ್ದರು.
ಇವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಐದು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸಂದಿವೆ. ಕೇರಳ ಸರ್ಕಾರದಿಂದ ಜೆ.ಸಿ. ಡೇನಿಯಲ್ ಪ್ರಶಸ್ತಿ ಮತ್ತು ತಮಿಳುನಾಡು ಸರ್ಕಾರದಿಂದ ಕಲೈಮಾಮಣಿ ಪ್ರಶಸ್ತಿ ಕೂಡ ನೀಡಲಾಗಿದೆ.
ಜನನ ಯಾವಾಗ?
1944ರ ಮಾರ್ಚ್ 3ರಂದು ಎರ್ನಾಕುಲಂನಲ್ಲಿ ಜನಿಸಿದ ಜಯಚಂದ್ರನ್ ಅವರು, ಪತ್ನಿ ಲಲಿತಾ, ಮಗಳು ಲಕ್ಷ್ಮಿ ಮತ್ತು ಮಗ ದೀನನಾಥನ್ ಅವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಇಡೀ ಕುಟುಂಬ ಕಂಬನಿ ಮಿಡಿದಿದೆ.
ಇದನ್ನೂ ಓದಿ: ತಿರುಪತಿ ದುರಂತ: ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ