/newsfirstlive-kannada/media/post_attachments/wp-content/uploads/2025/05/Prithvi-Bhat11.jpg)
ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಸದ್ಯ ಸಖತ್ ಖುಷಿಯಲ್ಲಿದ್ದಾರೆ. ತಮ್ಮ ಅದ್ಭುತ ಕಂಠದಿಂದಲೇ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದ ಅವರು ಕೆಲ ಸಿನಿಮಾಗಳಿಗೆ ಹಾಡು ಕೂಡ ಫೇಮಸ್ ಆಗಿದ್ದಾರೆ.
ಇದೀಗ ಪೋಷಕರ ವಿರೋಧದ ನಡುವೆಯೂ ಪೃಥ್ವಿ ಭಟ್ ಅವರು ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದ್ದಾರೆ. ಕಳೆದ ಮಾರ್ಚ್ 27ರಂದು ದೇವಸ್ಥಾನವೊಂದರಲ್ಲಿ ಪೃಥ್ವಿ ಭಟ್ ಹಾಗೂ ಅಭಿಷೇಕ್ ಅವರು ಮದುವೆಯಾಗಿದ್ದರು.
ಇದನ್ನೂ ಓದಿ: ಪುಟ್ಟಕ್ಕನ ಮಕ್ಕಳು ವೀಕ್ಷಕರಿಗೆ ಶಾಕಿಂಗ್ ಸುದ್ದಿ; ಮುಕ್ತಾಯದ ಹಂತದಲ್ಲಿದೆ ಟಾಪ್ ಸೀರಿಯಲ್
ಈ ಮದುವೆಗೆ ಪೃಥ್ವಿ ಭಟ್ ತಂದೆ ಅವರ ವಿರೋಧ ವ್ಯಕ್ತಪಡಿಸಿದ್ದರು. ಮನೆಯವರಿಗೆ ತಿಳಿಸದೆ ಪೃಥ್ವಿ ಭಟ್ ಮದುವೆಯಾಗಿದ್ದಕ್ಕೇ ತಂದೆ ಕೋಪಗೊಂಡಿದ್ದರು. ಪೃಥ್ವಿ ಭಟ್ ಮೂಲತಃ ಕಾಸರಗೋಡಿನವರು.
ಈ ಹಿಂದೆ ಪೃಥ್ವಿ ಭಟ್ ತಂದೆ ನನ್ನ ಮಗಳನ್ನು ವಶೀಕರಣ ಮಾಡಿ ಮದುವೆ ಮಾಡಲಾಗಿದೆ ಆರೋಪ ಮಾಡಿದ್ದರು. ಸಂಗೀತ ಪಾಠ ಹೇಳಿಕೊಡುವ ನರಹರಿ ದೀಕ್ಷಿತ್ ಇದಕ್ಕೆಲ್ಲ ಕಾರಣ ಎಂದು ಅವರು ಆರೋಪ ಮಾಡಿದ್ದರು.
ಈ ಬಗ್ಗೆ ಖುದ್ದು ನರಹರಿ ದೀಕ್ಷಿತ್ ಅವರು ಪ್ರತಿಕ್ರಿಯಿಸಿ, ಎರಡೂವರೆ ವರ್ಷದಿಂದ ಅಭಿಷೇಕ್, ಪೃಥ್ವಿಯನ್ನು ಪ್ರೀತಿ ಮಾಡುತ್ತಿದ್ದ. ಇದು ನಮಗೆ ಗೊತ್ತಾದಾಗ ನಾನೇ ಪೃಥ್ವಿ ಮನೆಗೆ ಹೋಗಿ ತಂದೆ ಬಳಿ ಮಾತನಾಡಿದ್ದೇನೆ.
ಇನ್ನೊಂದು ಹುಡುಗನನ್ನು ನೋಡಿ ಪೃಥ್ವಿ ನಿಶ್ಚಿತಾರ್ಥ ಮಾಡಲು ರೆಡಿಯಾದಾಗ ಪೃಥ್ವಿ ಈ ರೀತಿ ಮಾಡಿದ್ದಾಳೆ. ಪೃಥ್ವಿ ಮದುವೆ ಆಗುವ ದಿನವೇ ಅವಳು ಫೋನ್ ಮಾಡಿ ಅರ್ಜೆಂಟ್ ಇಲ್ಲಿಗೆ ಬನ್ನಿ ಸರ್ ಅಂತ ಹೇಳಿದಳು. ನಾನು ಹೋದಮೇಲೆ ಮದುವೆ ಆಗಿತ್ತು. ಅಕ್ಷತೆ ಕಾಳು ಹಾಕಿ ಬಂದೆ ಎಂದು ಹೇಳಿದ್ದರು.
ಆದ್ರೇ ಇದೀಗ ಎರಡೂವರೆ ತಿಂಗಳುಗಳ ಬಳಿಕ ಪೃಥ್ವಿ ಭಟ್ ಹಾಗೂ ಅಭಿಷೇಕ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ನಾನ್ ಫಿಕ್ಷನ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿದ್ದ ಅಭಿಷೇಕ್ ಹಾಗೂ ಗಾಯಕಿ ಆರತಕ್ಷತೆ ಸಮಾರಂಭಕ್ಕೆ ಸಾಕಷ್ಟು ಸ್ಟಾರ್ಗಳು ಬಂದು ಶುಭ ಹಾರೈಸಿದ್ದಾರೆ.
ನಿರೂಪಕಿ ಅನುಶ್ರೀ, ನಟಿ ಮೋಕ್ಷಿತಾ, ಪೈ, ಬಿಗ್ಬಾಸ್ ಸೀಸನ್ 11ರ ವಿನ್ನರ್, ಗಾಯಕ ಹನುಮಂತ ಲಮಾಣಿ ಬಂದಿದ್ದಾರೆ. ಅಲ್ಲದೇ ಸ್ಟಾರ್ ಗಾಯಕ ವಿಜಯ್ ಪ್ರಕಾಶ್ ದಂಪತಿ, ನಟ ಒಳ್ಳೆ ಹುಡುಗ ಪ್ರಥಮ್, ಸಿಂಗರ್ ಸುನೀಲ್, ಹಂಸಲೇಖ ಅವರ ಪತ್ನಿ ಲತಾ ಹಾಗೂ ಸರಿಗಮಪ ಸ್ಪರ್ಧಿಗಳು ಕೂಡ ಆಗಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ