ತಂಗಿ ಮದುವೆಯೇ ದೊಡ್ಡ ಕನಸು.. ತಾಯಿಗೆ ಆಧಾರವಾಗಿದ್ದ ಒಬ್ಬನೇ ಮಗ ರಾಕೇಶ್ ಪೂಜಾರಿ ದುರಂತ

author-image
Veena Gangani
Updated On
ತಂಗಿ ಮದುವೆಯೇ ದೊಡ್ಡ ಕನಸು.. ತಾಯಿಗೆ ಆಧಾರವಾಗಿದ್ದ ಒಬ್ಬನೇ ಮಗ ರಾಕೇಶ್ ಪೂಜಾರಿ ದುರಂತ
Advertisment
  • ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಟ ನಿಧನ
  • ಮನೆಗೆ ಆಧಾರ ಸ್ತಂಭವಾಗಿದ್ದ ನಟ ರಾಕೇಶ್ ಪೂಜಾರಿ
  • ತಂಗಿ ಮದುವೆ ಬಳಿಕ ತಾನು ಆಗುವುದಾಗಿ ಹೇಳಿದ್ದ ನಟ

ಕಾಮಿಡಿ ಕಿಲಾಡಿಗಳು ಸೀಸನ್ -3ರ ವಿನ್ನರ್​ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಸ್ನೇಹಿತನ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾರೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ರಾಕೇಶ್ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ: ಕನ್ನಡ ಕಿರುತೆರೆಯ ಖ್ಯಾತ ಕಲಾವಿದ ರಾಕೇಶ್ ಪೂಜಾರಿ ದುರಂತ ಅಂತ್ಯ; ಕಾರಣವೇನು?

publive-image

ರಾಕೇಶ್ ಪೂಜಾರಿ ಅವರು ತಮ್ಮ ತಂಗಿಯ ಮದುವೆ ಬಗ್ಗೆ ದೊಡ್ಡ ಕನಸು ಇಟ್ಟುಕೊಂಡಿದ್ದರಂತೆ. ಅಲ್ಲದೇ ಅದ್ಧೂರಿಯಾಗಿ ಮದುವೆ ಮಾಡುವ ತಯಾರಿ ನಡೆಸಿದ್ದರಂತೆ. ತಂಗಿ ಮದುವೆಯ ನಂತರ ತಾನು ಮದುವೆಯಾಗುವುದಾಗಿ ಸ್ನೇಹಿತರ ಬಳಿ ಹೇಳಿಕೊಂಡಿದ್ದರಂತೆ. ಆದ್ರೆ ಮನೆಗೆ ಆಧಾರವಾಗಿದ್ದ ರಾಕೇಶ್ ಪೂಜಾರಿ ತಾಯಿ ಮತ್ತು ತಂಗಿಯನ್ನ ಅಗಲಿದ್ದಾರೆ.

publive-image

ರಾಕೇಶ್ ಪೂಜಾರಿ ಅವರ ಹುಟ್ಟೂರು ಉಡುಪಿ. ಇವರ ತಂದೆ ದಿನಕರ್ ಪೂಜಾರಿ ಹಾಗೂ ತಾಯಿ ಶಾಂಭವಿ. ರಾಕೇಶ್​ ಪೂಜಾರಿ ಅವರಿಗೆ ಒಬ್ಬ ತಂಗಿ ಕೂಡ ಇದ್ದಾರೆ. ಜೀವನದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದ ರಾಕೇಶ್ ಪೂಜಾರಿಯವರಿಗೆ ಮೊದಲ ಯಶಸ್ಸು ಸಿಕ್ಕಿದ್ದು ಕಾಮಿಡಿ ಕಿಲಾಡಿಗಳು ಸೀಸನ್ 3 ವಿನ್ನರ್ ಆಗುವ ಮೂಲಕ.

publive-image

ಕಾಮಿಡಿ ಕಿಲಾಡಿನಲ್ಲಿ ವಿನ್ನರ್ ಆಗಬೇಕೆಂದು ರಾಕೇಶ್ ಹಗಲಿರುಳು ಎನ್ನದೇ ಶ್ರಮಿಸಿದ್ದರು. ಹಾಗೆಯೇ ತುಳುನಾಡಿನ ಕೊರಗಜ್ಜ ದೈವ ದೇವರಿಗೂ ಹರಕೆಯನ್ನು ಹೇಳಿಕೊಂಡಿದ್ದರು ರಾಕೇಶ್. ಅಂತೆಯೇ ಕೊರಗಜ್ಜ ದೈವದ ಅನುಗ್ರಹದಿಂದ ಗೆಲುವು ಸಾಧಿಸಿದರು. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ನಾಯಕ ಏಜೆಯ ಪಿಎ ವಿರೂಪಾಕ್ಷ ಪಾತ್ರದಲ್ಲಿ ನಟಿಸಿದ್ದರು.

publive-image

ಅಷ್ಟೇ ಅಲ್ಲದೇ ರಾಕೇಶ್ ಕನ್ನಡದಲ್ಲಿ ಪೈಲ್ವಾನ್, ಇದು ಎಂಥಾ ಲೋಕವಯ್ಯ ಮತ್ತು ತುಳುವಿನಲ್ಲಿ ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೋಕ್ಕೆಲ್ ಮುಂತಾದ ನಾಟಕಗಳು, ಸ್ಕಿಟ್‌ಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಇಷ್ಟೇ ಅಲ್ಲದೇ ಇವರು ಕರಾವಳಿಯ ರಿಯಾಲಿಟಿ ಶೋಗಳಾದ ಬಲೆ ತೇಲಿಪಾಲೆ, ಮೇ 22, ಸ್ಟಾರ್, ತುಯಿನಾಯೆ ಪೋಯೆ ಇತ್ಯಾದಿ ನಾಟಕದಲ್ಲಿ ಅಭಿನಯಿಸಿದ್ದಾರೆ. ರಾಕೇಶ್ ಅನಿರೀಕ್ಷಿತ ಸಾವಿನಿಂದ ಕನ್ನಡ ಕಿರುತೆರೆ ಇಂಡಸ್ಟ್ರಿ ಆಘಾತಕ್ಕೆ ಒಳಗಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment