ಕನ್ನಡಿಗರ ಭಾವನೆಗೆ ಧಕ್ಕೆ ತಂದಿದ್ದ ಗಾಯಕ; ಸೋನು ನಿಗಮ್​ ಅರ್ಜಿ ಮುಂದೂಡಿದ ಹೈಕೋರ್ಟ್​​

author-image
Bheemappa
Updated On
ಕನ್ನಡಿಗರ ಭಾವನೆಗೆ ಧಕ್ಕೆ ತಂದಿದ್ದ ಗಾಯಕ; ಸೋನು ನಿಗಮ್​ ಅರ್ಜಿ ಮುಂದೂಡಿದ ಹೈಕೋರ್ಟ್​​
Advertisment
  • ಕಾಲೇಜೊಂದರಲ್ಲಿ ಕನ್ನಡಿಗರ ವಿರುದ್ಧ ಮಾತನಾಡಿದ್ದ ಗಾಯಕ
  • ಪ್ರಕರಣದ ವಿಚಾರಣೆ ಮುಂದೂಡಿಕೆ ಮಾಡಿರುವ ನ್ಯಾಯಾಲಯ
  • ಕೇಸ್ ರದ್ದು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ ಸೋನು ನಿಗಮ್

ಬೆಂಗಳೂರು: ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ನಗರದ ಅವಲಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸದ್ಯ ಈ ಪ್ರಕರಣದ ರದ್ದು ಕೋರಿ ಸೋನು ನಿಗಮ್ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸೋನು ನಿಗಮ್ ಅವರು ಕರ್ನಾಟಕದ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಗಾಯಕ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಮೇ.15 ಅಂದರೆ ನಾಳೆಗೆ ಮುಂದೂಡಿದೆ. ಇನ್ನು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದ್ರಿಂದ ಅವಲಹಳ್ಳಿ ಪೊಲೀಸರು ಸೋನು ನಿಗಮ್​ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

publive-image

ಕಾಲೇಜಿನ ಕಾರ್ಯಕ್ರಮದಲ್ಲಿ ಏನು ಆಗಿತ್ತು?
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಮನವಿ ಮಾಡಿದ್ದಾನೆ. ಆಗ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿದ್ದಾರೆ. ಅಲ್ಲದೇ ಮಾತಾಡುವ ಬರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು.

ಇದೆಲ್ಲಾ ಆದ ಮೇಲೆ ತಮ್ಮ ಹೇಳಿಕೆಯನ್ನು ಸೋನು ನಿಗಮ್ ಅವರು ಸಮರ್ಥನೆ ಮಾಡಿಕೊಂಡಿದ್ದರು. ವಿಡಿಯೋ ಮೂಲಕ ಮಾತನಾಡಿದ್ದ ಸೋನು ನಿಗಮ್ ನಾನು ಕನ್ನಡಿಗರ ವಿರುದ್ಧ ಮಾತನಾಡಿಲ್ಲ. ಅಲ್ಲಿಂದ ಕೆಲ ಪುಂಡರ ಕುರಿತು ಮಾತನಾಡಿದ್ದೇ. ದಯವಿಟ್ಟು ಅದನ್ನು ದೊಡ್ಡದು ಮಾಡಬೇಡಿ. ಇಲ್ಲಿಗೆ ಬಿಡಿ ಎಂದು ಕೇಳಿದ್ದರು. ಆದರೆ ಇದಕ್ಕೂ ಕನ್ನಡಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment