ವಿಜಯ್ ರಾಘವೇಂದ್ರ ಪತ್ನಿ ಇನ್ನು ನೆನಪು ಮಾತ್ರ
ಹಠಾತ್ ಹೃದಯಾಘಾತದಿಂದ ಸ್ಪಂದನಾ ನಿಧನ
ಇಂದು ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ
ಬೆಂಗಳೂರಿನ ಹರಿಶ್ಚಂದ್ರ ಘಾಟ್ನಲ್ಲಿ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಅಂತಿಮಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ರೂಟ್ ಮ್ಯಾಪ್ ನೀಡಿದ್ದಾರೆ.
ಮಲ್ಲೇಶ್ವರಂ 15 ನೇ ಮುಖ್ಯರಸ್ತೆಯಿಂದ ಹೊರಟು, ಕೆ.ಸಿ ಜನರಲ್ ಆಸ್ಪತ್ರೆ ಮೂಲಕ ಹರಿಶ್ಚಂದ್ರ ಘಾಟ್ನತ್ತ ತೆರಳಲಿದೆ. ಈಗಾಗಲೇ ರೂಟ್ ಮ್ಯಾಪ್ ಸಿದ್ಧಪಡಿಸಿರುವ ಪೊಲೀಸ್ ಅಧಿಕಾರಿಗಳು ಬಿ.ಕೆ. ಶಿವರಾಂ ಕುಟುಂಬಸ್ಥರಿಗೆ ನೀಡಿದ್ದಾರೆ. ಮಾಹಿತಿ ಪ್ರಕಾರ, ಈಗ ನಿಗದಿ ಮಾಡಿರುವ ರಸ್ತೆಯಲ್ಲೇ ಮೆರವಣಿಗೆ ಸಾಗಲಿದೆ.
ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಸ್ಪಂದನಾ ಅವರ ಮೃತದೇಹವನ್ನು ಬ್ಯಾಂಕಾಕ್ನಿಂದ ಬೆಂಗಳೂರಿಗೆ ತರಲಾಗಿದೆ. ಸ್ಪಂದನಾ ತಂದೆ ಬಿ.ಕೆ.ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಜಯ್ ರಾಘವೇಂದ್ರ ಪತ್ನಿ ಇನ್ನು ನೆನಪು ಮಾತ್ರ
ಹಠಾತ್ ಹೃದಯಾಘಾತದಿಂದ ಸ್ಪಂದನಾ ನಿಧನ
ಇಂದು ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ
ಬೆಂಗಳೂರಿನ ಹರಿಶ್ಚಂದ್ರ ಘಾಟ್ನಲ್ಲಿ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಅಂತಿಮಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ರೂಟ್ ಮ್ಯಾಪ್ ನೀಡಿದ್ದಾರೆ.
ಮಲ್ಲೇಶ್ವರಂ 15 ನೇ ಮುಖ್ಯರಸ್ತೆಯಿಂದ ಹೊರಟು, ಕೆ.ಸಿ ಜನರಲ್ ಆಸ್ಪತ್ರೆ ಮೂಲಕ ಹರಿಶ್ಚಂದ್ರ ಘಾಟ್ನತ್ತ ತೆರಳಲಿದೆ. ಈಗಾಗಲೇ ರೂಟ್ ಮ್ಯಾಪ್ ಸಿದ್ಧಪಡಿಸಿರುವ ಪೊಲೀಸ್ ಅಧಿಕಾರಿಗಳು ಬಿ.ಕೆ. ಶಿವರಾಂ ಕುಟುಂಬಸ್ಥರಿಗೆ ನೀಡಿದ್ದಾರೆ. ಮಾಹಿತಿ ಪ್ರಕಾರ, ಈಗ ನಿಗದಿ ಮಾಡಿರುವ ರಸ್ತೆಯಲ್ಲೇ ಮೆರವಣಿಗೆ ಸಾಗಲಿದೆ.
ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಸ್ಪಂದನಾ ಅವರ ಮೃತದೇಹವನ್ನು ಬ್ಯಾಂಕಾಕ್ನಿಂದ ಬೆಂಗಳೂರಿಗೆ ತರಲಾಗಿದೆ. ಸ್ಪಂದನಾ ತಂದೆ ಬಿ.ಕೆ.ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ