/newsfirstlive-kannada/media/post_attachments/wp-content/uploads/2024/12/bbk1127.jpg)
ಕನ್ನಡದ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆಗೆ ಹತ್ತಿರ ಬರುತ್ತಿದೆ. ಹೀಗಾಗಿ ಟಾಪ್ ಐದು ಸ್ಪರ್ಧಿಗಳು ಯಾರು ಎಂದು ಊಹಿಸುವುದು ಕಷ್ಟವಾಗಿದೆ. ಇದೇ ಹೊತ್ತಲ್ಲಿ ಬಿಗ್ಬಾಸ್ ಮನೆಯಿಂದ ಅಚ್ಚರಿಯ ರೀತಿಯಲ್ಲಿ ಐಶ್ವರ್ಯಾ ಸಿಂಧೋಗಿ ಆಚೆ ಬಂದಿದ್ದಾರೆ.
ಇದನ್ನೂ ಓದಿ:BBK11: ನಮ್ರತಾ ಗೌಡ ಬಿಗ್ಬಾಸ್ ಮನೆಗೆ ಬರುತ್ತಿದ್ದಂತೆ ಕಣ್ಣೀರಿಟ್ಟ ಐಶ್ವರ್ಯಾ ಸಿಂಧೋಗಿ; ಕಾರಣವೇನು?
ಇನ್ನೂ ಬಿಗ್ಬಾಸ್ ಮನೆಯಿಂದ ಅಳುತ್ತಲೇ ಆಚೆ ಬಂದ ಐಶ್ವರ್ಯಾ ಸಿಂಧೋಗಿಗೆ ಬಿಗ್ಬಾಸ್ ವಿಶೇಷ ಬೀಳ್ಕೊಡುಗೆ ಕೊಟ್ಟಿದ್ದಾರೆ. ಹೌದು, ಬಿಗ್ಬಾಸ್ ಪತ್ರದ ಮೂಲವೇ ಈ ವಾರ ಯಾರು ಆಚೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ. ಪ್ರೀತಿಯ ಐಶ್ವರ್ಯಾ 13 ವಾರಗಳ ಕಾಲ ಬಿಗ್ಬಾಸ್ ಮನೆಯ ಸ್ಪರ್ಧಿಯಾಗಿ ಈ ಮನೆಯಲ್ಲಿ ಜೀವಿಸಿರುವುದು ಸಂತೋಷದ ವಿಷಯ. ತುಸು ಬೇಸರವಿದ್ದರೂ, ನಗು, ದುಃಖ, ಕೋಪ, ತುಂಟಾಟ ಹೀಗೆ ನಿಮ್ಮ ಎಲ್ಲ ಭಾವನೆಗಳಿಗೆ ಸಾಕ್ಷಿಯಾದ ಮನೆಯಿಂದ ಕಳಿಸಿಕೊಡುವುದು ಬೇಕಾಗಿದೆ ಅಂತ ಪ್ರತದಲ್ಲಿ ಬರೆಯಲಾಗಿತ್ತು.
ಬಿಗ್ಬಾಸ್ ಮನೆಯಿಂದ ಆಚೆ ಹೋಗುತ್ತಿದ್ದ ಐಶ್ವರ್ಯಾಗೆ ಬಿಗ್ಬಾಸ್ ಕೊನೆಯದಾಗಿ ಈ ಮಾತನ್ನು ಹೇಳಿ ಕಳುಹಿಸಿ ಕೊಟ್ಟಿದ್ದಾರೆ. ಜೀವನದ ಪಯಣದಲ್ಲಿ ಒಂದು ದ್ವಾರ ಮುಚ್ಚಿಕೊಂಡರೇ ಮತ್ತೊಂದು ತೆರೆದುಕೊಳ್ಳುತ್ತದೆ. ಕೆಲವನ್ನು ದಾಟಿ ಬದುಕು ಕಟ್ಟಿಕೊಳ್ಳುತ್ತೇವೆ. ಮತ್ತೆ ಕೆಲವನ್ನು ದಾಟಿ ಅನುಭವ ಕಟ್ಟಿಕೊಳ್ಳುತ್ತದೆ. ಐಶ್ವರ್ಯಾ ಈ ಮನೆಯಲ್ಲಿನ ಆಟ ಇಂದಿಗೆ ಮುಗಿದಿರಬಹುದು. ಆದ್ರೆ, ಈ ದ್ವಾರ ತೆರೆದುಕೊಳ್ಳುವುದು ಆಟದಿಂದ ಹೊರ ಕಳುಹಿಸಲ್ಪಟ್ಟ ಐಶ್ವರ್ಯಾಗೆ ಅಲ್ಲ. ತನ್ನ ತವರಿಂದ ಹೊರಟು ಹೊಸ ಜೀವನದತ್ತ ಹೆಜ್ಜೆ ಇಡುತ್ತಿರುವ ಈ ಮನೆಯ ಮಗಳು ಐಶ್ವರ್ಯಾಗೆ. ಐಶ್ವರ್ಯಾ ಹೋಗಿ ಬಾ ಮಗಳೇ ಅಂತ ಹೇಳಿದ್ದಾರೆ. ಬಿಗ್ಬಾಸ್ ಮಾತು ಕೇಳುತ್ತಿದ್ದಂತೆ ಐಶ್ವರ್ಯಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಜೊತೆಗೆ ಬಿಗ್ಬಾಸ್ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ