ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ಥಂಭದ ಸಿಂಹದಮುಖ
ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ.
ಎಡಗಡೆ ಭಾರತ್ ಎಂದು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ
ನೂತನ ಸಂಸತ್ ಭವನ ಉದ್ಘಾಟನೆಗೆ ಸಜ್ಜಾಗಿದೆ. ಭಾನುವಾರ ಹೊಸ ಸಂಸತ್ ಭವನದ ಲೋಕಾರ್ಪಣೆಯಾಗ್ತಿದೆ. ಇದರ ನೆನಪಿಗಾಗಿ ಕೇಂದ್ರ ಸರ್ಕಾರ 75 ರೂ.ನ ನಾಣ್ಯ ಬಿಡುಗಡೆಯಾಗಲಿದೆ. ಮತ್ತೊಂದೆಡೆ ಸೆಂಗೋಲ್ ರಾಜದಂಡ ಕುರಿತು ಅಮಿತ್ ಶಾ ಹೇಳಿಕೆಗೆ ರಾಜಕೀಯ ವಾಕ್ಸಮರ ಮುಂದುವರಿದಿದೆ.
2020ರ ಡಿಸೆಂಬರ್ನಲ್ಲಿ ಆರಂಭವಾಗಿದ್ದ ನಿರ್ಮಾಣ ಕಾರ್ಯ ಎರಡೂವರೆ ವರ್ಷಗಳ ಬಳಿಕ ಮುಗಿದಿದೆ. ಸುಮಾರು 862 ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ಹಲವು ವಿಪಕ್ಷಗಳು ಬಹಿಷ್ಕಾರ ಮಾಡಿವೆ.
ನೂತನ ಕಟ್ಟಡಕ್ಕೆ ಚಾಲನೆ ನೀಡಲಿರುವ ನಮೋ
20 ವಿಪಕ್ಷಗಳ ಬಹಿಷ್ಕಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಭಾನುವಾರು ಉದ್ಘಾಟಿಸಲಿದ್ದಾರೆ. ಸುಮಾರು 25 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಕೂಡ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಸಮಾರಂಭದ ವೇಳಾಪಟ್ಟಿ!
ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ!
ಇದೇ ವೇಳೆ ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ 75 ರೂಪಾಯಿ ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯವು ಈ ನಾಣ್ಯವನ್ನು ಸಿದ್ಧಪಡಿಸಿದೆ. ನಾಣ್ಯವೂ ಸಂಪೂರ್ಣ ವಿಶೇಷತೆಯಿಂದ ಕೂಡಿದೆ.
₹75 ನಾಣ್ಯದ ವಿಶೇಷತೆ!
ಸಂಸತ್ ಭವನ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಸ್ಥಾಪಿಸಲಿರುವ ರಾಜದಂಡ ಸೆಂಗೋಲ್ ಕುರಿತು ವಾಕ್ಸಮರ ಜೋರಾಗಿದೆ. 1947ರಲ್ಲಿ ತಮಿಳುನಾಡಿನ ಚೋಳರು ನೀಡಿದ್ದ ಸೆಂಗೋಲ್ನ ಬ್ರಿಟಿಷರು ನೆಹರೂಗೆ ಹಸ್ತಾಂತರಿಸಿದ್ದಾರೆ ಅಂತ ಅಮಿತ್ ಶಾ ಹೇಳಿದ್ದರು..ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಂ ರಮೇಶ್ ಸೆಂಗೋಲ್ ರಾಜದಂಡದ ಕುರಿತು ಬಿಜೆಪಿ ಹೇಳುತ್ತಿರುವ ಇತಿಹಾಸಕ್ಕೆ ಪುರಾವೆಗಳಿಲ್ಲ, ಮೋದಿ ಸರ್ಕಾರ ಇದನ್ನು ರಾಜಕೀಯಕ್ಕೆ ಬಳಸಿಕೊಳ್ತಿದ್ದಾರೆ ಅಂತ ಕಿಡಿಕಾರಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸೋಲು ಒಪ್ಪಿಕೊಂಡಿದ್ದಾರೆ ಅಂತ ಅಂತಾ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರಪತಿ ಬದಲು ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಮಧ್ಯಪ್ರವೇಶಿಸಲು ಕೋರ್ಟ್ ನಿರಾಕರಿಸಿದೆ. ಒಟ್ಟಿನಲ್ಲಿ ವಿಪಕ್ಷಗಳ ಬಹಿಷ್ಕಾರದ ನಡುವೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೇಂದ್ರ ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ಥಂಭದ ಸಿಂಹದಮುಖ
ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ.
ಎಡಗಡೆ ಭಾರತ್ ಎಂದು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ
ನೂತನ ಸಂಸತ್ ಭವನ ಉದ್ಘಾಟನೆಗೆ ಸಜ್ಜಾಗಿದೆ. ಭಾನುವಾರ ಹೊಸ ಸಂಸತ್ ಭವನದ ಲೋಕಾರ್ಪಣೆಯಾಗ್ತಿದೆ. ಇದರ ನೆನಪಿಗಾಗಿ ಕೇಂದ್ರ ಸರ್ಕಾರ 75 ರೂ.ನ ನಾಣ್ಯ ಬಿಡುಗಡೆಯಾಗಲಿದೆ. ಮತ್ತೊಂದೆಡೆ ಸೆಂಗೋಲ್ ರಾಜದಂಡ ಕುರಿತು ಅಮಿತ್ ಶಾ ಹೇಳಿಕೆಗೆ ರಾಜಕೀಯ ವಾಕ್ಸಮರ ಮುಂದುವರಿದಿದೆ.
2020ರ ಡಿಸೆಂಬರ್ನಲ್ಲಿ ಆರಂಭವಾಗಿದ್ದ ನಿರ್ಮಾಣ ಕಾರ್ಯ ಎರಡೂವರೆ ವರ್ಷಗಳ ಬಳಿಕ ಮುಗಿದಿದೆ. ಸುಮಾರು 862 ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ಹಲವು ವಿಪಕ್ಷಗಳು ಬಹಿಷ್ಕಾರ ಮಾಡಿವೆ.
ನೂತನ ಕಟ್ಟಡಕ್ಕೆ ಚಾಲನೆ ನೀಡಲಿರುವ ನಮೋ
20 ವಿಪಕ್ಷಗಳ ಬಹಿಷ್ಕಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಭಾನುವಾರು ಉದ್ಘಾಟಿಸಲಿದ್ದಾರೆ. ಸುಮಾರು 25 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಕೂಡ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಸಮಾರಂಭದ ವೇಳಾಪಟ್ಟಿ!
ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ!
ಇದೇ ವೇಳೆ ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ 75 ರೂಪಾಯಿ ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯವು ಈ ನಾಣ್ಯವನ್ನು ಸಿದ್ಧಪಡಿಸಿದೆ. ನಾಣ್ಯವೂ ಸಂಪೂರ್ಣ ವಿಶೇಷತೆಯಿಂದ ಕೂಡಿದೆ.
₹75 ನಾಣ್ಯದ ವಿಶೇಷತೆ!
ಸಂಸತ್ ಭವನ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಸ್ಥಾಪಿಸಲಿರುವ ರಾಜದಂಡ ಸೆಂಗೋಲ್ ಕುರಿತು ವಾಕ್ಸಮರ ಜೋರಾಗಿದೆ. 1947ರಲ್ಲಿ ತಮಿಳುನಾಡಿನ ಚೋಳರು ನೀಡಿದ್ದ ಸೆಂಗೋಲ್ನ ಬ್ರಿಟಿಷರು ನೆಹರೂಗೆ ಹಸ್ತಾಂತರಿಸಿದ್ದಾರೆ ಅಂತ ಅಮಿತ್ ಶಾ ಹೇಳಿದ್ದರು..ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಂ ರಮೇಶ್ ಸೆಂಗೋಲ್ ರಾಜದಂಡದ ಕುರಿತು ಬಿಜೆಪಿ ಹೇಳುತ್ತಿರುವ ಇತಿಹಾಸಕ್ಕೆ ಪುರಾವೆಗಳಿಲ್ಲ, ಮೋದಿ ಸರ್ಕಾರ ಇದನ್ನು ರಾಜಕೀಯಕ್ಕೆ ಬಳಸಿಕೊಳ್ತಿದ್ದಾರೆ ಅಂತ ಕಿಡಿಕಾರಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸೋಲು ಒಪ್ಪಿಕೊಂಡಿದ್ದಾರೆ ಅಂತ ಅಂತಾ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರಪತಿ ಬದಲು ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಮಧ್ಯಪ್ರವೇಶಿಸಲು ಕೋರ್ಟ್ ನಿರಾಕರಿಸಿದೆ. ಒಟ್ಟಿನಲ್ಲಿ ವಿಪಕ್ಷಗಳ ಬಹಿಷ್ಕಾರದ ನಡುವೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೇಂದ್ರ ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ