/newsfirstlive-kannada/media/media_files/2025/09/28/sports_01-2025-09-28-17-57-19.png)
ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟರ್​ ಮಿಥುನ್ ಮನ್ಹಾಸ್ ನೇಮಕ ಆಗಿದ್ದಾರೆ. ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಮಿಥುನ್​ ಮನ್ಹಾಸ್, 37ನೇ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಈ ಮೂಲಕ ಕರ್ನಾಟಕದ ರೋಜರ್ ಬಿನ್ನಿಯಿಂದ ತೆರವಾದ ಸ್ಥಾನ ಆಲಂಕರಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾಗಿರುವ ರಘುರಾಮ್ ಭಟ್ ಅವರು ಖಜಾಂಚಿಯಾಗಿ ಆಯ್ಕೆ ಆಗಿದ್ದಾರೆ.
ಖಜಾಂಚಿಯಾಗಿ ಆಯ್ಕೆ ಆಗಿರುವ ಎ ರಘುರಾಮ್ ಭಟ್ ಅವರು ಕರ್ನಾಟಕ ರಣಜಿ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಅನೇಕ ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ರಘುರಾಮ್ ಭಟ್, 2 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ್ದರು. ನಿವೃತ್ತಿ ಬಳಿಕ ಕೋಚ್ ಆಗಿ, ಕ್ರಿಕೆಟ್ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದರು.
ರಘುರಾಮ್ ಭಟ್​ 3 ವರ್ಷಗಳಿಂದ ಕೆಎಸ್​​​ಸಿಎ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಬಿಸಿಸಿಐನ ಉಪಾಧ್ಯಕ್ಷರಾಗಿ ರಾಜೀವ್ ಶುಕ್ಲಾ, ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಮರು ಆಯ್ಕೆ ಆಗಿದ್ದಾರೆ. ಪ್ರಭತೇಜ್ ಸಿಂಗ್ ಭಾಟಿಯಾ, ರೋಹನ್ ಗೌನ್ಸ್ ದೇಸಾಯಿ ಸ್ಥಾನಕ್ಕೆ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ