ಬೆಂಗಳೂರು ಜನರಿಗೆ ಗುಡ್​ನ್ಯೂಸ್​.. ಉದ್ಯಾನ ನಗರಿಯಲ್ಲಿ ತಲೆ ಎತ್ತಲಿದೆ ಬೃಹತ್ ಸ್ಟೇಡಿಯಂ

ಕ್ರೀಡೆಗೆ ಹೆಚ್ಚಿನ ಹೊತ್ತು ಕೊಡಲು ಉದ್ಯಾನ ನಗರಿಯಲ್ಲಿ ಮತ್ತೊಂದು ಕ್ರಿಕೆಟ್​​ ಸ್ಟೇಡಿಯಂ ನಿರ್ಮಾಣ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

author-image
Bhimappa
STADIAM_AI_PHOTO
Advertisment

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅವಘಡ ಸಂಭವಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕ್ರೀಡೆಗೆ ಹೆಚ್ಚಿನ ಹೊತ್ತು ಕೊಡಲು ಉದ್ಯಾನ ನಗರಿಯಲ್ಲಿ ಮತ್ತೊಂದು ಕ್ರಿಕೆಟ್​​ ಸ್ಟೇಡಿಯಂ ನಿರ್ಮಾಣ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಎಕ್ಸ್​ ಅಕೌಂಟ್​ನಲ್ಲಿ ಪೋಸ್ಟ್​ ಶೇರ್ ಮಾಡಿದ್ದು, ಉದ್ಯಾನಗರಿಯ ಮೊಮ್ಮಸಂದ್ರದ ಸೂರ್ಯಸಿಟಿಯಲ್ಲಿ ಮೆಗಾ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 75 ಎಕರೆಯಲ್ಲಿ 1,650 ಕೋಟಿ ರೂಪಾಯಿ ವೆಚ್ಚದಲ್ಲಿ 60,000 ಆಸನಗಳ ಸಾಮರ್ಥ್ಯವುಳ್ಳ ಬೃಹತ್ ಕ್ರಿಕೆಟ್​ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದಾರೆ.  

ಇದನ್ನೂ ಓದಿ:ಹಿಟ್​ಮ್ಯಾನ್ ರೋಹಿತ್, ವಿರಾಟ್ ಕೊಹ್ಲಿ ಇನ್ನು ಕ್ರಿಕೆಟ್​ ಆಡಬೇಕಾ..? ಈ ಷರತ್ತುಗಳು ಅನ್ವಯ!

CM_SIDDARMAIAH_DK_SHIVAKUMAR

ರಾಜ್ಯದ ಅತಿ ದೊಡ್ಡ ಸ್ಟೇಡಿಯಂ ಇದಾಗಲಿದ್ದು ಇದರಲ್ಲಿ ಒಳಾಂಗಣ, ಹೊರಂಗಾಣ ಕ್ರೀಡಾಂಗಣಗಳು, ಅತ್ಯಾಧುನಿಕ ಜಿಮ್, ತರಬೇತಿ ಕೌಶಲ್ಯಗಳು, ಒಲಿಂಪಿಕ್​ ಗಾತ್ರದ ಈಜು ಕೊಳಗಳು, ಅತಿಥಿ ಗೃಹಗಳು, ಹಾಸ್ಟೆಲ್​ಗಳು, ಹೋಟೆಲ್​ಗಳು ಮತ್ತು ಅಂತರಾಷ್ಟ್ರೀಯ ಕಾರ್ಯಕ್ರಮಗಳಿಗಾಗಿ ಕನ್ವೆನ್ಷನ್ ಹಾಲ್ ಅನ್ನು ಒಳಂಗೊಂಡಿರುತ್ತದೆ.    

2025ರ ಐಪಿಎಲ್​ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದಿತ್ತು. ಈ ಸಂಬಂಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡುವಾಗ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ 11 ಜನರು ಜೀವ ಕಳೆದುಕೊಂಡಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಷ್ಟೊಂದು ಸ್ಥಳ ಇಲ್ಲದ ಕಾರಣ ಜನರು ಹೆಚ್ಚು ಸೇರಿದ್ದರಿಂದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೊಡ್ಡ ಮೈದಾನ ನಿರ್ಮಾಣಕ್ಕೆ ಕೈ ಹಾಕಿದೆ.   

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ 

CM SIDDARAMAIAH DK Shivakumar Bangalore
Advertisment