KSCA ಚುನಾವಣೆ ಮುಂದೂಡಿಕೆ, ವೆಂಕಟೇಶ್​ ಪ್ರಸಾದ್​ ಆಕ್ರೋಶ..!

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳ ಚುನಾವಣೆ ಮುಂದೂಡಿಕೆಯಾಗಿದೆ. ಚುನಾವಣೆಗೆ ಸ್ಪರ್ಧೆ ಮಾಡಲು ಅಭ್ಯರ್ಥಿಗಳ ಅರ್ಹತೆ ಬಗ್ಗೆ ಗೊಂದಲ ಇರೋದ್ರಿಂದ ಚುನಾವಣಾ ಅಧಿಕಾರಿ ಮುಂದೂಡಿಕೆ ಮಾಡಿದ್ದಾರೆ.

author-image
Ganesh Kerekuli
venkatesh prasad (1)
Advertisment

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳ ಚುನಾವಣೆ ಮುಂದೂಡಿಕೆಯಾಗಿದೆ. ಚುನಾವಣೆಗೆ ಸ್ಪರ್ಧೆ ಮಾಡಲು ಅಭ್ಯರ್ಥಿಗಳ ಅರ್ಹತೆ ಬಗ್ಗೆ ಗೊಂದಲ ಇರೋದ್ರಿಂದ ಚುನಾವಣಾ ಅಧಿಕಾರಿ ಮುಂದೂಡಿಕೆ ಮಾಡಿದ್ದಾರೆ. 

ಅಭ್ಯರ್ಥಿಗಳ ಅರ್ಹತೆ ಬಗ್ಗೆ ಸ್ಪಷ್ಟತೆ ಬಯಸಿ ಕೆಲವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಹೀಗಾಗಿ ಸಮಸ್ಯೆ ಬಗೆಹರಿಸಿಕೊಂಡು ಬನ್ನಿ ಎಂದು ಚುನಾವಣಾ ಅಧಿಕಾರಿ ತಿಳಿದಿದ್ದು, ಡಿಸೆಂಬರ್ 30ರವರೆಗೆ ಕಾಲಾವಕಾಶ ನೀಡಿದ್ದಾರೆ. ನವೆಂಬರ್ 30ಕ್ಕೆ ಚುನಾವಣೆ ನಿಗಧಿಯಾಗಿತ್ತು.

ವೆಂಕಟೇಶ್​ ಪ್ರಸಾದ್​ ಆಕ್ರೋಶ

ಕರ್ನಾಟಕ ರಾಜ್ಯ ಕ್ರಿಕೆಟ್​ ಸಂಸ್ಥೆಯ ಚುನಾವಣೆ ಮುಂದೂಡಿಕೆ ಮಾಡಿದ್ದಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ್​ ಪ್ರಸಾದ್​ ಹಾಗೂ ಅವರ ತಂಡ ಆಕ್ರೋಶ ವ್ಯಕ್ತಪಡಿಸಿದೆ. ನಮ್ಮ ತಂಡಕ್ಕೆ ಸಿಕ್ಕಿರುವ ಬೆಂಬಲ ಹಾಗೂ ಮಾಡ್ತಿರುವ ಪ್ರಚಾರವನ್ನ ನೋಡಿ ಭಯಬಿದ್ದು ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ವೆಂಕಟೇಶ್​ ಪ್ರಸಾದ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದೂಡಿಕೆ ಮಾಡಿರೋದಕ್ಕೆ ಕಾರಣ ಏನು ಅನ್ನೋದು ಗೊತ್ತಿಲ್ಲ. ಇದನ್ನೆಲ್ಲಾ ಮಾಡಿಸ್ತಿರೋದು ಯಾರೆಂದು ಗೊತ್ತಿದೆ ಅಂತಾ ಟಾಂಗ್ ನೀಡಿದ್ದಾರೆ. 

ಇದನ್ನೂ ಓದಿ:ಕೆಎಸ್‌ಸಿಎ ಅಧ್ಯಕ್ಷ, ಪದಾಧಿಕಾರಿಗಳ ಸ್ಥಾನದ ಚುನಾವಣೆ ಮುಂದೂಡಿಕೆ : ಇದ್ದಕ್ಕಿದ್ದಂತೆ ಚುನಾವಣೆ ಮುಂದೂಡಿದ್ದು ಏಕೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Cricket news in Kannada KSCA Venkatesh Prasad
Advertisment