/newsfirstlive-kannada/media/media_files/2025/09/05/suryakumar_pandya-2025-09-05-09-35-14.jpg)
ಟಿ20 ಏಷ್ಯಾ ಕಪ್ ಟೂರ್ನಿ ಇದೇ ಸೆಪ್ಟೆಂಬರ್ 9 ರಿಂದ ಆರಂಭವಾಗಲಿದೆ. ಒಟ್ಟು 8 ತಂಡಗಳು ಇದರಲ್ಲಿ ಪಾಲ್ಗೊಳ್ಳಲಿದ್ದು ಹಾಂಗ್ ಕಾಂಗ್ ಹಾಗೂ ಅಫ್ಘಾನಿಸ್ತಾನ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ಆಗಿರುವ ಟೀಮ್ ಇಂಡಿಯಾ ಮತ್ತೊಮ್ಮೆ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಈ ಎಲ್ಲದರ ಮಧ್ಯೆ ಕ್ಯಾಪ್ಟನ್ ಸೂರ್ಯಕುಮಾರ್, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದುಬೈಗೆ ಪ್ರಯಾಣ ಬೆಳೆಸಿದ್ದಾರೆ.
ಟೀಮ್ ಇಂಡಿಯಾದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್, ಹೆಡ್ ಕೋಚ್ ಗೌತಮ್ ಗಂಭೀರ್, ಹಾರ್ದಿಕ್ ಪಾಂಡ್ಯ ಮುಂಬೈನಿಂದ ದುಬೈಗೆ ಹಾರಿದ್ದಾರೆ. ಏರ್ಪೋರ್ಟ್ನಲ್ಲಿ ಸೂರ್ಯಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಹೊಸ ಲುಕ್ನಲ್ಲಿ ಕಾಣಿಸಿರೋದು ವಿಶೇಷ ಎನಿಸಿದೆ. ಇನ್ನು ಕೋಚ್ ಗೌತಮ್ ಗಂಭೀರ್ ಎಂದಿನಂತೆ ಬ್ಲ್ಯಾಕ್ ಡ್ರೆಸ್ನಲ್ಲಿ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.
ಇದನ್ನೂ ಓದಿ: T20 ಏಷ್ಯಾ ಕಪ್ನಲ್ಲಿ ಬೆಸ್ಟ್ ಸ್ಟ್ರೈಕ್ ರೇಟ್ ಹೊಂದಿರುವ ಟಾಪ್- 5 ಬ್ಯಾಟ್ಸ್ಮನ್ಸ್
ಇವರನ್ನು ಹೊರತು ಪಡಿಸಿ ಉಳಿದ ಆಟಗಾರರಾದ ಹರ್ಷೀತ್ ರಾಣ, ಆರ್ಷ್ದೀಪ್ ಸಿಂಗ್, ಕುಲ್ದೀಪ್ ಯಾದವ್ ಈಗಾಗಲೇ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಮಾಹಿತಿ ಲಭ್ಯವಿಲ್ಲ. ಆರ್ಷ್ದೀಪ್ ಸಿಂಗ್ ಸೋಷಿಯಲ್ ಮೀಡಿಯಾ ಪೋಸ್ಟ್ವೊಂದರಲ್ಲಿ ಇಂದು ಬೆಳಗ್ಗೆ ದುಬೈ ಬಂದಿದ್ದೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಿಸರ್ವ್ ಆಟಗಾರರಾದ ಕನ್ನಡಿಗ ಪ್ರಸಿದ್ಧ್ ಕೃಷ್ಣ, ವಾಸಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ ಇನ್ನು ಭಾರತದಲ್ಲಿದ್ದಾರೆ. ಏಷ್ಯಾಕಪ್ ಟೂರ್ನಿ ಸಪ್ಟೆಂಬರ್ 9ರಿಂದ ಆರಂಭವಾಗಲಿದ್ದು, ಟೀಮ್ ಇಂಡಿಯಾ ಯುಎಇ ವಿರುದ್ಧ ಸಪ್ಟೆಂಬರ್ 10ಕ್ಕೆ ಮೊದಲ ಪಂದ್ಯವನ್ನು ಆಡಲಿದೆ. ಇದಾದ ಮೇಲೆ ಸೆಪ್ಟೆಂಬರ್ 14 ರಂದು ಭಾರತ ಹಾಗೂ ಪಾಕಿಸ್ತಾನದ ನಡುವೆ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ.
Off they go! ✈️
— Star Sports (@StarSportsIndia) September 4, 2025
Team India captain @surya_14kumar and star all-rounder @hardikpandya7 have left for the Asia Cup 2025.
The mission? Bring the trophy home. 🏆🇮🇳
[Asia Cup 2025, Indian Cricket Team] pic.twitter.com/hYY7z6O0rc
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ