/newsfirstlive-kannada/media/media_files/2025/08/20/abhishek_sharma-2025-08-20-12-47-01.jpg)
ಏಷ್ಯಾಕಪ್​ನ ಸೂಪರ್​-4 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಟಾಸ್ ಸೋತಿದ್ದು ಮೊದಲ ಬ್ಯಾಟಿಂಗ್ ಮಾಡಲಿದ್ದಾರೆ. ಟಾಸ್ ಗೆದ್ದಿರುವ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿದೆ.
ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಭಾರತ ತಂಡ ಮೊದಲ ಬ್ಯಾಟಿಂಗ್ ಮಾಡಲಿದೆ. ಈಗಾಗಲೇ ಟೀಮ್ ಇಂಡಿಯಾ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ಜೊತೆ ಗೆದ್ದು ಮೊದಲ ಸ್ಥಾನದಲ್ಲಿದೆ. ಫೈನಲ್​​ಗೂ ಎಂಟ್ರಿ ಕೊಟ್ಟಿದೆ. ಬಾಂಗ್ಲಾ ವಿರುದ್ಧ ಗೆಲ್ಲುತ್ತಿದ್ದಂತೆ ಭಾರತಕ್ಕೆ ಫೈನಲ್​ ಟಿಕೆಟ್​ ಕನ್​ಫರ್ಮ್ ಆಗಿದೆ. ಇವತ್ತಿನ ಮ್ಯಾಚ್ ಭಾರತಕ್ಕೆ ಪರಿಣಾಮಕಾರಿ ಅಲ್ಲದಿದ್ದರೂ ನಿಯಮದಂತೆ ಆಡಬೇಕು ಅಷ್ಟೇ.
ಸೂರ್ಯಕುಮಾರ್ ನೇತೃತ್ವದ ತಂಡ ದುಬೈ ಮೈದಾನಕ್ಕೆ ಇಳಿದಿದ್ದು ಅಭಿಷೇಕ್ ಶರ್ಮಾ, ಶುಭ್​ಮನ್​ ಗಿಲ್ ಆರಂಭಿಕರಾಗಿ ಬ್ಯಾಟ್ ಬೀಸಲಿದ್ದಾರೆ. ಸೂರ್ಯಕುಮಾರ್ ಮೂರನೇ ಸ್ಥಾನದಲ್ಲಿ ಕ್ರೀಸ್​ಗೆ ಆಗಮಿಸುವರು. ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಸ್ಲಾಟ್​ ಯಾವುದು ಎನ್ನುವುದು ಕನ್​ಫರ್ಮ್​ ಇಲ್ಲ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸಂಜು ಜೋಡಿಯಾಗಬಹುದು.
ಸೂರ್ಯಕುಮಾರ್ ಬ್ಯಾಟಿಂಗ್​​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಂಡದಲ್ಲಿ ಆಲ್​​ರೌಂಡರ್​ಗಳಾಗಿ ಶಕ್ತಿ ತುಂಬಲಿದ್ದಾರೆ. ಆದರೆ ಬೌಲಿಂಗ್​ನಲ್ಲಿ ಬದಲಾವಣೆ ಮಾಡಿದ್ದು ಕಳೆದ ಪಂದ್ಯದಲ್ಲಿದ್ದ ಶಿವಂ ದುಬೆ ಹಾಗೂ ವೇಗಿ ಜಸ್​​ಪ್ರಿತ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಈ ಇಬ್ಬರ ಬದಲಿಗೆ ಯುವ ಆಟಗಾರರು ಆದ ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾಗೆ ಸ್ಥಾನ ಕಲ್ಪಿಸಿಕೊಡಲಾಗಿದೆ. ಸ್ಪಿನ್ನರ್​​ಗಳಾಗಿ​ ಕುಲ್​ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ಮ್ಯಾಜಿಕ್ ಮಾಡುವರು.
ಟೀಮ್ ಇಂಡಿಯಾ ಪ್ಲೇಯಿಂಗ್​- 11
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಹರ್ಷಿತ್ ರಾಣಾ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ