ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಭಾರತಕ್ಕೆ ಸೋಲು
ಸೋತರೂ ಟೀಮ್ ಇಂಡಿಯಾ ಜೊತೆ ನಿಂತ ಇಡೀ ದೇಶದ ಜನ
ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಪ್ಲೇಯರ್ಸ್ಗೆ ಹೇಳಿದ್ದೇನು?
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ. ಇದರಿಂದ ಬೇಸರದಲ್ಲಿರುವ ರೋಹಿತ್ ಶರ್ಮಾ ಸಾರಥ್ಯದ ತಂಡದ ಜೊತೆ ಫ್ಯಾನ್ಸ್ ಜೊತೆಯಾಗಿ ನಿಂತಿದ್ದಾರೆ. ಆಟದಲ್ಲಿ ಸೋಲು, ಗೆಲುವು ಸರಿಯಾಗಿ ಸ್ವೀಕರಿಸಬೇಕೆಂದು ಹೇಳುತ್ತಿದ್ದಾರೆ. ಬೆನ್ನಲ್ಲೇ ಪ್ರಧಾನಿ ಮೋದಿ ಟೀಮ್ ಇಂಡಿಯಾಗೆ ಧೈರ್ಯ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಆತ್ಮೀಯ ಭಾರತದ ತಂಡದ ಆಟಗಾರರೇ ಇಂದಿಗೂ, ಮುಂದೆಯು ಎಂದೆಂದಿಗೂ ನಾವು ನಿಮ್ಮೊಂದಿಗೆ ಇರುತ್ತೇವೆ. ಈ ಮಹತ್ವದ ವಿಶ್ವಕಪ್ ಟೂರ್ನಿಯ ಮೂಲಕ ನಿಮ್ಮ ಪ್ರತಿಭೆ, ಸಂಕಲ್ಪ ಎಲ್ಲರ ಗಮನ ಸೆಳೆದಿದೆ. ನಿಮ್ಮ ಬಲ ಏನು ಏನು ಎಂಬುದು ವಿಶ್ವ ನೋಡಿದೆ. ಎಲ್ಲ ಪಂದ್ಯಗಳಲ್ಲಿ ತುಂಬಾ ಜೋಶ್ನಲ್ಲಿ ಪ್ರದರ್ಶನ ಮಾಡಿದ್ದೀರಿ. ಇದು ದೇಶಕ್ಕೆ ಅಪಾರ ಹೆಮ್ಮೆ ತಂದಿದೆ ಎಂದು ಬರೆದು ಭಾರತದ ಆಟಗಾರರಿಗೆ ಧೈರ್ಯ ಹೇಳಿದ್ದಾರೆ.
Dear Team India,
Your talent and determination through the World Cup was noteworthy. You've played with great spirit and brought immense pride to the nation.
We stand with you today and always.
— Narendra Modi (@narendramodi) November 19, 2023
ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 50 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಆಸಿಸ್ ಟೀಮ್ 43 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 241 ರನ್ ಗಳಿಸುವ ಮೂಲಕ ವಿಜಯಮಾಲೆ ಧರಿಸಿಕೊಂಡಿತು. ಇದರಿಂದ 6ನೇ ಬಾರಿಗೆ ಆಸ್ಟ್ರೇಲಿಯಾ ವಿಶ್ವಕಪ್ಗೆ ಮುತ್ತಿಕ್ಕಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಭಾರತಕ್ಕೆ ಸೋಲು
ಸೋತರೂ ಟೀಮ್ ಇಂಡಿಯಾ ಜೊತೆ ನಿಂತ ಇಡೀ ದೇಶದ ಜನ
ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಪ್ಲೇಯರ್ಸ್ಗೆ ಹೇಳಿದ್ದೇನು?
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ. ಇದರಿಂದ ಬೇಸರದಲ್ಲಿರುವ ರೋಹಿತ್ ಶರ್ಮಾ ಸಾರಥ್ಯದ ತಂಡದ ಜೊತೆ ಫ್ಯಾನ್ಸ್ ಜೊತೆಯಾಗಿ ನಿಂತಿದ್ದಾರೆ. ಆಟದಲ್ಲಿ ಸೋಲು, ಗೆಲುವು ಸರಿಯಾಗಿ ಸ್ವೀಕರಿಸಬೇಕೆಂದು ಹೇಳುತ್ತಿದ್ದಾರೆ. ಬೆನ್ನಲ್ಲೇ ಪ್ರಧಾನಿ ಮೋದಿ ಟೀಮ್ ಇಂಡಿಯಾಗೆ ಧೈರ್ಯ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಆತ್ಮೀಯ ಭಾರತದ ತಂಡದ ಆಟಗಾರರೇ ಇಂದಿಗೂ, ಮುಂದೆಯು ಎಂದೆಂದಿಗೂ ನಾವು ನಿಮ್ಮೊಂದಿಗೆ ಇರುತ್ತೇವೆ. ಈ ಮಹತ್ವದ ವಿಶ್ವಕಪ್ ಟೂರ್ನಿಯ ಮೂಲಕ ನಿಮ್ಮ ಪ್ರತಿಭೆ, ಸಂಕಲ್ಪ ಎಲ್ಲರ ಗಮನ ಸೆಳೆದಿದೆ. ನಿಮ್ಮ ಬಲ ಏನು ಏನು ಎಂಬುದು ವಿಶ್ವ ನೋಡಿದೆ. ಎಲ್ಲ ಪಂದ್ಯಗಳಲ್ಲಿ ತುಂಬಾ ಜೋಶ್ನಲ್ಲಿ ಪ್ರದರ್ಶನ ಮಾಡಿದ್ದೀರಿ. ಇದು ದೇಶಕ್ಕೆ ಅಪಾರ ಹೆಮ್ಮೆ ತಂದಿದೆ ಎಂದು ಬರೆದು ಭಾರತದ ಆಟಗಾರರಿಗೆ ಧೈರ್ಯ ಹೇಳಿದ್ದಾರೆ.
Dear Team India,
Your talent and determination through the World Cup was noteworthy. You've played with great spirit and brought immense pride to the nation.
We stand with you today and always.
— Narendra Modi (@narendramodi) November 19, 2023
ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 50 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಆಸಿಸ್ ಟೀಮ್ 43 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 241 ರನ್ ಗಳಿಸುವ ಮೂಲಕ ವಿಜಯಮಾಲೆ ಧರಿಸಿಕೊಂಡಿತು. ಇದರಿಂದ 6ನೇ ಬಾರಿಗೆ ಆಸ್ಟ್ರೇಲಿಯಾ ವಿಶ್ವಕಪ್ಗೆ ಮುತ್ತಿಕ್ಕಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ