/newsfirstlive-kannada/media/post_attachments/wp-content/uploads/2024/09/TEAM-INDIA-1.jpg)
ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ 2 ಟೆಸ್ಟ್ಗಳ ಸರಣಿಯಲ್ಲಿ ಬಾಂಗ್ಲಾದೇಶವನ್ನು 2-0 ಅಂತರದಿಂದ ಸೋಲಿಸುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ಈಗ ಟೀಮ್ ಇಂಡಿಯಾ ತವರಿನಲ್ಲಿ ಅಕ್ಟೋಬರ್ 16ನೇ ತಾರೀಕಿನಿಂದ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ. ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಬಳಿಕ ರೋಹಿತ್ ಪಡೆ ಆಸ್ಟ್ರೇಲಿಯಾ ವಿರುದ್ಧ ದೊಡ್ಡ ಪೈಪೋಟಿ ನಡೆಸಲಿದೆ.
ನವೆಂಬರ್ನಿಂದ ಜನವರಿ ತಿಂಗಳವರಗೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಆಡಲಿದೆ. ಇದು 5 ಪಂದ್ಯಗಳ ಟೆಸ್ಟ್ ಸರಣಿ ಆಗಿದೆ. ನವೆಂಬರ್ 22 ರಿಂದಲೇ ಪರ್ತ್ ಸ್ಟೇಡಿಯಮ್ನಲ್ಲಿ ಮೊದಲ ಟೆಸ್ಟ್ ಶುರುವಾಗಲಿದೆ. ಹಾಗಾಗಿ ಇದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ದೊಡ್ಡ ಸವಾಲು ಎದುರಾಗಲಿದೆ. ಇದರ ಮಧ್ಯೆ ಆಸ್ಟ್ರೇಲಿಯಾ ತಂಡಕ್ಕೂ ಒಂದು ಬ್ಯಾಡ್ನ್ಯೂಸ್ ಇದೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಟೂರ್ನಿಯಲ್ಲಿ ಗೆಲ್ಲೋ ತಂಡ ನೇರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶ ಮಾಡಲಿದೆ. ಹಾಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಗೆಲುವಿಗಾಗಿ ರಣತಂತ್ರವನ್ನು ಹೆಣೆದುಕೊಂಡಿವೆ. ಟೀಮ್ ಇಂಡಿಯಾ ಈ ಸರಣಿಗಾಗಿ ತನ್ನ ಬಲಿಷ್ಠ ತಂಡವನ್ನು ಕಳುಹಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಅದಕ್ಕೂ ಮೊದಲು ಆಸ್ಟ್ರೇಲಿಯಾ ತಂಡಕ್ಕೆ ಭಾರೀ ಹಿನ್ನಡೆ ಆಗಿದೆ. ಆಸೀಸ್ ತಂಡದ ಸ್ಟಾರ್ ಆಲ್ರೌಂಡರ್ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.
ಟೂರ್ನಿಯಿಂದಲೇ ಗ್ರೀನ್ ಔಟ್
ಗಾಯಕ್ಕೆ ತುತ್ತಾಗಿರೋ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಮತ್ಯಾರು ಅಲ್ಲ, ಕ್ಯಾಮರೂನ್ ಗ್ರೀನ್. ಇವರು ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಹೊರಗುಳಿಯೋದು ಪಕ್ಕಾ ಅನ್ನೋ ಮಾಹಿತಿ ಲಭ್ಯವಾಗಿದೆ. ಇವರು ಭಾರತ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರ ನಡೆದ್ರೆ ಆಸ್ಟ್ರೇಲಿಯಾಗೆ ದೊಡ್ಡ ಆಘಾತ ಎದುರಾಗಲಿದೆ.
ಇದನ್ನೂ ಓದಿ: ಒಂದೇ ಕಲ್ಲಲ್ಲಿ 3 ಹಕ್ಕಿ ಹೊಡೆಯೋ ಪ್ಲಾನ್; ಆರ್ಸಿಬಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ಹೊಸ ಕ್ಯಾಪ್ಟನ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ